ಮತಯಂತ್ರದೊಂದಿಗೆ ಮತಗಟ್ಟೆಯತ್ತ ಹೆಜ್ಜೆಹಾಕಿದ ಸಿಬಂದಿ

ಲೋಕಸಭಾ ಚುನಾವಣೆ: ಉಭಯ ತಾಲೂಕುಗಳಲ್ಲಿ ಮಸ್ಟರಿಂಗ್‌ ಕಾರ್ಯ

Team Udayavani, Apr 18, 2019, 6:00 AM IST

5

ಸಿಬಂದಿಗೆ ಮತಯಂತ್ರಗಳೊಂದಿಗೆ ಮತಗಟ್ಟೆಗಳಿಗೆ ತೆರಳಲು ವಾಹನಗಳನ್ನು ವ್ಯವಸ್ಥೆ ಮಾಡಲಾಗಿತ್ತು.

ಬಂಟ್ವಾಳ: ದ.ಕ. ಲೋಕಸಭಾ ಚುನಾವಣೆಗೆ ಬುಧವಾರ ಮೊಡಂಕಾಪು ಮೊಡಂಕಾಪು ಇನೆ#ಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಸ್ಟರಿಂಗ್‌ ಕಾರ್ಯ ನಡೆಯಿತು. ಬಂಟ್ವಾಳ ಕ್ಷೇತ್ರದ 249 ಮತಗಟ್ಟೆಗಳಿಗೆ ಸಿಬಂದಿಯು ಮತದಾನ ಪ್ರಕ್ರಿಯೆಗೆ ಬೇಕಾದ ಇವಿಎಂ ಯಂತ್ರಗಳ ಸಹಿತ ವಿವಿಧ ಸಲಕರಣೆಗಳೊಂದಿಗೆ ತಮ್ಮ ಮತಗಟ್ಟೆಗಳಿಗೆ ತೆರಳಿದರು.

15 ಮತಗಟ್ಟೆಗಳಲ್ಲಿ ವೀಡಿಯೋ
ವಿಧಾನಸಭಾ ಕ್ಷೇತ್ರದಲ್ಲಿ 85 ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳನ್ನು ವಿಂಗಡಿಸಿ ಗುರುತು ಮಾಡಿದ್ದು, 35 ಮತಗಟ್ಟೆಗಳಲ್ಲಿ ಮೈಕ್ರೋ ಅಫೀಸರ್‌ಗಳನ್ನು ನೇಮಕ ಮಾಡಲಾಗಿದೆ. 17 ಕಡೆಗಳಲ್ಲಿ ನೇರವಾಗಿ ವೆಬ್‌ ಕಾಸ್ಟಿಂಗ್‌ ಸಿಸ್ಟಮ್‌ ವ್ಯವಸ್ಥೆ ಮಾಡಲಾಗಿದೆ. 15 ಮತಗಟ್ಟೆಗಳಲ್ಲಿ ಪೂರ್ಣ ಪ್ರಮಾಣದ ವೀಡಿಯೋ ಗ್ರಾಫರ್‌ಗಳನ್ನು ನೇಮಿಸ ಲಾಗಿದೆ ಎಂದು ಎಆರ್‌ಒ ಮಹೇಶ್‌ ಮಾಹಿತಿ ನೀಡಿದರು.

ಬಂಟ್ವಾಳದ ಲೊರೆಟ್ಟೋ ಹಿ.ಪ್ರಾ.ಶಾಲೆಯನ್ನು ಸಖೀ ಮತಗಟ್ಟೆ ಎಂದು ಪರಿಗಣಿಸಿ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ. ಪ್ರತಿ ಮತಗಟ್ಟೆಗಳಲ್ಲಿ ಬಿಎಲ್‌ಒ, ಬೂತ್‌ ಲೆವಲ್‌ ಅಸಿಸ್ಟೆಂಟ್‌ ಸಿಬಂದಿಯನ್ನು ನೇಮಕ ಮಾಡಲಾಗಿದೆ.

ಅಂಗವಿಕಲರಿಗೆ ವೀಲ್‌ಚೇರ್‌
ಮತ ಚಲಾವಣೆಗೆ ಬರುವ ಅಂಗ ವಿಕಲರಿಗೆ ಮತಗಟ್ಟೆಗೆ ಬರಲು ವೀಲ್‌ಚೇರ್‌ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿರುವ ಸಿಬಂದಿಗೆ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಜತೆ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ.

ಅಧಿಕಾರಿಗಳಿಂದ ಮಾರ್ಗದರ್ಶನ
ರಾಜ್ಯ ಚುನಾವಣ ಪರಿವೀಕ್ಷಕ, ಜಿ.ಪಂ. ಸಿಇಒ ಡಾ| ಸೆಲ್ವಮಣಿ, ಚುನಾವಣಾಧಿಕಾರಿ ಎಸ್‌.ಸಿ. ಮಹೇಶ್‌, ತಹಶೀಲ್ದಾರ್‌ ಸಣ್ಣ ರಂಗಯ್ಯ ಮತ್ತು ತಾ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಅವರು ಮಸ್ಟರಿಂಗ್‌ ಕಾರ್ಯ ನಡೆಯುತ್ತಿದ್ದ ಸಂದರ್ಭ ಉಪಸ್ಥಿತರಿದ್ದು ಮಾರ್ಗದರ್ಶನ ಮಾಡಿದರು.

“ಸಖಿ’ ಜನಸ್ನೇಹಿ ಮತದಾನ ಕೇಂದ್ರ
ಅಮಾrಡಿ ಗ್ರಾಮದ ಲೊರೆಟ್ಟೋ ಖಾಸಗಿ ಹಿ. ಪ್ರಾ. ಶಾಲೆಯನ್ನು ಜನಸ್ನೇಹಿ ಮತದಾನ ಕೇಂದ್ರ ಸಖಿ ಎಂದು ಹೆಸರಿಸಿ ವಿಶೇಷವಾಗಿ ಶೃಂಗರಿಸಲಾಗಿದೆ. ಅಮಾrಡಿ ಗ್ರಾಮ ಮತ್ತು ಕೇಪು ಗ್ರಾಮದ ಸ.ಹಿ.ಪ್ರಾ. ಶಾಲೆಗಳನ್ನು ಜನಸ್ನೇಹಿ ಮತಗಟ್ಟೆಗಳಾಗಿ ಪರಿವರ್ತಿಸಲಾಗಿದೆ. ಕೇಪು ಗ್ರಾಮ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿದ್ದರೂ ಪುತ್ತೂರು ವಿಧಾನಸಭಾ ಕ್ಷೇತ್ರವಾಪ್ತಿಗೆ ಬರುವುದಾಗಿ ಸಹಾಯಕ ಚುನಾವಣಾಧಿಕಾರಿ
ಇ.ಒ. ರಾಜಣ್ಣ ತಿಳಿಸಿದ್ದಾರೆ. ಸಖಿ ಮತದಾನ ಕೇಂದ್ರದಲ್ಲಿ ಚುನಾವಣಾಧಿಕಾರಿ ಸಹಿತ ಎಲ್ಲರೂ ಮಹಿಳಾ ಸಿಬಂದಿ ಇರುತ್ತಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.