ಗುರಿ ಮೀರಿ ಸಾಧನೆ; ಮಂಗಳೂರು ತಾ| ಜಿಲ್ಲೆಗೆ ಪ್ರಥಮ

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ

Team Udayavani, May 2, 2019, 6:00 AM IST

2904BAJ

ಬಜಪೆ: ನರೇಗಾ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ವಿನೂತನ ಅಂಗನವಾಡಿ ಕೇಂದ್ರ.

ಬಜಪೆ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2018-19ನೇ ಸಾಲಿನಲ್ಲಿ ಮಂಗಳೂರು ತಾಲೂಕು ನಿಗದಿಪಡಿಸಿದ ಅರ್ಥಿಕ ಮತ್ತು ಭೌತಿಕ ಗುರಿಯನ್ನು ಮೀರಿದ ಸಾಧನೆ ದಾಖಲಿಸಿ ದಕ್ಷಿಣ ಕನ್ನಡ ಜಿಲ್ಲೆಗೇ ಪ್ರಥಮ ಸ್ಥಾನ ಪಡೆದಿದೆ. ಆರ್ಥಿಕವಾಗಿ ಶೇ.124 ಮತ್ತು ಭೌತಿಕವಾಗಿ ಶೇ. 112ರ ಸಾಧನೆ ಸಾಧಿಸಿದೆ.

ಪುತ್ತೂರು ತಾಲೂಕು ಅನುಕ್ರಮವಾಗಿ ಶೇ.97, ಶೇ.99, ಸುಳ್ಯ ಶೇ.95, 91, ಬೆಳ್ತಂಗಡಿ ಶೇ.100, ಶೇ. 89, ಬಂಟ್ವಾಳ ಶೇ.81, ಶೇ.88 ಸಾಧನೆ ಮಾಡಿ ಅನಂತರದ ಸ್ಥಾನಗಳಲ್ಲಿವೆ. ಜಿಲ್ಲೆಯಲ್ಲಿ ಒಟ್ಟು ಅರ್ಥಿಕವಾಗಿ ಶೇ.101 ಮತ್ತು ಭೌತಿಕವಾಗಿ ಶೇ.94 ಸಾಧನೆಯಾಗಿದೆ.

2018-19ನೇ ಸಾಲಿನಲ್ಲಿ ಉದ್ಯೋಗ ಚೀಟಿಯ ಅಧಾರದ ಮೇಲೆ ಕಾರ್ಮಿಕ ಆಯವ್ಯಯ ಅನುಗುಣವಾಗಿ ಗುರಿಯನ್ನು ನಿರ್ಧರಿಸಲಾಗಿತ್ತು. ಮಂಗಳೂರು ತಾಲೂಕಿಗೆ 2,05,052 ಮಾನವ ದಿನಗಳಲ್ಲಿ 9,02,02,000 ರೂ. ಆರ್ಥಿಕ ಗುರಿ ನಿಗದಿಯಾಗಿತ್ತು. ಆದರೆ ತಾಲೂಕು 2,30,066 ಭೌತಿಕ ಮಾನವ ದಿನಗಳಲ್ಲಿ 11,15,81,000 ರೂ.ಗಳ ಆರ್ಥಿಕ ಸಾಧನೆ ಮಾಡಿದೆ. ಯೋಜನೆಯಡಿ ತಾಲೂಕಿನಲ್ಲಿ 2,30,066 ದಿನ ಉದ್ಯೋಗ ನೀಡಿದೆ.

ಒಟ್ಟು 14,50,000 ಮಾನವ ದಿನಗಳಲ್ಲಿ 63,78,55,000 ರೂ. ಆರ್ಥಿಕ ಗುರಿ ನಿಗದಿಗೊಳಿಸಲಾಗಿತ್ತು. 13,62,007 ಮಾನವ ದಿನಗಳಲ್ಲಿ 64,55,26,000 ರೂ. ಸಾಧನೆ ಆಗಿದೆ.

ತಾಲೂಕಿನಲ್ಲಿ ಕಿನ್ನಿಗೋಳಿ ಪ್ರಥಮ ಮಂಗಳೂರು ತಾಲೂಕಿನಲ್ಲಿ ಯೋಜನೆಯಡಿ ಕಿನ್ನಿಗೋಳಿ ಗ್ರಾ.ಪಂ. ಅತೀ ಹೆಚ್ಚು ಅಂದರೆ, ಒಟ್ಟು 69,79,000 ರೂ. ಮೊತ್ತದ ಕಾಮಗಾರಿ ನಡೆಸಿದೆ.

