ಲೋಕಸಭೆ ಚುನಾವಣೆ ಮತಗಟ್ಟೆ  ಶಾಲೆಗಳಿಗೆ ಸೌಲಭ್ಯ ಭಾಗ್ಯ!


Team Udayavani, Mar 22, 2019, 1:00 AM IST

matagatte-shale.jpg

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತಗಟ್ಟೆಗಳಾಗಿ ಘೋಷಿಸಿರುವ 19,953 ಸರಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು 34.18 ಕೋ.ರೂ.ಗಳನ್ನು ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಬಿಡುಗಡೆ ಮಾಡಿದೆ. 

ವಿವಿಧ ರೀತಿಯ ಮೂಲ ಸೌಕರ್ಯಗಳಿಂದ ನಲುಗುತ್ತಿರುವ ಗ್ರಾಮಾಂತರ ಭಾಗದ ಸರಕಾರಿ ಶಾಲೆಗಳು ಚುನಾವಣೆಯ ನೆಪದಲ್ಲಿ ಸ್ವಲ್ಪ ಮಟ್ಟಿಗೆ ಮೇಲ್ದಜೆì ಗೇರಲಿವೆ. ಮತದಾನದ ದಿನ ಮತದಾರರಿಗೆ ಹಾಗೂ ಚುನಾವಣಾ ಸಿಬಂದಿಗೆ  ಸಮಸ್ಯೆ ಹಾಗೂ ಕೊರತೆ ಎದುರಾಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಮೂಲ ಸೌಲಭ್ಯ ಒದಗಿಸಲು ಸರಕಾರ ಸೂಚಿಸಿದೆ.

ಮತದಾರರಿಗೆ ಸಹಾಯವಾಗುವ ನೆಲೆಯಲ್ಲಿ ರ್‍ಯಾಂಪ್‌ ವ್ಯವಸ್ಥೆ ಮಾಡ ಬೇಕಿದೆ. ಈಗ ಇರುವ ರ್‍ಯಾಂಪ್‌ಗ್ಳನ್ನು ಸುಸ್ಥಿತಿಯಲ್ಲಿಡಬೇಕಾಗಿದೆ. ಶೌಚಾಲಯ ವ್ಯವಸ್ಥೆ ಕಡ್ಡಾಯ. ಕೆಲವು ಶಾಲೆಯಲ್ಲಿ ವಿದ್ಯುತ್‌ ಸಮಸ್ಯೆ ಇದ್ದು, ಸರಿಪಡಿಸಲು ಕ್ರಮ ಕೈಗೊಳ್ಳಬೇಕಿದೆ ಮತ್ತು ಪ್ಲಗ್‌ ಪಾಯಿಂಟ್‌ಗಳನ್ನು ಸುಸ್ಥಿತಿಯಲ್ಲಿಡ ಬೇಕಾಗಿದೆ. ಸದ್ಯ ರಾಜ್ಯದಲ್ಲಿ ಬೇಸಗೆ ಬೇಗೆ ಇದೆ. ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡ ಬೇಕಾಗಿದೆ. ಇವಿಷ್ಟು ತುರ್ತು ಮತ್ತು ಆವಶ್ಯಕವಾಗಿದ್ದು, ಜೋಡಿಸಿಕೊಳ್ಳಲು ಸರಕಾರವು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.

ಮತಗಟ್ಟೆಗಳನ್ನು ಸಜ್ಜುಗೊಳಿಸಬೇಕಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಂದ ಬೇಡಿಕೆ ಪಟ್ಟಿಯನ್ನು ಪಡೆದು ಕ್ರೋಡೀ ಕರಿಸಿ ಜಿಲ್ಲಾವಾರು ಮತಗಟ್ಟೆಯಾಗಿ ಆಯ್ಕೆಯಾಗಿರುವ 19,953 ಸರಕಾರಿ ಶಾಲೆಗಳಿಗೆ 3,418.74 ಲಕ್ಷ ರೂ. ಅನುದಾನ ಬೇಡಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರಂತೆ ಸರಕಾರ ಹಣ ಬಿಡುಗಡೆ ಮಾಡಿದೆ. 

ಉಳಿದ ಮತಗಟ್ಟೆಗಳ ಜವಾಬ್ದಾರಿ ಗ್ರಾಮ ಪಂಚಾಯತ್‌ಗೆ
ಉಳಿದ ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮತಗಟ್ಟೆ ಗಳಲ್ಲಿ ಮೂಲ ಸೌಕರ್ಯ ಗಳನ್ನು ಒದಗಿಸುವ ಜವಾಬ್ದಾರಿಯನ್ನು ಆಯಾ ಗ್ರಾಮ ಪಂಚಾಯತ್‌ಗಳಿಗೆ ನೀಡಲಾಗಿದೆ. 

ಸರಕಾರಿ ಶಾಲೆಗಳಲ್ಲಿ ಚುನಾವಣೆ ದಿನಾಂಕಕ್ಕೆ ಒಂದು ವಾರದ ಮುಂಚಿತವಾಗಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಪಾಸಣೆ ನಡೆಸಿ ಮೂಲ ಸೌಕರ್ಯಗಳು ಸುಸಜ್ಜಿತವಾಗಿ ಇರುವುದನ್ನು ಖಚಿತಪಡಿಸಬೇಕು. ಒಂದು ವೇಳೆ ಮತದಾನ ದಿನ ಮತಗಟ್ಟೆಯಾಗಿರುವ ಸರಕಾರಿ ಶಾಲೆಗಳಲ್ಲಿ ಸೌಕರ್ಯದ ಕೊರತೆ ಕಂಡುಬಂದಲ್ಲಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. 

ಆಯಾ ವ್ಯಾಪ್ತಿಯ  ಗ್ರಾ.ಪಂ.ಗೆ ಸೂಚನೆ
ಚುನಾವಣೆಯ ಹಿನ್ನೆಲೆಯಲ್ಲಿ ಮತಗಟ್ಟೆಯಾಗಿರುವ ಸರಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ದ.ಕ. ಜಿಲ್ಲೆಗೆ ಒಟ್ಟು 63.44 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಉಳಿದ ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಆಯಾ ವ್ಯಾಪ್ತಿಯ ಗ್ರಾ.ಪಂ.ಗೆ ನಿರ್ದೇಶನ ನೀಡಲಾಗಿದೆ.
– ಶಶಿಕಾಂತ ಸೆಂಥಿಲ್‌, ಜಿಲ್ಲಾಧಿಕಾರಿ ದ.ಕ.

ಕರಾವಳಿಗೆ 1.12 ಕೋ.ರೂ.
ದ.ಕ. ಜಿಲ್ಲೆಯಲ್ಲಿ  ಮತಗಟ್ಟೆಗಳಾಗಿ ಘೋಷಿಸಿರುವ 273 ಸರಕಾರಿ ಶಾಲೆಗಳಿಗೆ 63.44 ಲಕ್ಷ ರೂ. ಮತ್ತು ಉಡುಪಿ ಜಿಲ್ಲೆಯ 307 ಸರಕಾರಿ ಶಾಲೆಗಳಿಗೆ 48.91 ಲಕ್ಷ ಅನುದಾನ ಬಿಡುಗಡೆಯಾಗಿದೆ. ಕರಾವಳಿಯ 580 ಮತಗಟ್ಟೆ ಸರಕಾರಿ ಶಾಲೆಗಳಿಗೆ ಒಟ್ಟು 1.12 ಕೋ.ರೂ. ಅನುದಾನ ಲಭ್ಯವಾದಂತಾಗಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.