ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ನೇಮಕ
Team Udayavani, Oct 12, 2021, 9:29 PM IST
ಮಂಗಳೂರು: ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರನ್ನಾಗಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ರಾಜ್ಯ ಸರಕಾರ ಮಂಗಳವಾರ ನಿಯೋಜಿಸಿ ಆದೇಶಿಸಿದೆ.
ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇವರು ಸದ್ಯ ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದಕ್ಕೂ ಮೊದಲು ಧಾರವಾಡ ಬಿಸಿಎಂ ಅಧಿಕಾರಿಯಾಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದರು.
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಇವರು ಸಲ್ಲಿಸಿದ್ದಾರೆ.
ಇದನ್ನೂ ಓದಿ:ರಸ್ತೆ ಸೌಲಭ್ಯವಿಲ್ಲದೆ ರೋಗಿಯನ್ನು ಜೋಳಿಗೆಯಲ್ಲೇ ಹೊತ್ತು ನಡೆದ ಗ್ರಾಮಸ್ಥರು