ಗೋಡೆಗಳಲ್ಲಿ ಮಧುಬನಿ ಚಿತ್ರಗಳ ಮೆರುಗು

ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆ

Team Udayavani, Apr 11, 2022, 11:19 AM IST

madhubani

ಬಂಟ್ವಾಳ: ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಮೂಲಸೌಕರ್ಯ ಸೇರಿದಂತೆ ಗುಣಮಟ್ಟದ ಶಿಕ್ಷಣದಲ್ಲಿ ಮಿಂಚಿರುವ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಗೋಡೆಗಳು ಇದೀಗ ಬಣ್ಣ ಬಣ್ಣದ ಚಿತ್ತಾರಗಳಿಂದ ಮಿಂಚುತ್ತಿದ್ದು, ಚಿತ್ರಕಲಾ ಶಿಕ್ಷಕರ ಕೈಚಳಕದಿಂದ ಮಧುಬನಿ ಚಿತ್ರಗಳ ಮೆರುಗು ಗೋಡೆಗಳಲ್ಲಿವೆ.

ಒಂದು ಕಾಲದಲ್ಲಿ ವಿದ್ಯಾರ್ಥಿಗಳಿಲ್ಲದೆ ಮುಚ್ಚುವ ಹಂತಕ್ಕೆ ತಲುಪಿದ್ದ ಸರಕಾರಿ ಶಾಲೆಯು ದಡ್ಡಲಕಾಡು ಶ್ರೀ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌ನಿಂದ ದತ್ತು ಪಡೆಯಲ್ಪಟ್ಟು, ನಿರಂತರವಾಗಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಹಂತ ಹಂತವಾಗಿ ಅಭಿವೃದ್ಧಿ ಕಂಡ ಶಾಲೆಯಂತೆಯೇ ಮುಂದೆ ಶಾಲೆಯ ಗೋಡೆಗಳು ಕೂಡ ಚಿತ್ತಾರಗಳಿಂದ ಆಕರ್ಷಣೆಯ ಕೇಂದ್ರಗಳಾಗಲಿವೆ.

ಶಾಲೆಯ ಕೆಳ ಅಂತಸ್ತಿನ ಗೋಡೆಗಳಲ್ಲಿ ಮಧುಬನಿ ಶೈಲಿಯ ಚಿತ್ರಗಳನ್ನು ಬಿಡಿಸಲಾಗಿದ್ದು, ಪ್ರಾಣಿ-ಪಕ್ಷಿ, ಚಿರತೆ ಮೊದ ಲಾದ ವರ್ಣರಂಜಿತ ಚಿತ್ರಗಳ ಜತೆಗೆ ಸಂಸ್ಕೃತಿ, ನಂಬಿಕೆ, ಆರಾಧನೆಯ ಚಿತ್ರಗಳು ಮಧುಬನಿಯ ಶೈಲಿಯ ಮೂಲಕ ಮೂಡಿಬಂದಿವೆ. ವಿವಿಧ ಬಗೆಯ ಸುಮಾರು 16 ಚಿತ್ರಗಳನ್ನು ರಚಿಸಲಾಗಿದ್ದು, ಮುಂದಿನ ಹಂತದಲ್ಲಿ ಇನ್ನಷ್ಟು ಚಿತ್ರಗಳು ಮೂಡಿಬರಲಿವೆ.

ತಾಲೂಕಿನ ವಿವಿಧ ಶಾಲೆಗಳ ಚಿತ್ರಕಲಾ ಶಿಕ್ಷಕರಾದ ಮುರಳೀಕೃಷ್ಣ ರಾವ್‌, ಬಾಲಕೃಷ್ಣ ಶೆಟ್ಟಿ, ಧನಂಜಯ ಪಿ., ಚೆನ್ನಕೇಶವ ಡಿ., ತಾರಾನಾಥ ಕೈರಂಗಳ, ಅಮೀನಾ ಶೇಖ್‌ ಅವರು ಕಳೆದ 10 ದಿನಗಳಿಂದ ಮಧುಬನಿ ಚಿತ್ರರಚನೆಯಲ್ಲಿ ತೊಡಗಿಸಿಕೊಂಡಿದ್ದು, ಈಗಾಗಲೇ ಚಿತ್ರ ರಚನೆಯ ಕಾರ್ಯ ಬಹುತೇಕ ಪೂರ್ಣಗೊಂಡಿದೆ.

ಶಿಕ್ಷಕರ ಜತೆಗೆ ಶಾಲೆಯ ವಿದ್ಯಾರ್ಥಿಗಳಾದ ಗೌರವ್‌, ಶ್ರೀಜಲ್‌, ಭೂಮಿಕಾ, ಯತೀಕ್ಷ್ ಅವರು ಕೂಡ ಚಿತ್ರಕಲಾ ಶಿಕ್ಷಕರಿಗೆ ಸಹಕಾರ ನೀಡಿದ್ದಾರೆ. ಶಾಲಾ ದತ್ತು ಸಂಸ್ಥೆಯ ಅಧ್ಯಕ್ಷ ಪ್ರಕಾಶ್‌ ಅಂಚನ್‌ ಹಾಗೂ ಶಾಲಾ ಮುಖ್ಯಶಿಕ್ಷಕ ರಮಾನಂದ ಅವರ ಮುತುವರ್ಜಿಯಲ್ಲಿ ಮಧುಬನಿ ಶೈಲಿಯ ಚಿತ್ರಗಳು ಗೋಡೆಯನ್ನು ಅಲಂಕರಿಸಿವೆ.

ಚಿತ್ರಕಲೆಯ ಆಸಕ್ತಿ ಮೂಡಲು ಸಾಧ್ಯ

ಶಾಲೆಯ ಗೋಡೆಗಳಲ್ಲಿ ಮಧುಬನಿ ಶೈಲಿಯ ಚಿತ್ರಗಳನ್ನು ಚಿತ್ರಕಲಾ ಶಿಕ್ಷಕರು ರಚಿಸಿದ್ದು, ಆಕರ್ಷಕವಾಗಿ ಮೂಡಿಬಂದಿದೆ. ಶಾಲೆಯ ಕೆಲವು ವಿದ್ಯಾರ್ಥಿಗಳು ಕೂಡ ಚಿತ್ರಗಳಿಗೆ ಬಣ್ಣ ತುಂಬುವ ಕಾರ್ಯ ನಡೆಸಿದ್ದಾರೆ. ಇದು ಇತರ ವಿದ್ಯಾರ್ಥಿಗಳಲ್ಲಿಯೂ ಚಿತ್ರಕಲೆಯ ಕುರಿತು ಆಸಕ್ತಿ ಮೂಡಲು ಕಾರಣವಾಗಲಿದೆ. ಇಂತಹ ಚಿತ್ರಗಳಿಂದ ಶಾಲೆಯ ಆಕರ್ಷಣೆ ಇನ್ನೂ ಹೆಚ್ಚಾಗಲಿದೆ. ಪ್ರಕಾಶ್‌ ಅಂಚನ್‌, ಅಧ್ಯಕ್ಷರು, ಶ್ರೀ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌, ದಡ್ಡಲಕಾಡು

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.