ಪರಾಮರ್ಶೆ: ಸಚಿವ ಖಾದರ್
Team Udayavani, May 26, 2019, 6:10 AM IST
ಮಂಗಳೂರು: ಚುನಾವಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಸೋಲನುಭವಿಸಿದ ಬಗ್ಗೆ ಜಿಲ್ಲಾ ಮಟ್ಟದಲ್ಲಿ, ವಿಧಾನ ಸಭಾ ಕ್ಷೇತ್ರವಾರು ಮತ್ತು ಬ್ಲಾಕ್ ಮಟ್ಟದಲ್ಲಿ ಪರಾಮರ್ಶೆ ನಡೆಸಲಾಗುವುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಿಥುನ್ ರೈ ಗೆಲ್ಲಬೇಕೆಂದು ನಾವೆಲ್ಲ ಶ್ರಮಿಸಿದ್ದೆವು. ಆದರೆ ಅನಿರೀಕ್ಷಿತ ಫಲಿತಾಂಶ ಬಂದಿದೆ. ಸೋಲು ಶಾಶ್ವತವಲ್ಲ; ಸಂವಿಧಾನದ ಚೌಕಟ್ಟಿನಲ್ಲಿ ಜನರ ಸೇವೆ ಮತ್ತು ದೇಶ ಸೇವೆ ಮಾಡಲು ಕಟಿಬದ್ಧರಾಗಿದ್ದೇವೆ ಎಂದವರು ಶನಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಚುನಾವಣೆಯಲ್ಲಿ ಗೆದ್ದ ಮೋದಿ ಮತ್ತು ನಳಿನ್ ಅವರನ್ನು ಅಭಿನಂದಿಸಿದ ಖಾದರ್, ಮೋದಿಯವರು ನಳಿನ್ಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು. ಮೋದಿ ಸರಕಾರ ಐದು ವರ್ಷಗಳಲ್ಲಿ ಈಡೇರಿಸದೆ ಇರುವ ಪ್ರತಿ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ನೀಡುವ ಭರವಸೆ ಈಗಲಾದರೂ ಈಡೇರಿಸಲಿ; ಪೆಟ್ರೋಲ್, ಡೀಸೆಲ್ ಬೆಲೆ ಸೆಂಚುರಿ ಬಾರಿಸದಿರಲಿ, ಯುವಜನರಿಗೆ ಉದ್ಯೋಗ ಒದಗಿಸಲಿ, ಸೈನಿಕರಿಗೂ ಜನರಿಗೂ ರಕ್ಷಣೆ ದೊರೆಯುವಂತಾಗಲಿ ಎಂದು ಆಶಿಸಿದರು.
ಸರಕಾರ ಸುಭದ್ರ
ರಾಜ್ಯದ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ. ಬಿಜೆಪಿಯವರು ವರ್ಷದಿಂದ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದರೂ ಯಶಸ್ವಿಯಾಗಿಲ್ಲ; ಈಗಲೂ ಆಗಲಾರರು. ಅಪಪ್ರಚಾರ ಮಾಡಿ ಕಾಂಗ್ರೆಸ್- ಜೆಡಿಎಸ್ ಪ್ರತ್ಯೇಕಿಸುವ ಯತ್ನ ಫಲಿಸದು, ಎರಡೂ ಪಕ್ಷಗಳು ಒಗ್ಗಟ್ಟಿನಲ್ಲಿವೆ. ರಾಜ್ಯದ ಅಭಿವೃದ್ಧಿಗೆ ಜರಪರ ಕಾರ್ಯಕ್ರಮಗಳನ್ನು ನೀಡಿ 5 ವರ್ಷಗಳ ಆಡಳಿತವನ್ನು ಪೂರ್ತಿಗೊಳಿಸಲಿದೆ ಎಂದು ಸಚಿವ ಖಾದರ್ ಹೇಳಿದರು.
ಮರಳುಗಾರಿಕೆಗೆ ಸಂಬಂಧಿಸಿ ಆ್ಯಪ್ ವ್ಯವಸ್ಥೆ ಜಾರಿಗೊಳಿಸಿದ್ದು, ಇದರಿಂದ ಜನರಿಗೆ ಮತ್ತು ಮರಳುಗಾರಿಕೆ ನಡೆಸುವ ಮಂದಿಗೆ ಮತ್ತು ಲಾರಿ ಮಾಲಕರಿಗೆ ಅನುಕೂಲವಾಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಸದಾಶಿವ ಉಳ್ಳಾಲ್, ಮಮತಾ ಗಟ್ಟಿ, ಭಾಸ್ಕರ್ ಕೆ., ಸಂತೋಷ್ ಶೆಟ್ಟಿ, ಪ್ರತಾಪ್ ಮಲ್ಲಿ, ಈಶ್ವರ ಉಳ್ಳಾಲ್, ಮಲಾರ್ ಮೋನು, ನಜೀರ್ ಬಜಾಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