ಹೆಸರಿಗಷ್ಟೇ ‘ಮಹಾನಗರ’ : ಪಾಲಿಕೆ-ಮುಡಾ: ಹುದ್ದೆಗಳೆಲ್ಲ ಖಾಲಿ!


Team Udayavani, Jul 5, 2018, 3:15 AM IST

mangaluru-city-corporation-1-600.jpg

ಮಹಾನಗರ: ಸ್ಮಾರ್ಟ್‌ ಸಿಟಿ ಪಟ್ಟಕ್ಕೆ ಅಣಿಯಾಗುತ್ತಿರುವ ನಗರದ ಆಡಳಿತ ಚುಕ್ಕಾಣಿ ಹಿಡಿದಿರುವ ಮಹಾನಗರ ಪಾಲಿಕೆ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮಂಜೂರಾತಿ ಪೈಕಿ ಅರ್ಧಕ್ಕಿಂತಲೂ ಹೆಚ್ಚಿನ ಹುದ್ದೆಗಳು ಕೆಲವು ವರ್ಷಗಳಿಂದ ಖಾಲಿಯಿವೆ. ಇದು ಸ್ಮಾರ್ಟ್‌ ಸಿಟಿ ಸಮರ್ಪಕ ಅನುಷ್ಠಾನ ಹಾಗೂ ಸಾರ್ವಜನಿಕರ ಸೇವೆಗಳಿಗೆ ಬಹಳಷ್ಟು ತೊಡಕಾಗಿ ಪರಿಣಮಿಸಿದೆ. ‘ಹುದ್ದೆ ಭರ್ತಿ ಮಾಡಿಕೊಡಿ’ ಎಂದು ಪಾಲಿಕೆ ಪರಿಪರಿಯಾಗಿ ಮನವಿ ಮಾಡಿದರೂ ಸರಕಾರ ಮಾತ್ರ ಇದರ ಗಂಭೀರತೆಯನ್ನೇ ಅರ್ಥಮಾಡಿಕೊಂಡ ಹಾಗಿಲ್ಲ. ಕೆಲವು ವರ್ಷಗಳಿಂದ ಈ ಸಮಸ್ಯೆ ಕಾಡುತ್ತಿರುವ ಪರಿಣಾಮ ಇರುವ ಅಧಿಕಾರಿಗಳ ಮೇಲೆ ಕೆಲಸದ ಒತ್ತಡ ಅಧಿಕವಾಗಿದೆ. ಕಡತ ವಿಲೇವಾರಿಗೂ ಪರದಾಡುವ ಪ್ರಮೇಯ ಎದುರಾಗಿದೆ.

ಪಾಲಿಕೆಗೆ ಒಟ್ಟು 1,725 ಹುದ್ದೆಗಳಿಗೆ ಮಂಜೂರಾತಿ ದೊರಕಿದೆ. ಈ ಪೈಕಿ ಸುಮಾರು 600ರಷ್ಟು ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಪರಿಣಾಮವಾಗಿ 1,000 ಕ್ಕೂ ಅಧಿಕ ಹುದ್ದೆಗಳು ಖಾಲಿ ಬಿದ್ದಿವೆ. ಉಪ ಆಯುಕ್ತ, ಝೋನಲ್‌ ಕಮಿಷನರ್‌ 3, ಕೌನ್ಸಿಲ್‌ ಸೆಕ್ರೆಟರಿ, ಬಿಲ್‌ ಕಲೆಕ್ಟರ್‌, ಸಿವಿಲ್‌ ಎಂಜಿನಿಯರ್‌, ಎಲೆಕ್ಟ್ರಿಕಲ್‌ ಎಂಜಿನಿಯರ್‌, ರೆವೆನ್ಯೂ ಇನ್‌ಸ್ಪೆಕ್ಟರ್‌ ಸೇರಿದಂತೆ ಹಲವು ಹುದ್ದೆಗಳು ಖಾಲಿಯಿವೆ.

