ಕಡಿಮೆ ಪರಿಶ್ರಮದ ಬೆಳೆ ದೀವಿ ಹಲಸು
Team Udayavani, May 26, 2019, 6:10 AM IST
ದೀವಿ ಹಲಸು ಒಂದು ಜನಪ್ರಿಯ ತರಕಾರಿ. ಅವಿಭಜಿತ ದಕ್ಷಿಣ ಕನ್ನಡ, ಮಲೆನಾಡು, ಕೊಡಗು ಮೊದಲಾದ ಕಡೆಗಳಲ್ಲಿ ಇದನ್ನು ತೆಂಗು, ಅಡಿಕೆ ತೋಟಗಳ ಮಧ್ಯೆ ಬೆಳೆಯಲಾಗುತ್ತದೆ.
ಅತ್ಯಂತ ಕಡಿಮೆ ಪರಿಶ್ರಮ, ಖರ್ಚು, ಆರೈಕೆ ಅಗತ್ಯವಿರುವ ದೀವಿ ಹಲಸಿನ ಬೇಸಾಯ ತೀರಾ ಸರಳ. ಮನೆಯ ಸುತ್ತಮುತ್ತ ಖಾಲಿ ಜಾಗ ಇದ್ದಲ್ಲಿ ಇದನ್ನು ನೆಟ್ಟು ಬೆಳೆಸಬಹುದು. ಇದೊಂದು ವಿಶಾಲವಾಗಿ ಕೊಂಬೆಗಳನ್ನು ಚಾಚಿ ಬೆಳೆಯುವ ಮರವಾಗಿದ್ದು, ಸುಮಾರು 15ರಿಂದ 20 ಮೀಟರ್ಗಳಷ್ಟು ಎತ್ತರಕ್ಕೆ ಬೆಳೆಯುತ್ತದೆ.
ದೀವಿ ಹಲಸು ಮೋರೆಸಿ ಸಸ್ಯ ಕುಟುಂಬಕ್ಕೆ ಸೇರಿದ್ದು, ಇದರ ವೈಜ್ಞಾನಿಕ ಹೆಸರು ಆಟೋìಕಾರ್ಪಸ್ ಆಲ್ತಿಲಿಸ್. ಇದು ಹಲಸಿನ ಮರದ ವರ್ಗಕ್ಕೆ ಸೇರಿದರೂ ದೀವಿ ಹಲಸಿನಲ್ಲಿ ಬೀಜಗಳಿಲ್ಲ, ಮೇಣವೂ ಕಡಿಮೆ. ಹಾಗಾಗಿ ಗುಣಧರ್ಮದಲ್ಲಿ ವೈರುಧ್ಯಗಳಿವೆ.
ಕನ್ನಡದಲ್ಲಿ ದೀವಿ ಹಲಸು, ತುಳುವಿನಲ್ಲಿ ಜೀಗುಜ್ಜೆ, ಆಂಗ್ಲ ಭಾಷೆಯಲ್ಲಿ ಬ್ರೆಡ್ ಫ್ರುಟ್, ತಮಿಳಿನಲ್ಲಿ ಕರಿಪಾಲ ಎಂದು ಕರೆಯುತ್ತಾರೆ. ಬೇರಿನಿಂದಲೇ ಸಸ್ಯಾಭಿವೃದ್ಧಿ ಮಾಡುವ ಕಾರಣ ಬೇರು ಹಲಸು ಎಂದೂ ಕರೆಯಲಾಗುತ್ತದೆ. ದೀವಿ ಹಲಸಿನಲ್ಲಿ ವಿಟಮಿನ್ ಸಿ, ಅಯೋಡಿನ್, ಕಾರ್ಬನ್, ಹೈಡ್ರೇಟ್, ಶರ್ಕರ ಪಿಷ್ಟ, ಕ್ಯಾಲ್ಸಿಯಂ, ಕ್ಯಾರೊಟಿನ್ ಮೊದಲಾದವುಗಳು ಅಧಿಕ ಪ್ರಮಾಣದಲ್ಲಿವೆ.
ಕೃಷಿ ಹೇಗೆ?
