ಮಂಗಳೂರು ವಿ.ವಿ.: ಸಾಂಸ್ಕೃತಿಕ ನೀತಿ ಬಹುತೇಕ ಸಿದ್ಧ

ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ ಮೊದಲ ವಾರ ಬಿಡುಗಡೆ

Team Udayavani, Oct 31, 2022, 11:02 AM IST

ಮಂಗಳೂರು ವಿ.ವಿ.: ಸಾಂಸ್ಕೃತಿಕ ನೀತಿ ಬಹುತೇಕ ಸಿದ್ಧ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಗೊಳಪಟ್ಟ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಸಾಂಸ್ಕೃತಿಕ ಅಸ್ತಿತ್ವವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ವಿ.ವಿ. ವತಿಯಿಂದ ಸಾಂಸ್ಕೃತಿಕ ನೀತಿ ತಯಾರಿಸುವ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದ್ದು, ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ ಮೊದಲ ವಾರದಲ್ಲಿ ಬಿಡುಗಡೆಗೊಳ್ಳುವ ನಿರೀಕ್ಷೆಯಿದೆ.

ಮಂಗಳೂರು ವಿ.ವಿ.ಯಲ್ಲಿ ಈ ಮೊದಲು ಕ್ರೀಡಾ ನೀತಿಯೊಂದನ್ನು ರಾಜ್ಯದಲ್ಲೇ ಮೊದಲ ಬಾರಿಗೆ ರಚಿಸಲಾಗಿತ್ತು. ಇದೀಗ ಅದೇ ಮಾದರಿಯಲ್ಲಿ ಸಾಂಸ್ಕೃತಿಕ ನೀತಿ ಜಾರಿಗೆ ತರಲಾಗುತ್ತಿದೆ. ಉಭಯ ಜಿಲ್ಲೆಗಳು ಹಾಗೂ ಕೊಡಗಿಗೆ ಸಂಬಂಧಿಸಿ ಸಾಂಸ್ಕೃತಿಕ ಕಲೆಗಳಿಗೆ ಶಾಸ್ತ್ರೋಕ್ತ ಚೌಕಟ್ಟು ರಚಿಸಿ, ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿ, ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವುದು ಇದರ ಹಿಂದಿನ ಉದ್ದೇಶ.

ಡಾ| ಎಂ. ಮೋಹನ ಆಳ್ವ ಅವರ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ನೀತಿ ತಯಾರಿಗೆ ಸಂಬಂಧಿಸಿದ ಸಮಿತಿ ರಚಿಸಲಾಗಿದ್ದು, ಡಾ| ಬಿ.ಎ. ವಿವೇಕ ರೈ, ಡಾ| ಚಿನ್ನಪ್ಪ ಗೌಡ, ಡಾ| ಧನಂಜಯ ಕುಂಬ್ಳೆ, ಜೀವನ್‌ ರಾಮ್‌ ಸುಳ್ಯ ಸೇರಿದಂತೆ ಹಲವರು ಸಮಿತಿಯಲ್ಲಿದ್ದಾರೆ. ಜತೆಗೆ ಪ್ರೊ| ಅರವಿಂದ ಹೆಬ್ಟಾರ್‌ ನೇತೃತ್ವದ ಉಪಸಮಿತಿ ರಚಿಸಲಾಗಿದ್ದು, ನಿವೃತ್ತ ಇಂಗ್ಲಿಷ್‌ ಪ್ರಾಧ್ಯಾಪಕ ರವಿಶಂಕರ್‌ ರಾವ್‌ ಒಳಗೊಂಡಂತೆ ಸಾಂಸ್ಕೃತಿಕ ರಂಗದ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಮೂಲ ಸಮಿತಿ ನೀತಿಗೆ ಸಂಬಂಧಿಸಿದ ರೂಪರೇಖೆ ಸಿದ್ಧಪಡಿಸಿದ್ದು, ಉಪ ಸಮಿತಿ ಅದನ್ನು ಇನ್ನಷ್ಟು ಅಚ್ಚುಕಟ್ಟು ಮಾಡುವ ಕೆಲಸ ಮಾಡಿದೆ.

ಸಾಂಸ್ಕೃತಿಕ ಕಲಾಕೃತಿಗಳ ಪ್ರದರ್ಶನ
ಶಿವಮೊಗ್ಗ ಕುವೆಂಪು ವಿ.ವಿ., ಹಾವೇರಿಯ ಜಾನಪದ ವಿ.ವಿ., ವಿಜಯಪುರದ ಮಹಿಳಾ ವಿ.ವಿ.ಗಳ ಕ್ಯಾಂಪಸ್‌ ಸೇರಿದಂತೆ ವಿವಿಧ ವಿ.ವಿ.ಗಳಲ್ಲಿ ಅಲ್ಲಿನ ಸ್ಥಳೀಯ ಜಾನಪದ ಕಲೆ, ಸಂಸ್ಕೃತಿಗೆ ಸಂಬಂಧಿಸಿದ ಕಲಾಕೃತಿ ಪ್ರದರ್ಶಿಸುವ ಮೂಲಕ ಸಾಂಸ್ಕೃತಿಕ ಅಸ್ತಿತ್ವವನ್ನು ತೋರಿಸಲಾಗಿದೆ. ಅದೇ ಮಾದರಿಯನ್ನು ಇಲ್ಲಿಯೂ ಅನುಸರಿಸುವಂತೆ ಸಮಿತಿ ಶಿಫಾರಸು ಮಾಡಿದ್ದು, ಆಡಳಿತ ಕಚೇರಿ, ಗ್ರಂಥಾಲಯ, ವಿಜ್ಞಾನ ಬ್ಲಾಕ್‌ನ ಎದುರು, ವಿಶ್ವವಿದ್ಯಾನಿಲಯ ಪ್ರವೇಶ ಸ್ಥಳ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಕರಾವಳಿಯ ಯಕ್ಷಗಾನ, ಕಂಬಳ, ಹುಲಿವೇಷ, ಭೂತಕೋಲ ಹಾಗೂ ಕೊಡಗು ಜಿಲ್ಲೆಗೆ ಸಂಬಂಧಿಸಿದ ಫೈಬರ್‌ ಗ್ಲಾಸ್‌ ಕಲಾಕೃತಿಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ.

