ಮತ್ತಷ್ಟು ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಿ: ಮೇಯರ್‌


Team Udayavani, Jan 26, 2018, 10:39 AM IST

26-24.jpg

ಮಂಗಳೂರು: ಮಕ್ಕಳು ಮತ್ತು ಮಹಿಳೆಯರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ “ಉದಯವಾಣಿ’ ಪತ್ರಿಕೆಯು ಓದುಗರ ಪ್ರೀತಿಗೆ ಪಾತ್ರವಾಗಿದೆ. ಮುಂದಿನ ದಿನ ಗಳಲ್ಲಿ ಸಮಾಜದ ಎಲ್ಲ ವರ್ಗಗಳ ಜನ ರಿಗೆ ಅನು ಕೂಲ ವಾಗುವ ಮತ್ತಷ್ಟು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಎಂದು ಮೇಯರ್‌ ಕವಿತಾ ಸನಿಲ್‌ ಆಶಿಸಿದ್ದಾರೆ.

2017ರ ದೀಪಾವಳಿ ಪ್ರಯುಕ್ತ ಉದಯವಾಣಿ ಪತ್ರಿಕೆಯು ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ ಆ್ಯಂಡ್‌ ಸಾರೀಸ್‌ ಸಂಸ್ಥೆ ಸಹಯೋಗದಲ್ಲಿ ಮಹಿಳೆ ಯರಿಗಾಗಿ ಆಯೋಜಿಸಿದ್ದ “ರೇಷ್ಮೆ ಜತೆ ದೀಪಾವಳಿ’ ಫೋಟೋ ಸ್ಪರ್ಧೆಯ ವಿಜೇತ ರಿಗೆ ಗುರುವಾರ ನಗರದ ಓಶಿಯನ್‌ ಪರ್ಲ್ ಹೊಟೇಲ್‌ ಸಭಾಂಗಣ ದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು. ಮಕ್ಕಳ ಫೋಟೊ ಸ್ಪರ್ಧೆ ಮೂಲಕ ಜನ
ಮಾನಸವನ್ನು ಗೆದ್ದ ಪತ್ರಿಕೆಯು ಇದೀಗ “ರೇಷ್ಮೆ ಜತೆ ದೀಪಾವಳಿ’ ಮೂಲಕ ಮಹಿಳೆ ಯರ ಮನ ಗೆದ್ದಿದೆ ಎಂದು ಶ್ಲಾಘಿಸಿದರು. 

ಅತಿಥಿಯಾಗಿದ್ದ ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ ಆ್ಯಂಡ್‌ ಸಾರೀಸ್‌ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಮುರಳೀಧರ ಶೆಟ್ಟಿ ಮಾತನಾಡಿ, ರೇಷ್ಮೆ ಸೀರೆಗಳು ಆರೋಗ್ಯ ದೃಷ್ಟಿಯಿಂದಲೂ ಉತ್ತಮ. ಉದಯವಾಣಿಯು  ಸಾಂಪ್ರದಾಯಿಕ ರೇಷ್ಮೆ ಬಟ್ಟೆಗಳ ಉಳಿವು, ಪುನಶ್ಚೇತನಕ್ಕೆ ಅಮೂಲ್ಯ ಕೊಡುಗೆ ನೀಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಎಂಎಂಎನ್‌ಎಲ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋದ್‌ ಕುಮಾರ್‌ ಅವರು ಮಾತನಾಡಿ, ನಮ್ಮ ಯುವಜನತೆ ಸಾಂಪ್ರದಾಯಿಕ ಉಡುಗೆ-ತೊಡುಗೆಗಳಿಂದ ದೂರವಾಗು ತ್ತಿರುವು ದನ್ನು ಮನಗಂಡು ರೇಷ್ಮೆ ಮೂಲಕ ಸಂಸ್ಕೃತಿ ಯೊಂದಿಗೆ ಬೆಸೆಯುವ ಆಶಯ ದೊಂದಿಗೆ ಈ ಸ್ಪರ್ಧೆಯನ್ನು ಆರಂಭಿಸಲಾಯಿತು. ನಿರೀಕ್ಷೆಗಿಂತಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತ ವಾಗಿರುವುದು ಖುಷಿ ತಂದಿದೆ ಎಂದು ಹೇಳಿದರು. ಸ್ಪರ್ಧೆಗೆ ಪ್ರಾಯೋಜ ಕತ್ವ ಒದಗಿಸಿದ ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ ಆ್ಯಂಡ್‌ ಸಾರೀಸ್‌ ಸಂಸ್ಥೆಯನ್ನೂ ಇದೇ ವೇಳೆ ಅಭಿನಂದಿಸಿದರು.

