ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಲೋಕಾಯುಕ್ತ ಎಸ್ಪಿ ಭೇಟಿ
Team Udayavani, Nov 20, 2017, 3:55 PM IST
ಬೆಳ್ತಂಗಡಿ: ಸರಕಾರಿ ಆಸ್ಪತ್ರೆಗಳಲ್ಲಿ ಸಮರ್ಪಕ ಚಿಕಿತ್ಸೆ ದೊರೆಯುತ್ತಿದೆಯೇ ಎಂದು ಲೋಕಾಯುಕ್ತ ಎಸ್ಪಿ ರಶ್ಮಿ ಅವರು ಶನಿವಾರ ಇಲ್ಲಿನ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಆಸ್ಪತ್ರೆಯ ಶವಾಗಾರ , ಅಡುಗೆ ಕೋಣೆ ಸ್ವತ್ಛತೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಡಯಾಲಿಸಿಸ್ ಕೇಂದ್ರಕ್ಕೆ 40 ಜನ ನೋಂದಾಯಿಸಿದ್ದರೂ ವಾರದಲ್ಲಿ 16 ಜನರಿಗಷ್ಟೇ ಮಾಡಲು ಸಾಧ್ಯವಾಗುತ್ತಿದ್ದು ಈ ಬಗ್ಗೆ ಬದಲಿ ವ್ಯವಸ್ಥೆಗೆ ಮುತುವರ್ಜಿ ವಹಿಸಿ ಎಂದು ಆಡಳಿತ ವೈದ್ಯಾಧಿಕಾರಿ ಡಾ| ಗೌತಮ್ ಅವರಿಗೆ ಹೇಳಿದರು.
ಬಳಿಕ ಮಾಧ್ಯಮದ ಜತೆ ಮಾತನಾಡಿದ ಎಸ್ಪಿ ಅವರು, ಆಸ್ಪತ್ರೆ, ಅಂಗನವಾಡಿ ಹಾಗೂ ಎಸ್ಸಿಎಸ್ಟಿ ಹಾಸ್ಟೆಲ್ಗಳಿಗೆ ನಿರಂತರ ಭೇಟಿ ನೀಡುತ್ತಿದ್ದು ಸರಕಾರದ ಸೌಲಭ್ಯ ಸರಿಯಾಗಿ ವಿತರಣೆಯಾಗುತ್ತಿದ್ದೆಯೇ ಎಂದು ಪರಿಶೀಲಿಸುತ್ತಿದ್ದೇವೆ. ಅಧಿಕಾರಿಗಳು ಪ್ರತಿ ತಿಂಗಳು ಎಲ್ಲ ತಾಲೂಕಿನಲ್ಲಿ ಅಹವಾಲು ಸ್ವೀಕಾರ ನಡೆಸುತ್ತಿದ್ದಾರೆ. ಸರಕಾರದ ಅಕ್ಕಿ, ಬೇಳೆ ಇತ್ಯಾದಿಗಳನ್ನು ಅಕ್ರಮ ದಾಸ್ತಾನಿಟ್ಟರೆ ಸಾರ್ವಜನಿಕರು ಮಾಹಿತಿ ನೀಡಬಹುದು ಎಂದರು. ಲೋಕಾಯುಕ್ತ ಇನ್ಸ್ಪೆಕ್ಟರ್ ವಿವೇಕಾನಂದ, ಸಿಬಂದಿ ಹರಿಶ್ಚಂದ್ರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್