ಆ. 15ರೊಳಗೆ ಅನಿಲಭಾಗ್ಯಕ್ಕೆ ಚಾಲನೆ: ಖಾದರ್‌


Team Udayavani, Jul 28, 2017, 12:10 PM IST

Khadar-U-T-650.jpg

– ಮಾರ್ಗಸೂಚಿ ಪ್ರಕಟ; ಉಚಿತ ಗ್ಯಾಸ್‌ ಸಂಪರ್ಕ, ಸ್ಟವ್‌ ವಿತರಣೆ
ಮಂಗಳೂರು: ರಾಜ್ಯ ಸರಕಾರದ ವತಿಯಿಂದ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಹಾಗೂ ಸ್ಟವ್‌ ನೀಡುವ ಯೋಜನೆ ಅನಿಲ ಭಾಗ್ಯಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು ಮಾರ್ಗಸೂಚಿ ಪ್ರಕಟಿಸಲಾಗಿದೆ. ಆ. 15ರೊಳಗೆ ಮುಖ್ಯಮಂತ್ರಿಯವರು ಈ ಯೋಜನೆಗೆ ಚಾಲನೆ ನೀಡುವರು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕ ಖಾತೆ ಸಚಿವ ಯು.ಟಿ. ಖಾದರ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಪಿಎಲ್‌ ಪಡಿತರ ಚೀಟಿ ಹಾಗೂ ಅಂತ್ಯೋದಯ ಪಡಿತರ ಚೀಟಿಗಳನ್ನು ಹೊಂದಿದ್ದು ಅನಿಲ ಸಂಪರ್ಕ ಹೊಂದಿರದವರು ಮುಖ್ಯಮಂತ್ರಿಗಳ ಅನಿಲಭಾಗ್ಯ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಇವರಿಗೆ ಅಡುಗೆ ಅನಿಲ ವಿತರಕರ ಮುಖಾಂತರ ಅನಿಲ ಸಂಪರ್ಕವನ್ನು ನೀಡಿ ಅನಂತರ ಅಡುಗೆ ಅನಿಲ ವಿತರಕರಿಗೆ ಖಜಾನೆ-2 ಮೂಲಕ ನೇರವಾಗಿ ಹಣವನ್ನು ವರ್ಗಾಯಿಸಲಾಗುತ್ತದೆ ಎಂದರು.

ಅರ್ಜಿ ಪ್ರಕ್ರಿಯೆ
ಅಂತ್ಯೋದಯ ಮತ್ತು ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ 18 ವರ್ಷ ಮೇಲ್ಪಟ್ಟ ಮಹಿಳಾ ಸದಸ್ಯರು, ಒಂದು ವೇಳೆ ಮಹಿಳಾ ಸದಸ್ಯರು ಇಲ್ಲದ ಪಕ್ಷದಲ್ಲಿ 18 ವರ್ಷ ಮೇಲ್ಪಟ್ಟ ಪುರುಷ ಸದಸ್ಯರು ಸಂಬಂಧಪಟ್ಟ ಖಾಸಗಿ ಫ್ರಾಂಚೈಸಿ, ತಾಲೂಕು ಕಚೇರಿ, ಗ್ರಾ.ಪಂ., ಜನಸ್ನೇಹಿ ಕೇಂದ್ರ, ಕರ್ನಾಟಕ ವನ್‌ ಮುಂತಾದ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವಾಗ ಅರ್ಜಿದಾರರ ಕುಟುಂಬದ ಎಲ್ಲ ಸದಸ್ಯರ ಆಧಾರ್‌ ಸಂಖ್ಯೆಯನ್ನು ಮುಖ್ಯಮಂತ್ರಿಗಳ ಅನಿಲಭಾಗ್ಯ ಯೋಜನೆಯ ತಂತ್ರಾಂಶದಲ್ಲಿ ನೋಂದಾಯಿಸಿ ತೈಲ ಕಂಪೆನಿ ವೆಬ್‌ಸೈಟ್‌ ಮುಖಾಂತರ ಎಲ್ಲ ಸದಸ್ಯರು ಅಡುಗೆ ಅನಿಲ ಸಂಪರ್ಕ ಹೊಂದದೆ ಇರುವ ಬಗ್ಗೆ ಪರಿಶೀಲಿಸಿ ಇಲಾಖೆಯಿಂದ ಪರಿಶೀಲನೆ ಮಾಡುವ ನಿಬಂಧನೆಗೊಳಪಟ್ಟು ಅರ್ಜಿದಾರರಿಗೆ ಹಿಂಬರಹ ನೀಡಲಾಗುತ್ತದೆ. ಅರ್ಜಿದಾರರು ತಮ್ಮ ಆಯ್ಕೆಯ ಅಡುಗೆ ಅನಿಲ ವಿತರಕರನ್ನು ಸಂಪರ್ಕಿಸಿ ಮಾಹಿತಿಯನ್ನು ನೀಡಬೇಕಾಗುತ್ತದೆ ಎಂದು ಸಚಿವರು ವಿವರಿಸಿದರು.