ವೇದಿಕೆಯಲ್ಲಿ  ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ ಆ್ಯಂಡ್‌ ಸಾರೀಸ್‌ ಸಂಸ್ಥೆಯ ಪಾಲುದಾರರಾದ ಅಶ್ವಿ‌ತಾ ಶೆಟ್ಟಿ ಉಪಸ್ಥಿತರಿದ್ದರು. ಉದಯ ವಾಣಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಮಚಂದ್ರ ಮಿಜಾರು ಸ್ವಾಗತಿಸಿದರು. ಪತ್ರಿಕೆಯ ಸುದ್ದಿ ವಿಭಾಗ ಮುಖ್ಯಸ್ಥ ಮನೋಹರ ಪ್ರಸಾದ್‌ ಪ್ರಸ್ತಾವನೆಗೈದು ಕಾರ್ಯಕ್ರಮ ನಿರ್ವಹಿಸಿದರು. ಮ್ಯಾಗಝಿನ್‌ ಮತ್ತು ಸ್ಪೆಷಲ್‌ ಇನಿಶಿಯೇಟಿವ್ಸ್‌ ವಿಭಾಗದ ರಾಷ್ಟ್ರೀಯ ಮುಖ್ಯಸ್ಥರಾದ ಆನಂದ್‌ ಕೆ. ವಂದಿಸಿದರು. ಪ್ರಖ್ಯಾತ ಉಡುಪು ವಿನ್ಯಾಸಕಿ ಅಮಿತಾ ಆಚಾರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ನಾಲ್ವರು ಪರಿಣತರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.

ಬಹುಮಾನ ವಿಜೇತರ ವಿವರ 
ಪ್ರಥಮ    :    ಮಿಥಾಲಿ ರೈ ಮತು ಪ್ರಸನ್ನ ರೈ, ಪುತ್ತೂರು
ದ್ವಿತೀಯ    :    ವಿಜಯಾ ಪೈ, ಸುಲತಾ ನಾಯಕ್‌ ಮತ್ತು ಗೆಳತಿಯರು, ಪುತ್ತೂರು
ತೃತೀಯ    :    ವಾಣಿಶ್ರೀ ಭಟ್‌ ಮತ್ತು ಕುಟುಂಬ, ಬುಕ್ಕಿಗುಡ್ಡೆ, ಪೆರ್ಡೂರು
ಪ್ರೋತ್ಸಾಹಕರ ಬಹುಮಾನ
1. ಪ್ರಿಯಾ ಆಳ್ವ  ಮತ್ತು ವಿಜೇತ ಆಳ್ವ, ಮಂಗಳೂರು
2. ಶೀತಲ್‌ ಎಸ್‌. ರಾವ್‌ ಮತ್ತು ಹರ್ಷ, ಕೆಮ್ಮಣ್ಣು
3. ಸೌರಭಾ ಶೆಟ್ಟಿ ಮತ್ತು ಕುಟುಂಬ, ನಲ್ಲೂರು, ಕಾರ್ಕಳ
4. ಅನುಷಾ ಭಂಡಿ ಮತ್ತು ಅಂಕಿತಾ ಭಂಡಿ, ಪೆರ್ಡೂರು
5. ದೀಕ್ಷಾ ಸುವರ್ಣ ಮತ್ತು ಕುಟುಂಬ, ಮೂಲ್ಕಿ

ಈ ಸ್ಪರ್ಧಾ ಕಾರ್ಯಕ್ರಮವು ನನ್ನ ದೀಪಾವಳಿಯನ್ನು ಪ್ರಕಾಶಮಾನವಾಗಿಸಿದೆ.    
– ಮಿಥಾಲಿ ರೈ 

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವ ರೀತಿಯಲ್ಲಿ ಸಿದ್ಧತೆ ಮಾಡಿದ್ದೆವು. ಧರಿಸುವ ರೇಷ್ಮೆ ಸೀರೆ ಬಗ್ಗೆ ವಾಟ್ಸ್‌ಆ್ಯಪ್‌ನಲ್ಲಿ ಚರ್ಚಿಸಿದೆವು. ