ಪ್ರಜ್ಞಾವಸ್ಥೆಯಲ್ಲಿರುವಾಗಲೇ ಶ್ವಾಸಕೋಶದ ಶಸ್ತ್ರಚಿಕಿತ್ಸೆ


Team Udayavani, Oct 11, 2019, 5:24 AM IST

u-35

ಪ್ರಜ್ಞಾವಸ್ಥೆಯಲ್ಲಿರುವಾಗಲೇ ಶ್ವಾಸಕೋಶದ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡ.

ಮಂಗಳೂರು: ರೋಗಿ ಪ್ರಜ್ಞಾವಸ್ಥೆಯಲ್ಲಿರುವಾಗಲೇ ಶ್ವಾಸ ಕೋಶದ ಶಸ್ತ್ರಚಿಕಿತ್ಸೆಯನ್ನು ನಗರದ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ವೈದ್ಯಕೀಯ ವಿಜ್ಞಾನ ದಲ್ಲಿ “ಅವೇಕ್‌ ಲಂಗ್‌ ಸರ್ಜರಿ’ ಎಂದು ಕರೆಯಲ್ಪಡುವ ಈ ಶಸ್ತ್ರಚಿಕಿತ್ಸೆಯು ತೀರಾ ಅಪರೂಪದ ಶಸ್ತ್ರಚಿಕಿತ್ಸೆ ಯಾಗಿದೆ.

ಬಂಟ್ವಾಳ ತಾಲೂಕಿನ 28 ವರ್ಷದ ಯುವಕನನ್ನು ತೀವ್ರ ಉಸಿರಾಟದ ತೊಂದರೆ ಮತ್ತು ಎರಡೂ ಕಾಲುಗಳ ದುರ್ಬಲತೆ ಸಮಸ್ಯೆಯಿಂದಾಗಿ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞರು ಕೂಲಂಕಷ ತಪಾಸಣೆಗೆ ನಡೆಸಿದಾಗ ಶ್ವಾಸಕೋಶದ ದಪ್ಪ ದ್ರವರೂಪಿ ಪೊರೆಯಿಂದ ಕೂಡಿದ ಲಾಕ್ಯುಲೇಟೆಡ್‌ ಎಂಪೈಮಾ (ಶ್ವಾಸಕೋಶದ ವೈಫಲ್ಯ) ಹಾಗೂ ನಿಯಂತ್ರಣ ಕಳೆದು ಕೊಂಡಿರುವ (ಡಿಮೈಲಿನೇಟಿಂಗ್‌ ಪಾಲಿ ನ್ಯೂರೋಪತಿ) ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂತು.

ಅತಿಕ್ಲಿಷ್ಟಕರವಾದ ಎದೆಯ ಮತ್ತು ಶ್ವಾಸಕೋಶದ ಶಸ್ತ್ರಚಿಕಿತ್ಸೆಗೆ ಸಂಪೂರ್ಣ ಅರಿವಳಿಕೆ ಅಗತ್ಯ. ಆದರೆ ತೀವ್ರತರ ವಾದ ಸಮಸ್ಯೆಯಿಂದ ಬಳಲುತ್ತಿದ್ದ ಈ ರೋಗಿಗೆ ಸಂಪೂರ್ಣ ಅರಿವಳಿಕೆ ಕೊಟ್ಟು ಶಸ್ತ್ರಚಿಕಿತ್ಸೆ ಅಸಾಧ್ಯವಾಗಿತ್ತು. ಅದರಿಂದ ರೋಗಿಯ ಪ್ರಾಣಕ್ಕೇ ಅಪಾಯದ ಸಾಧ್ಯತೆಯೂ ಇದ್ದುದ ರಿಂದ ಪ್ರಜ್ಞಾವಸ್ಥೆಯಲ್ಲಿಯೇ ಸ್ಥಳೀಯ ಅರಿವಳಿಕೆಯನ್ನು ನೀಡಿ ಶಸ್ತ್ರಕ್ರಿಯೆ ನಡೆಸಲಾಯಿತು.

ಎ.ಜೆ. ಆಸ್ಪತ್ರೆಯ ಹೃದಯ ಮತ್ತು ರಕ್ತನಾಳಗಳ ನುರಿತ ಉತ್ಸಾಹೀ ಶಸ್ತ್ರಚಿಕಿತ್ಸಕ ಡಾ| ಸಂಭ್ರಮ್‌ ಶೆಟ್ಟಿ, ಹೃದಯ ಶಸ್ತ್ರಚಿಕಿತ್ಸಕ ಡಾ| ಜಯಶಂಕರ್‌ ಮಾರ್ಲ, ಹೃದಯದ ಅರಿವಳಿಕೆ ತಜ್ಞ ಡಾ| ಗುರುರಾಜ್‌ ತಂತ್ರಿ, ಡಾ| ಸುಹಾಸ್‌ ಎಂ.ಕೆ. ಹಾಗೂ ಅನುಭವಿ ವೈದ್ಯೆàತರ ಸಿಬಂದಿಯ ಪ್ರಯತ್ನದಿಂದ ಈ ಸಾಹಸಪೂರ್ಣ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿ ಯಾಗಿ ಮಾಡಲಾಗಿದೆ. ರೋಗಿಯು ಶೀಘ್ರ ಚೇತರಿಸಿಕೊಂಡು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಪ್ರಶಾಂತ್‌ ಮಾರ್ಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.