ಸತತ ಕುಸಿತ: ವಾಹನ ಸವಾರರಲ್ಲಿ  ಆತಂಕ


Team Udayavani, Aug 13, 2018, 11:35 AM IST

sampaje-road2.jpg

ಸುಳ್ಯ: ಚಾರ್ಮಾಡಿ ಘಾಟಿ ರಸ್ತೆ ಸುಧಾರಣೆಯಾಯಿತೆಂದು ನಿಟ್ಟುಸಿರು ಬಿಡುವಷ್ಟರಲ್ಲೇ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ತನಕದ ರಸ್ತೆ ಹದಗೆಟ್ಟಿದೆ. ಅಲ್ಲಲ್ಲಿ ಕುಸಿತ ಕಾಣುತ್ತಿದ್ದು, ವಾಹನ ಸವಾರರಲ್ಲಿ ಭೀತಿ ಮೂಡಿಸಿದೆ.

ಕೊಡಗು ಭಾಗದಲ್ಲಿ ಕೆಲವು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ. ಗುಡ್ಡ, ಕಾಡು ಆವೃತ್ತ ಪ್ರದೇಶದಲ್ಲಿ ನೀರಿನ ಹರಿವು, ಒರತೆ ಹೆಚ್ಚಿರುವುದರ ಜತೆಗೆ ಚರಂಡಿ ವ್ಯವಸ್ಥೆಯ ಕೊರತೆಯೂ ರಸ್ತೆ ಕುಸಿತ ಹಾಗೂ ಹದಗೆಡಲು ಮೂಲ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

25 ಕಿ.ಮೀ. ದೂರ
ದಕ್ಷಿಣ ಕನ್ನಡದ ಗಡಿಭಾಗ ಸಂಪಾಜೆಯಿಂದ ಮಡಿಕೇರಿ ತನಕ ಅರಣ್ಯ, ಗುಡ್ಡಬೆಟ್ಟಗಳ ಮಧ್ಯೆ 25 ಕಿ.ಮೀ. ಉದ್ದದ ಏರುತಗ್ಗಿನ ರಸ್ತೆ ಹಾದು ಹೋಗಿದೆ. ಸದಾ ವಾಹನ ದಟ್ಟಣೆ ಹೊಂದಿದೆ. ಚಾರ್ಮಾಡಿ, ಶಿರಾಡಿ ಘಾಟಿ ರಸ್ತೆಗಳು ಹಾಳಾಗಿ ವಾಹನ ಸಂಚಾರಕ್ಕೆ ನಿಷೇಧ ಎದುರಾದಾಗ ಇದೇ ರಸ್ತೆ ಆಪದಾºಂಧವನಾಗಿತ್ತು.

ಪದೇಪದೆ ಕುಸಿತ
ಅಗಲಗೊಂಡು ಹೊಸ ರಸ್ತೆಯಾಗಿ ಅಭಿವೃದ್ಧಿಗೊಂಡ ವರ್ಷದೊಳಗೆ, 2013ರ ಆಗಸ್ಟ್‌ನಲ್ಲಿ ಕೊಯನಾಡು ಬಳಿ 200 ಮೀ. ಉದ್ದಕ್ಕೆ, 5 ಅಡಿ ಆಳಕ್ಕೆ ಕುಸಿದಿತ್ತು. ಆಗ ಕೆಲವು ತಿಂಗಳು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಅಲ್ಲಿ ಒಂದು ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಕಾಂಕ್ರೀಟ್‌ ತಡೆಗೋಡೆ ಸಹಿತ ಹೊಸ ರಸ್ತೆ ನಿರ್ಮಿಸಲಾಗಿತ್ತು. ಒಂದು ತಿಂಗಳ ಹಿಂದೆ ಇದೇ ಜಾಗದಲ್ಲಿ ಮತ್ತೆ ಬಿರುಕು ಉಂಟಾಗಿ ಎಂಟು ಇಂಚಿನಷ್ಟು ರಸ್ತೆ ಕುಸಿದಿದೆ. ಸುರಕ್ಷತೆಯ ದೃಷ್ಟಿಯಿಂದ ಘನ ವಾಹನ ಸಂಚಾರಕ್ಕೆ ಪಕ್ಕದ ಹಳೆ ರಸ್ತೆ ಬಳಸಲಾಗಿದೆ. ಮಡಿಕೇರಿ ಪೇಟೆಯಿಂದ 1 ಕಿ.ಮೀ. ದೂರದ ಹೋಂ ಸ್ಟೇ ಬಳಿ ಗುಡ್ಡ ಕುಸಿದು ಮಂಗಳೂರು -ಬೆಂಗಳೂರು ರಸ್ತೆ ಸಂಪರ್ಕ ಕೆಲವು ತಾಸು ಕಡಿತಗೊಂಡಿತ್ತು. 

ಎರಡು ದಿನಗಳ ಹಿಂದೆ ಮಡಿಕೇರಿಯಿಂದ 5 ಕಿ.ಮೀ. ದೂರ ಇರುವ ಕಾಟಿಕೇರಿ ಕಾಳತ್‌ಮನೆ ಸಮೀಪ ರಸ್ತೆಯ ಒಂದು ಪಾರ್ಶ್ವ 50 ಅಡಿಗಳಷ್ಟು ಕುಸಿದಿದೆ. ಅಲ್ಲೀಗ‌ ಏಕಮುಖ ಸಂಚಾರ ಇದೆ. ಪರಿಸ್ಥಿತಿ ಹೀಗೆ ಮುಂದುವರಿದಲ್ಲಿ ಸಂಪರ್ಕ ಕಡಿತ ಭೀತಿ ಎದುರಾಗಲಿದೆ.