ನಿವೃತ್ತಿ ಹೊಂದಿದ ಹುದ್ದೆಗಳು ಖಾಲಿ!
ಒಂದು ವಾರದ ಹಿಂದೆ ಪಾಲಿಕೆಯಲ್ಲಿ ವಿವಿಧ ಹುದ್ದೆ ನಿರ್ವಹಿಸುತ್ತಿದ್ದ ಸುಮಾರು 10ರಷ್ಟು ಸಿಬಂದಿ ನಿವೃತ್ತಿಗೊಂಡಿದ್ದಾರೆ. ಈಗ ಅವರ ಹುದ್ದೆಗಳ ಜವಾಬ್ದಾರಿಯನ್ನು ಇತರ ಸಿಬಂದಿಗೆ ನೀಡಲಾಗಿದೆ. ‘ನಿಯೋಜನೆ’ ಸೇವೆ ಸಿಬಂದಿಗೆ ಮತ್ತಷ್ಟು ಒತ್ತಡ ತರಿಸಿದೆ. ವಿಶೇಷವೆಂದರೆ, ಒಂದು ಹುದ್ದೆ ತೆರವು ಆಯಿತೆಂದರೆ, ಆ ಹುದ್ದೆಗೆ ಹೊಸ ನೇಮಕಾತಿ ಮಾಡುವ ಬಗ್ಗೆ ಸರಕಾರ ಗಂಭೀರ ಚಿಂತನೆ ಮಾಡಿದಂತಿಲ್ಲ.

ಮೂಡಾ 22ರಲ್ಲಿ 7 ಹುದ್ದೆ ಖಾಲಿ!
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಒಟ್ಟು 22 ಹುದ್ದೆಗಳು ಮಂಜೂರಾತಿ ಆಗಿವೆೆ. ಈ ಪೈಕಿ 15 ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಅದರಲ್ಲಿಯೂ ಕೆಲವರು ಇತರ ಇಲಾಖೆಯಿಂದ ನಿಯೋಜನೆ ಮೇಲೆ ನಿಯುಕ್ತಿಗೊಂಡಿದ್ದಾರೆ. ಇಲ್ಲಿನ ಭೂಸ್ವಾಧೀನ ಶಾಖೆಯ ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಯೇ ಖಾಲಿಯಿದೆ. ವ್ಯವಸ್ಥಾಪಕ ಹುದ್ದೆ, ಶೀಘ್ರ ಲಿಪಿಗಾರರ ಹುದ್ದೆ, ಕಂಪ್ಯೂಟರ್‌ ಆಪರೇಟರ್‌ ಹುದ್ದೆ, ರೇಖಕರ ಹುದ್ದೆ, ಗ್ರೂಪ್‌ ಡಿ ಹುದ್ದೆ ಕೂಡ ಖಾಲಿಯಿದೆ. 

ಸರಕಾರಕ್ಕೆ ಮನವಿ
ಮಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ ಏಳು ಹುದ್ದೆಗಳು ಖಾಲಿ ಇವೆ. ಇದರಲ್ಲಿ  ಭೂಸ್ವಾಧೀನಾಧಿಕಾರಿ ಹುದ್ದೆ ಅತ್ಯಂತ ಅಗತ್ಯವಾಗಿ ಭರ್ತಿಯಾಗಬೇಕಿದೆ. ಈ ಬಗ್ಗೆ ಸರಕಾರದ ಗಮನಕ್ಕೆ ತರಲಾಗಿದ್ದು, ಉಳಿದ ಖಾಲಿ ಹುದ್ದೆಗಳಿಗೆ ಇತರರ ನಿಯೋಜನೆ ಮೇಲೆ ಕೆಲಸ ನಡೆಸಲಾಗುತ್ತಿದೆ.
– ಶ್ರೀಕಾಂತ್‌ ರಾವ್‌ಆಯುಕ್ತರು, ಮಂಗಳೂರು ನಗರಾಭಿವೃದ್ಧಿ  ಪ್ರಾಧಿಕಾರ.

1000ಕ್ಕೂ ಹೆಚ್ಚು ಹುದ್ದೆಗಳು ಖಾಲಿ
ಮಂಗಳೂರು ಪಾಲಿಕೆಯಲ್ಲಿ ಮೂರನೇ ಒಂದರಷ್ಟು ಹುದ್ದೆಗಳು ಮಾತ್ರ ಈಗ ಭರ್ತಿಯಾಗಿವೆ. ಉಳಿದಂತೆ ಸುಮಾರು 1,000ದಷ್ಟು ಹುದ್ದೆಗಳು ಖಾಲಿ ಇವೆ. ಈ ಬಗ್ಗೆ ಸರಕಾರದ ಗಮನಕ್ಕೆ ತರಲಾಗಿದೆ. ನಗರಾಭಿವೃದ್ಧಿ ಸಚಿವರಿಗೆ ಈಗಾಗಲೇ ಮನವಿ ಸಲ್ಲಿಸಿದ್ದು, ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
– ಮಹಮ್ಮದ್‌ ನಝೀರ್‌, ಆಯುಕ್ತರು, ಮನಪಾ.  

— ದಿನೇಶ್‌ ಇರಾ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.