ಅತೀ ಕಡಿಮೆ ಮೊತ್ತದ ಕಾಮಗಾರಿ
ಗ್ರಾಮೀಣ ಪ್ರದೇಶದ ಗ್ರಾ.ಪಂ.ಗಳಾದ ಬಳುRಂಜೆ 3,35,000 ರೂ., ಮಲ್ಲೂರು ಮತ್ತು ಮುಚ್ಚಾರು ತಲಾ 4,10,000 ರೂ. ವೆಚ್ಚದ ಕಾಮಗಾರಿ ಮಾಡಿದ್ದು, ಅತೀ ಕಡಿಮೆ ಸಾಧನೆ ದಾಖಲಿಸಿವೆ.

ಡಾಟ್‌ ಎಂಟ್ರಿ ಆಪರೇಟರ್‌ ಪಾತ್ರ ಮುಖ್ಯ
ಗ್ರಾ.ಪಂ.ಗಳ ಪಿಡಿಒ ಮತ್ತು ಡಾಟ್‌ ಎಂಟ್ರಿ ಅಪರೇಟರ್‌ಗಳ ಮುತುವರ್ಜಿ ಈ ಯೋಜನೆಯ ಯಶಸ್ಸಿನಲ್ಲಿ ಮುಖ್ಯವಾಗಿದೆ. ಇವರಿಂದ ಸಮರ್ಪಕವಾಗಿ ಉದ್ಯೋಗ ಚೀಟಿ ನೋಂದಣಿ, ನವೀಕರಣ, ಕ್ರಿಯಾಯೋಜನೆ ತಯಾರಿ, ಕಾಮಗಾರಿಗಳ ಅನುಷ್ಠಾನ, ದಾಖಲೀಕರಣ ಇಲ್ಲಿ ಅಗತ್ಯ.

ಕಡಿಮೆ ಸಾಧನೆಗೆ ಕಾರಣ
ಬಾವಿ ರಚನೆ, ಸಾರ್ವಜನಿಕ ಕೆರೆ -ನಾಲೆಗಳ ಹೂಳೆತ್ತುವುದು ಕಡಿಮೆಯಾಗಿದೆ. ಕೃಷಿ, ತೋಟಗಾರಿಕೆ ಇಲಾಖೆ- ಸಾಮಾಜಿಕ ಅರಣ್ಯ ಕಾಮಗಾರಿ ಈ ಬಾರಿ ಕಡಿಮೆಯಾಗಿವೆ. ಜತೆಗೆ, ಖಾಸಗಿ ಬಾವಿ, ಕೆರೆ ದುರಸ್ತಿಗೆ ಅವಕಾಶ ಇಲ್ಲ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಸಿಗುವುದಿಲ್ಲ, ಕೂಲಿ ಕಡಿಮೆ ಎಂಬ ಭಾವನೆ ಮತ್ತು ಹಣ ಸರಿಯಾಗಿ ಪಾವತಿಯಾಗುವುದಿಲ್ಲ ಎಂಬ ಹೆದರಿಕೆ ಇದೆ.

ಮಂಗಳೂರು ತಾಲೂಕು ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಗುರಿ ಮೀರಿದ ಸಾಧನೆ ಮಾಡಿದೆ. ತಾಲೂಕಿನಲ್ಲಿ ಶೇ.60ರಷ್ಟು ನಗರ ಪ್ರದೇಶಗಳು ಬಂದರೂ ಈ ಸಾಧನೆ ಆಗಿದೆ. ಗ್ರಾಮೀಣ ಪ್ರದೇಶವನ್ನು ಹೆಚ್ಚು ಹೊಂದಿರುವ ಗ್ರಾ.ಪಂ.ಗಳಿಗೆ ಈ ಯೋಜನೆಯಲ್ಲಿ ವಿಪುಲ ಅವಕಾಶ ಇದೆ.
–  ಸದಾನಂದ ಎಸ್‌.,
ನರೇಗಾ ಯೋಜನೆಯ ಸಹಾಯಕ ನಿರ್ದೇಶಕ

-ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.