ಸಂಬಂಧಪಟ್ಟ ಅಡುಗೆ ಅನಿಲ ವಿತರಕರು ತಂತ್ರಾಂಶದ ಮುಖಾಂತರ ಅಡುಗೆ ಅನಿಲ ಸಂಪರ್ಕದ ಅರ್ಜಿಯನ್ನು ಜನರೇಟ್‌ ಮಾಡಲಾಗುತ್ತಿದೆ. ಅನಂತರ ಈ ಮಾಹಿತಿ ಸಂಬಂಧಪಟ್ಟ ಆಹಾರ ನಿರೀಕ್ಷಕರಿಗೆ ಲಾಗಿನ್‌ನಲ್ಲಿ ಲಭ್ಯವಾಗಲಿದ್ದು ಆಹಾರ ನಿರೀಕ್ಷಕರು ತೈಲ ಕಂಪೆನಿ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ ಅನುಮೋದನೆ ನೀಡುತ್ತಾರೆ. ಅನಿಲ ವಿತರಕರು ಕೆವೈಸಿ ಮುಖಾಂತರ ತಂತ್ರಾಂಶದಲ್ಲಿ ಅನಿಲ ಕಂಪೆನಿಗಳಿಗೆ ಅಪ್‌ಲೋಡ್‌ ಮಾಡಿದ ಅನಂತರ ತಂತ್ರಾಂಶವು ಅಡುಗೆ ಅನಿಲ ಸಂಪರ್ಕ ಬಿಡುಗಡೆ ಮಾಡಲು ಕನಿಷ್ಠ 3 ದಿನ ತೆಗೆದುಕೊಳ್ಳುತ್ತದೆ. ಅನಿಲ ವಿತರಕರು ಆಹಾರ ಇಲಾಖೆಯ ತಂತ್ರಾಂಶದ ಮುಖಾಂತರ ಮಾಹಿತಿಯನ್ನು ಅಪ್‌ಲೋಡ್‌ ಮಾಡಿ 7 ದಿನಗಳೊಳಗೆ ಅಡುಗೆ ಅನಿಲ ಸಂಪರ್ಕ ನೀಡಬೇಕಾಗುತ್ತದೆ. ಇದೇ ಅವಧಿಯೊಳಗೆ ಜಿಲ್ಲಾ ಆಡಳಿತವು ಫಲಾನುಭವಿಗಳಿಗೆ 2 ಬರ್ನರ್‌ಗಳ ಸ್ಟವ್‌ ನೀಡಲು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಚಿವ ಖಾದರ್‌ ವಿವರಿಸಿದರು.

ಉಸ್ತುವಾರಿ, ಮೇಲ್ವಿಚಾರಣೆ
ರಾಜ್ಯ ಮಟ್ಟದಲ್ಲಿ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಇದು ಯೋಜನೆಯ ಸಮಗ್ರ ಜಾರಿ ಬಗ್ಗೆ ಪರಿಶೀಲನೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ನಾಮನಿರ್ದೇಶಿತ ಸದಸ್ಯ ರನ್ನು ಒಳಗೊಂಡ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ರಚಿಸಲಾಗಿದೆ ಎಂದು ಖಾದರ್‌ ತಿಳಿಸಿದರು.

