ಮಾಝ್ ಮುನೀರ್ ನಂಟು: ತನಿಖೆಗೆ ರಾಜೇಶ್ ನಾೖಕ್ ಆಗ್ರಹ
Team Udayavani, Sep 23, 2022, 6:56 AM IST
ಬೆಂಗಳೂರು: ಇತ್ತೀಚೆಗೆ ಶಿವಮೊಗ್ಗದಲ್ಲಿ ಬಂಧಿಸಲಾದ ಶಂಕಿತ ಉಗ್ರರ ಪೈಕಿ ಮಾಝ್ ಮುನೀರ್ ಎಂಬಾತನ ದಕ್ಷಿಣ ಕನ್ನಡ ಜಿಲ್ಲೆಯ ನಂಟಿನ ಬಗ್ಗೆ ಸೂಕ್ತ ತನಿಖೆ ನಡೆಸಿ ಕಠಿನ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಆಗ್ರಹಿಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ರಾಜೇಶ್ ನಾಯಕ್, ಮಾಝ್ ಮುನೀರ್ನನ್ನು ಬುಧವಾರ ನನ್ನ ಕ್ಷೇತ್ರದ ನಾವೂರಿಗೆ ಕರೆದುಕೊಂಡು ಬಂದು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಬಾಂಬ್ ಸ್ಫೋಟದ ತರಬೇತಿ ನಡೆಯುತ್ತಿತ್ತು ಎಂಬ ವರದಿಗಳಿವೆ. ಸ್ಥಳೀಯರ ನೆರವು ಇಲ್ಲದೇ ಇದೆಲ್ಲ ಸಾಧ್ಯವಿಲ್ಲ. ಆತನಿಗೆ ಸ್ಥಳಾವಕಾಶ ಒದಗಿಸಿದ್ದು ಯಾರು? ನೆರವು ನೀಡಿದ ಸ್ಥಳೀಯರು ಎಂಬುದು ಗೊತ್ತಾಗಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಈ ಬಗ್ಗೆ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