ಕಾಂಕ್ರೀಟ್‌ ಸೂಕ್ತ
ಪ. ಘಟ್ಟ ಪ್ರದೇಶವಾದ್ದರಿಂದ ಭಾರೀ ಮಳೆ, ಒರತೆ ವರ್ಷದ ಹಲವು ತಿಂಗಳು ಇರುತ್ತದೆ. ಜತೆಗೆ ಮಡಿಕೇರಿಯಿಂದ ಸಂಪಾಜೆ ತನಕದ ಶೇ. 85ರಷ್ಟು ಭಾಗದಲ್ಲಿ ಡಾಮರು ಮಣ್ಣಿನ ಗುಣಮಟ್ಟಕ್ಕೆ ಹೊಂದುವುದಿಲ್ಲ. ಹಾಗಾಗಿ ಕಾಂಕ್ರೀಟ್‌ ರಸ್ತೆಯೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಇಕ್ಕೆಲಗಳ ಗುಡ್ಡ ಮತ್ತು ತಗ್ಗು ಪ್ರದೇಶದಲ್ಲಿ ಮಣ್ಣು ಕುಸಿಯದಂತೆ ಕಾಂಕ್ರೀಟ್‌ ತಡೆಗೋಡೆಗಳನ್ನು ನಿರ್ಮಿಸಿಲ್ಲ. 
ಮದೆನಾಡು ಬಳಿ ನಿರ್ಮಿಸಿದ ತಡೆಗೋಡೆಯಿಂದ ಅಲ್ಲಿ ಕುಸಿತ ನಿಯಂತ್ರಣಕ್ಕೆ ಬಂದಿದೆ. ಈ ಸುರಕ್ಷಾ ಕ್ರಮ ಎಲ್ಲೆಡೆ ಅಗತ್ಯ. ಇದರೊಂದಿಗೆ ಮಳೆ ನೀರು ಹರಿದು ಹೋಗಲು ಸೂಕ್ತ ಚರಂಡಿ ಅವಶ್ಯ. ಇಕ್ಕೆಲಗಳಲ್ಲಿ ಕಾಂಕ್ರೀಟ್‌ ಚರಡಿ ಅಗತ್ಯವಿದ್ದರೂ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಿಲ್ಲ ಎಂಬುದು ಸ್ಥಳೀಯರ ಆಗ್ರಹ. 

ಹೊಸ ರಸ್ತೆ ಆಗಿ  ಆರೇ ವರ್ಷ!
ಕೆಆರ್‌ಡಿಸಿಎಲ್‌ ವಾಪ್ತಿಯ ಮಾಣಿ-ಮೈಸೂರು ರಾಜ್ಯ ಹೆದ್ದಾರಿ 88 ಅನ್ನು 2009ರಲ್ಲಿ ವಿಸ್ತರಿಸಿ ಮೂರು ಹಂತದಲ್ಲಿ ಕಾಮಗಾರಿ ನಡೆಸಲಾಗಿತ್ತು. ಕುಶಾಲನಗರ-ಮಡಿಕೇರಿ-ಸಂಪಾಜೆ ತನಕ ಎರಡನೇ ಹಂತದಲ್ಲಿ ಕಾಮಗಾರಿ ನಡೆಸಿ, 2012ರಲ್ಲಿ ಪೂರ್ಣಗೊಂಡು ಸಂಚಾರಕ್ಕೆ ಮುಕ್ತವಾಯಿತು. 2013ರಲ್ಲಿ ರಾ.ಹೆ. 275 ಆಗಿ ಮೇಲ್ದರ್ಜೆಗೆ ಏರಿದ್ದು, ಈಗ ರಾ. ಹೆ. ಪ್ರಾಧಿಕಾರದ ಸುಪರ್ದಿಯಲ್ಲಿದೆ. ಆರು ವರ್ಷಗಳಲ್ಲೇ ಈ ರಸ್ತೆ ಹಾಳಾಗಿರುವುದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. 

ಮಳೆಗಾಲದ  ಬಳಿಕ  ಕ್ರಮ
ರಸ್ತೆ ಕುಸಿತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಪರಿಣಿತ ಅಧಿಕಾರಿಗಳ ತಂಡ ವೈಜ್ಞಾನಿಕ ಮಾದರಿಯ ಕಾಮಗಾರಿ ಬಗ್ಗೆ ನಿರ್ಧರಿಸಲಿದೆ. ಬಿರುಕು, ಕುಸಿತ ತಡೆಯುವ ಕ್ರಮಗಳ ಬಗ್ಗೆ ಮಳೆಗಾಲದ ಅನಂತರ ಯೋಜನೆ ರೂಪಿಸಿ ಜಾರಿಗೊಳಿಸಲಾಗುವುದು.
 - ಸುಬ್ಬರಾಮ ಹೊಳ್ಳ, ಕಾ.ನಿ. ಎಂಜಿನಿಯರ್‌, ರಾ. ಹೆ. ಇಲಾಖೆ
* ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.