“ಸೋಲು, ಕಷ್ಟ, ನಷ್ಟಗಳನ್ನು ಮನಗಂಡರೆ ಸಾಧನೆ’
Team Udayavani, May 7, 2019, 6:00 AM IST
ಡಾ| ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿದರು.
ನೆಹರೂನಗರ: ಪ್ರತಿಯೊಬ್ಬನ ಜೀವನ ಶೂನ್ಯದಿಂದ ಆರಂಭವಾದರೆ ಬದುಕಿನಲ್ಲಿ ಯಶಸ್ಸು ಖಂಡಿತ. ಸೋಲು, ಕಷ್ಟ, ನಷ್ಟಗಳನ್ನು ಮನಗಂಡರೆ ಸಾಧನೆ ಸುಲಭ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.
ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದ ಅಂತಿಮ ವರ್ಷದ ಸ್ನಾತ ಕೋತ್ತರ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳ ಮೂಲಕ ಸಾಧನೆಯನ್ನು ಮಾಡಿ ಹೆಸರು ಗಳಿಸಬಹುದು. ಸಮಾಜದಲ್ಲಿ ವ್ಯಕ್ತಿತ್ವಕ್ಕೆ ಮೊದಲ ಗೌರವ. ಹಾಗಾಗಿ ಆತನ ಗುಣ, ನಡತೆ ಅಥವಾ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಪ್ರತಿಯೊಬ್ಬನ ಕೆಲಸ. ಯಾವುದೇ ವ್ಯಕ್ತಿ ಸಮಾಜದಲ್ಲಿ ಮುಂದೊಂದು ದಿನ ದೊಡ್ಡ ವ್ಯಕ್ತಿಯಾದಾಗ ಜೀವನ ಕ್ರಮವನ್ನು ಅರ್ಥ ಮಾಡಿಕೊಂಡು ಜೀವಿಸಬೇಕು ಎಂದು ಹೇಳಿದರು.
ಮೌಲ್ಯಯುತ ಶಿಕ್ಷಣ
ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದ ಸಂಯೋಜಕಿ
ಡಾ| ವಿಜಯಾ ಸರಸ್ವತಿ ಮಾತನಾಡಿ, ಕಾಲೇಜಿನಲ್ಲಿ ಪಠ್ಯ ವಿಷಯದ ಜೊತೆಗೆ ಜೀವನ ನಡೆಸುವ ಮೌಲ್ಯಯುತ ಶಿಕ್ಷಣವನ್ನು ಪಡೆಯುವ ಅವಕಾಶ ಲಭಿಸಿದೆ. ಇವುಗಳನ್ನು ಸರಿಯಾಗಿ ಜೀವನದಲ್ಲಿ ಉಪಯೋಗಿಸಿಕೊಂಡು ಸಾಧನೆ ಮಾಡುವಂತಾಗಲಿ ಎಂದರು.
ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ವಿಜಯ ಗಣಪತಿ ರಮೇಶ ಕಾರಂತ ಶುಭಹಾರೈಸಿದರು. ಸ್ನಾತಕೋತ್ತರ ವಾಣಿಜ್ಯ, ರಸಾಯನಶಾಸ್ತ್ರ, ಪತ್ರಿಕೋ ದ್ಯಮ ವಿಭಾಗದ ಉಪ ನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಮಧುರಾ ಸ್ವಾಗತಿಸಿ, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಲಕ್ಷ್ಮೀ ವಂದಿಸಿ ದರು. ಉಪನ್ಯಾಸಕಿಯರಾದ ಅನನ್ಯಾ ಮತ್ತು ರಾಧಿಕಾ ಕಾನತ್ತಡ್ಕ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