ಸಾಂಸ್ಕೃತಿಕ ತರಬೇತಿ
ಮೂರು ಜಿಲ್ಲೆಗಳಲ್ಲಿ 215 ಕಾಲೇಜುಗಳು ವಿ.ವಿ.ಯ ಸಂಯೋಜನೆಗೆ ಒಳಪಟ್ಟಿದ್ದು, ಸುಮಾರು 1 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಕೊಣಾಜೆ ಮಂಗಳಗಂಗೋತ್ರಿ ವಿ.ವಿ. ಕ್ಯಾಂಪಸ್‌ನಲ್ಲಿ 40 ಶೈಕ್ಷಣಿಕ ಕಾರ್ಯಕ್ರಮಗಳು, 28 ವಿಭಾಗಗಳು ಸೇರಿ 2,500 ವಿದ್ಯಾರ್ಥಿಗಳಿದ್ದಾರೆ. ಬಹುತೇಕ ವಿದ್ಯಾರ್ಥಿಗಳಿಗೆ ನೃತ್ಯ, ನಟನೆ, ಹಾಡುಗಾರಿಕೆ, ಯಕ್ಷಗಾನ ಮೊದಲಾದವುಗಳಲ್ಲಿ ಆಸಕ್ತಿಯಿದ್ದರೂ ಸೂಕ್ತ ತರಬೇತಿಯಿಲ್ಲದೆ ಅವಕಾಶ ವಂಚಿತರಾಗುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳನ್ನು ಗುರುತಿಸಿ ತರಬೇತಿ ನೀಡಿ ಅವರನ್ನು ಮುನ್ನೆಲೆಗೆ ತರುವುದು ವಿಶ್ವವಿದ್ಯಾಲಯದ ನೈತಿಕ ಹೊಣೆಗಾರಿಕೆ. ಅದಕ್ಕೆ ಪೂರಕವಾಗಿ ಸಾಂಸ್ಕೃತಿಕ ನೀತಿ ಕೆಲಸ ಮಾಡಲಿದೆ ಎನ್ನುತ್ತಾರೆ ಕುಲಪತಿ ಪ್ರೊ| ಯಡಪಡಿತ್ತಾಯರು.

ಫೆಲೋಶಿಪ್‌
ಭರತನಾಟ್ಯ, ಯಕ್ಷಗಾನ, ಕರಾವಳಿ-ಕೊಡಗಿನ ಜಾನಪದ ಕಲೆಗಳಲ್ಲಿ ಆಸಕ್ತಿ ಇದ್ದವರನ್ನು ಆಯಾ ಕಾಲೇಜಿನವರು ಗುರುತಿಸಿ ಕೊಟ್ಟರೆ, ತರಬೇತಿ ಕೊಟ್ಟು ಸಾಂಸ್ಕೃತಿಕ ರಂಗದಲ್ಲಿ ಮಿಂಚುವಂತೆ ಮಾಡುವುದು ಅಥವಾ ವಿ.ವಿ. ಮಟ್ಟದ ಸಾಂಸ್ಕೃತಿಕ ಹಬ್ಬಗಳಲ್ಲಿ ಪ್ರತಿಭಾ ಪ್ರದರ್ಶನ ನೀಡುವ ವಿದ್ಯಾರ್ಥಿಗಳನ್ನು ಗುರುತಿಸಿ, ಆಯ್ದ 10 ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ನೀಡುವುದು ನೀತಿಯಲ್ಲಿದೆ. ಕೆಲವರಿಗೆ ಉಚಿತ ತರಬೇತಿ ನೀಡುವುದು ಯೋಜನೆಯಲ್ಲಿ ಸೇರಿದೆ.

ಸಾಂಸ್ಕೃತಿಕ ನೀತಿಯ ಕರಡು ಬಹುತೇಕ ಸಿದ್ಧವಾಗಿದೆ. ಇದನ್ನು ಅಂತಿಮಗೊಳಿಸುವ ಮೊದಲು ಏನಾದರೂ ಸೇರ್ಪಡೆ ಅಥವಾ ತೆಗೆಯಬೇಕಾದ ವಿಚಾರಗಳಿವೆಯೇ ಎಂದು ಸಾಂಸ್ಕೃತಿಕ ರಂಗದ ಪ್ರಮುಖರ ಜತೆಗೆ ಚರ್ಚೆ ನಡೆಸಲಾಗುವುದು. ಮಾತ್ರವಲ್ಲದೆ ಶೀಘ್ರ ಇದರ ಪ್ರತಿಯನ್ನು ವಿ.ವಿ.ಯ ವೆಬ್‌ಸೈಟ್‌ನಲ್ಲಿ ಹಾಕಿ ಸಾರ್ವಜನಿಕರಿಂದಲೂ ಸಲಹೆ ಸೂಚನೆ ಪಡೆಯಲಾಗುವುದು.
– ಪ್ರೊ| ಪಿ.ಎಸ್‌. ಯಡಪಡಿತ್ತಾಯ, ಕುಲಪತಿ, ಮಂಗಳೂರು ವಿಶ್ವವಿದ್ಯಾನಿಲಯ

– ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.