ಮಡಿಕೇರಿ ಪರ್ಯಾಯ ರಸ್ತೆ: ನ.ಪಂ. ವ್ಯಾಪ್ತಿಯಲ್ಲಿ ದುರಸ್ತಿಗೆ ಆಗ್ರಹ 


Team Udayavani, Aug 31, 2018, 11:50 AM IST

31-agust-6.jpg

ಸುಳ್ಯ: ಸುಳ್ಯ-ಮಡಿಕೇರಿ ಪರ್ಯಾಯ ರಸ್ತೆಯಾಗಿ ಬಳಕೆಯಲ್ಲಿರುವ ಸುಳ್ಯ-ಆಲೆಟ್ಟಿ-ಕರಿಕೆ ರಸ್ತೆಯಲ್ಲಿನ ಸುಳ್ಯ ನಗರ ವ್ಯಾಪ್ತಿಯಲ್ಲಿ ದುರಸ್ತಿಗಾಗಿ ಮಳೆ ಹಾನಿ ಯೋಜನೆಯಡಿ ಅನುದಾನ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ಣಯ ಮಾಡಿ ಕಳುಹಿಸಲು ನಿರ್ಧರಿಸಲಾಗಿದೆ. 

ನ.ಪಂ.ಸಾಮಾನ್ಯ ಸಭೆಯು ಅಧ್ಯಕ್ಷೆ ಶೀಲಾವತಿ ಮಾಧವ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನ.ಪಂ. ಸಭಾಂಗಣದಲ್ಲಿ ನಡೆಯಿತು. ಸದಸ್ಯ ಗೋಕುಲ್‌ದಾಸ್‌, ಕೆ.ಎಂ. ಮುಸ್ತಾಪ ಅವರು, ಮುಖ್ಯ ರಸ್ತೆಯ ತಿರುವಿನಿಂದ ನಾಗಪಟ್ಟಣ ಸೇತುವೆ ತನಕ ರಸ್ತೆ ಅವ್ಯವಸ್ಥೆ ಕುರಿತು ಪ್ರಸ್ತಾವಿಸಿದರು. ರಸ್ತೆಗೆ ತಾಗಿಕೊಂಡು ಹಾಕಿರುವ ಬೇಲಿ ತೆರವುಗೊಳಿಸಬೇಕು. ಎರಡು ವರ್ಷಗಳಿಂದ ಈ ಬಗ್ಗೆ ಮಾತನಾಡುತ್ತಿದ್ದರೂ ಸ್ಪಂದನೆ ಸಿಕ್ಕಿಲ್ಲ ಎಂದು ಗೋಕುಲ್‌ದಾಸ್‌ ಹೇಳಿದರು. ಮಳೆ ಹಾನಿಯಡಿ ಅನುದಾನ ನೀಡಲು ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಗಿದೆ. ಬೇಲಿ ತೆರವಿನ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಎಂಜಿನಿಯರ್‌ ಭರವಸೆ ನೀಡಿದರು.

ಸ್ವಚ್ಛತಾ ಬೋರ್ಡ್‌ ಬಿಲ್‌ ದುಬಾರಿ..!
ನಗರದ ಆಯ್ದ ಭಾಗದಲ್ಲಿ ಅಳವಡಿಲು ಉದ್ದೇಶಿಸಿರುವ 10 ಸ್ವಚ್ಛತಾ ಬೋರ್ಡ್‌ಗೆ ವ್ಯಯಿಸಿದ ವೆಚ್ಚ ದುಬಾರಿ ಆಗಿರುವ ಬಗ್ಗೆ ಸದಸ್ಯರು ಉಲ್ಲೇಖೀಸಿದರು. ಪ್ರತಿ ಬೋರ್ಡ್‌ಗೆ 3ಸಾವಿರ ರೂ. ವೆಚ್ಚ ಎಂದು ನಿಗದಿಪಡಿಸ ಲಾಗಿದೆ. ಹೆಚ್ಚೆಂದರೆ 750 ರೂ. ಇರಬಹುದು ಎಂದು ಉಮ್ಮರ್‌, ಗೋಕುಲ್‌ ದಾಸ್‌ ಮೊದಲಾದವರು ಹೇಳಿದರು. ಅಸಲು ವೆಚ್ಚ ಮಾತ್ರ ಪಾವತಿಸುವುದಾಗಿ ಮುಖ್ಯಾಧಿಕಾರಿ ಭರವಸೆ ನೀಡಿದರು.