ಉಜ್ವಲ ಯೋಜನೆ: ನಿರ್ಲಕ್ಷ್ಯ ಸಲ್ಲದು
ಕೇಂದ್ರ ಸರಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಬಗ್ಗೆ ಜಿಲ್ಲೆಯಲ್ಲಿ ಇತ್ತೀಚೆಗೆ ಜರಗಿದ ಕಾರ್ಯಕ್ರಮವನ್ನು ಜಿಲ್ಲೆಯ ಜನಪ್ರತಿನಿಧಿಗಳನ್ನು ಬಿಟ್ಟು ನಡೆಸಲಾಗಿದೆ. ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಚಿವ ಖಾದರ್‌ ಅವರು, ಈ ಬಗ್ಗೆ ಈಗಾಗಲೇ ಯೋಜನೆಯ ರಾಜ್ಯ ಸಂಯೋಜಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.

ಅನಿಲಭಾಗ್ಯ ಸಂಪೂರ್ಣ ಉಚಿತ
ಸರಕಾರದ ವತಿಯಿಂದ ಮುಖ್ಯಮಂತ್ರಿಗಳ ಅನಿಲಭಾಗ್ಯ ಯೋಜನೆಯ ಫಲಾನುಭವಿಗಳಿಗೆ 1,940 ರೂ. ಮೌಲ್ಯದ ಉಚಿತ ಅಡುಗೆ ಅನಿಲ ಸಂಪರ್ಕದೊಂದಿಗೆ 999 ರೂ. ಮೌಲ್ಯದ 2 ಬರ್ನರ್‌ ಗ್ಯಾಸ್‌ಸ್ಟವ್‌ ಕೂಡ ಉಚಿತವಾಗಿ ನೀಡಲಾಗುತ್ತಿದೆ. ಗ್ಯಾಸ್‌ಸ್ಟವ್‌ ಮುಖ್ಯಮಂತ್ರಿಗಳ ಭಾವಚಿತ್ರ ಸಹಿತ ಅನಿಲಭಾಗ್ಯ ಯೋಜನೆಯ ಲಾಂಛನವನ್ನು ಹೊಂದಿರುತ್ತದೆ. ಅರ್ಜಿದಾರರು 20 ರೂ. ನೀಡಿ ಅರ್ಜಿ ನೋಂದಾಯಿಸಬೇಕಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ಯಾಸ್‌ ಸಂಪರ್ಕ ರಹಿತ 71,000 ಕುಟುಂಬಗಳನ್ನು ಗುರುತಿಸಲಾಗಿದೆ. ರಾಜ್ಯದಲ್ಲಿ 35,44,479 ಕುಟುಂಬಗಳಿವೆ. ಕೇಂದ್ರ ಸರಕಾರದ ಉಜ್ವಲ ಯೋಜನೆಯಲ್ಲಿ ಅಡುಗೆ ಅನಿಲ ಸಂಪರ್ಕ ಮಾತ್ರ ಉಚಿತವಾಗಿರುತ್ತದೆ. ಗ್ಯಾಸ್‌ಸ್ಟವ್‌ ನೀಡಿ ಅದರ ಮೊತ್ತವನ್ನು ಗ್ಯಾಸ್‌ ಸಬ್ಸಿಡಿಯಲ್ಲಿ ಪ್ರತಿ ತಿಂಗಳು ಕಡಿತ ಮಾಡಲಾಗುತ್ತದೆ. ಆದರೆ ಅನಿಲಭಾಗ್ಯ ಯೋಜನೆಯಲ್ಲಿ ಎಲ್ಲವೂ ಸಂಪೂರ್ಣ ಉಚಿತವಾಗಿರುತ್ತದೆ. ಉಜ್ವಲ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದವರು ಇದರಲ್ಲಿ ಅರ್ಜಿ ಸಲ್ಲಿಸಬಹುದು. ಆದರೆ ಅದರಲ್ಲಿ ಗ್ಯಾಸ್‌ ಸಂಪರ್ಕ ಪಡೆದವರಿಗೆ ಅವಕಾಶವಿರುವುದಿಲ್ಲ  ಎಂದು ಖಾದರ್‌ ತಿಳಿಸಿದರು.

ಟಾಪ್ ನ್ಯೂಸ್

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.