ದೀವಿ ಹಲಸಿನ ಸಸ್ಯಾಭಿವೃದ್ಧಿಯನ್ನು ಸಾಮಾನ್ಯವಾಗಿ ಬೇರುಗಳಿಂದ ಮಾಡಲಾಗುತ್ತದೆ. ನೆಲದ ಆಳದಲ್ಲಿ ಹರಡಿ ಬೆಳೆಯುವ ಗಿಡದ ಬೇರನ್ನು ಸ್ವಲ್ಪ$ ಗಾಯಗೊಳಿಸಿ ಅನಂತರ ಅದನ್ನು ಮಣ್ಣಿನಿಂದ ಮುಚ್ಚಬೇಕು. ತೇವಾಂಶ ನೋಡಿ ಕೊಂಡು ನೀರು ಹಾಕಬೇಕು. ಗಾಯಗೊಳಿಸಿದ ಜಾಗದಿಂದ ಚಿಗುರೊಡೆದು ಗಿಡವಾಗುತ್ತದೆ. ಗಿಡದ ಬೇರನ್ನು ಉಳಿಯುವಂತೆ ಮಾಡಿ, ಬೇರು ಸಹಿತ ಸಸ್ಯವನ್ನು ಕತ್ತರಿಸಿ ಕುಂಡದಲ್ಲಿ ನೆಟ್ಟು ಬೆಳೆಸಿ, ಅನಂತರ ಸೂಕ್ತ ಸ್ಥಳದಲ್ಲಿ ಎರಡು ಅಡಿ ಉದ್ದ ಮತ್ತು ಅಗಲ ಹಾಗೂ ಒಂದೂವರೆ ಅಡಿ ಆಳದ ಗುಂಡಿ ತೋಡಿ ಅದಕ್ಕೆ ಸುಡುಮಣ್ಣು ಮಿಶ್ರ ಮಾಡಿ ನೆಡಬೇಕು. ಬಳಿಕ ಗಿಡ ಚೆನ್ನಾಗಿ ಚಿಗುರುವ ವರೆಗೆ ಪ್ರತಿ ದಿನ ಸ್ವಲ್ಪ ನೀರುಣಿಸುವುದು ಉತ್ತಮ. ಬಳಿಕ ಅದಕ್ಕೆ ಹಟ್ಟಿಗೊಬ್ಬರ, ಸೊಪ್ಪು, ಹಾಕಿದರೆ ಗಿಡ ಚೆನ್ನಾಗಿ ಬೆಳೆಯುವುದು. ಗಿಡನೆಟ್ಟು ನಾಲ್ಕೈದು ವರ್ಷಗಳಲ್ಲಿ ಕಾಯಿ ಬಿಡಲಾರಂಭಿಸುತ್ತದೆ. 15- 20 ವರ್ಷಗಳವರೆಗೂ ಫಲ ನೀಡುತ್ತದೆ. ಸ್ಥಳೀಯ ತಳಿಯಲ್ಲದೇ ಕಸಿ ಕಟ್ಟುವ ಮೂಲಕ ಕೆಲವೊಂದು ಹೈಬ್ರಿಡ್ ತಳಿಗಳನ್ನೂ ಈಗ ಅಭಿವೃದ್ಧಿ ಪಡಿಸಲಾಗಿದೆ.
ಹವಾಗುಣ, ಮಣ್ಣು
ನೀರು ಹರಿಯುತ್ತಿರುವ ಹಳ್ಳಗಳ ಬದಿ, ತೋಟದ ತಂಪು ವಾತಾವರಣ ಬೆಳೆಗೆ ಅವಶ್ಯ. ಬೇಸಗೆಯಲ್ಲಿ ಬಿಸಿಲಿನ ಝಳ ಹೆಚ್ಚಾದರೆ ದೀವಿ ಹಲಸು ಪಕ್ವವಾಗುವ ಮೊದಲೇ ಬಾಡಿ ಬೀಳುವುದುಂಟು. ಕಪ್ಪು, ಕೆಂಪು ಸಹಿತ ಅಧಿಕ ತೇವಾಂಶವಿರುವ ಮಣ್ಣಿನಲ್ಲಿ ಇದು ಚೆನ್ನಾಗಿ ಬೆಳೆಯುತ್ತದೆ.
ಗೊಬ್ಬರ, ಕಾಯಿಲೆ
ಹಟ್ಟಿಗೊಬ್ಬರ, ಆಡಿನ ಹಿಕ್ಕೆ, ಕೋಳಿ ಗೊಬ್ಬರ, ವಿವಿಧ ಹಿಂಡಿಗಳು, ಕುರಿಗೊಬ್ಬರ, ಸುಡುಮಣ್ಣು, ಸೊಪ್ಪು, ಸಾವಯವ ಗೊಬ್ಬರಗಳನ್ನು ಬಳಸಬಹುದು.
ಮಳೆಗಾಲದಲ್ಲಿ ದೀವಿ ಮರದ ಕೊಂಬೆಗಳಿಗೆ ಶಿಲೀಂಧ್ರ ರೋಗ ತಗುಲುವ ಸಾಧ್ಯತೆಯಿದೆ. ಅದರಿಂದ ಕೊಂಬೆಗಳು ಸಾಯಲಾರಂಭಿಸುತ್ತವೆ. ನಿವಾರಣೆಗೆ ಬೋಡೋì ದ್ರಾವಣದ ಸಿಂಪಡಣೆ, ರೋಗ ಬಂದ ಕೊಂಬೆ ಕತ್ತರಿಸಿ ಆ ಜಾಗಕ್ಕೆ ಬೋಡೋì ಮಿಶ್ರಣ ಹಚ್ಚುವುದು ಸೂಕ್ತ.
- ಗಣೇಶ ಕುಳಮರ್ವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