5 ಸೆಂಟ್ಸ್‌ ಮಾಯ..!
ಜಯನಗರ ಹಿಂದೂ ರುದ್ರಭೂಮಿಗೆ ಮೀಸಲಿರಿಸಿದ ಒಟ್ಟು ಜಮೀನಿನಲ್ಲಿ 5 ಸೆಂಟ್ಸ್‌ ಇಲ್ಲದಿರುವ ಬಗ್ಗೆ ಗೋಕುಲ್‌ ದಾಸ್‌ ಪ್ರಶ್ನಿಸಿದರು. ಸಹಾಯಕ ಆಯುಕ್ತರ ಮೂಲಕವೇ ವಿಭಜನೆ ಆಗಿದೆ ಎಂದು ಮುಖ್ಯಾಧಿಕಾರಿ ಉತ್ತರಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಗೋಕುಲ್‌, ಹಾಗೆ ಸಾಧ್ಯವಿಲ್ಲ. ಪಹಣಿಯಲ್ಲಿ ದಾಖಲಿಸಿರುವ ಸರಕಾರಿ ಭೂಮಿ ಬೇರೊಬ್ಬರಿಗೆ ಕೊಡಲು ಸಾಧ್ಯವಿಲ್ಲ. ಈ ಬಗ್ಗೆ ತನಿಖೆ ಆಗಲಿ ಎಂದು ಆಗ್ರಹಿಸಿದರು.

ಅನುದಾನ ನೀಡಲು ಆಗ್ರಹ
ನ.ಪಂ.ಸಾರ್ವಜನಿಕ ದೇಣಿಗೆ ನಿಧಿಯಿಂದ ದುಗಲಡ್ಕ ಸಾಹಿತ್ಯ ಸಮ್ಮೇಳನ ಸೇರಿದಂತೆ ಬೇರೆ-ಬೇರೆ ಕಾರ್ಯಕ್ರಮಗಳಿಗೆ ನ.ಪಂ. ಘೋಷಿಸಿದ ಅನುದಾನ ಬಿಡುಗಡೆಯಾಗಿಲ್ಲ ಎಂದು ಗೋಕುಲ್‌ದಾಸ್‌ ಸಹಿತ ಇತರ ಸದಸ್ಯರು ಪ್ರಶ್ನಿಸಿದರು. ಜಿಲ್ಲಾಧಿಕಾರಿ ಅವರ ಅನುಮೋದನೆ ಬಳಿಕ ನೀಡುವುದಾಗಿದೆ ಎಂದು ಅಧಿಕಾರಿಗಳು ಉತ್ತರಿಸಿದರು. ಕೆಲ ಕಾಲ ಚರ್ಚೆ ನಡೆದು ವಿಳಂಬಕ್ಕೆ ಕಾರಣರಾದ ಪಿಡಿ ವಿರುದ್ಧ ಆಕ್ರೋಶ ವ್ಯಕ್ತವಾಯಿತು.

ಕಾಲೇಜು ಸ್ಥಳಾಂತರಿಸಿ..!
ಕೊಡಿಯಾಲಬೈಲು ಸರಕಾರಿ ಪ್ರಥಮ ದರ್ಜೆ ಕಾಲೇಜು ನಗರದಿಂದ ಮೂರು ನಾಲ್ಕು ಕಿ.ಮೀ. ಒಳಭಾಗದಲ್ಲಿದೆ. ನಗರದಲ್ಲಿ ಬೇಕಾದಷ್ಟು ಸರಕಾರಿ ಜಮೀನು ಇರುವ ಕಾರಣ ಇಲ್ಲಿಯೇ ಜಾಗ ಕಾದಿರಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲ ಎಂದು ಉಮ್ಮರ್‌ ಹೇಳಿದರು. ಜಾಗ ಕಾದಿರಿಸಿ ಸ್ಥಳಾಂತರಿಸುವುದು ಕಷ್ಟ. ಈಗಿರುವ ಕಾಲೇಜಿಗೆ ಹೆಚ್ಚುವರಿ ಬಸ್‌ ಸಂಚರಿಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ಗೋಪಾಲ ನಡುಬೈಲು ಸಲಹೆ ನೀಡಿದರು. ಗಾಂಧಿನಗರ ಮೊದಲಾದೆಡೆ ಹೋರಿಯೊಂದು ವಾಹನ, ಜನರ ಮೇಲೆ ದಾಳಿ ಮಾಡುತ್ತಿದ್ದು, ಅದರ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಉಮ್ಮರ್‌, ಪ್ರೇಮಾ ಅವರು ಆಗ್ರಹಿಸಿದರು.

ಪುರಭವನ ದುರಸ್ತಿ ಪಡಿಸಿ
ಪುರಭವನದಲ್ಲಿ ಮೂಲ ಸೌಕರ್ಯ ಕೊರತೆ ಇದ್ದು, ಅದರ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಮುಸ್ತಾಪ, ಪ್ರೇಮಾ ಟೀಚರ್‌, ಶ್ರೀಲತಾ ಮೊದಲಾದವರು ಆಗ್ರಹಿಸಿದರು. ಆಯಾ ವಾರ್ಡ್‌ಗಳಲ್ಲಿ ಕಾಮಗಾರಿ ಅನುಷ್ಠಾನ ಮಾಡುವ ಸಂದರ್ಭ ವಾರ್ಡ್‌ ಸದಸ್ಯರ ಗಮನಕ್ಕೆ ತರಬೇಕು ಎಂದು ಉಮ್ಮರ್‌ ಒತ್ತಾಯಿಸಿದರು. 

ಟಾಪ್ ನ್ಯೂಸ್

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.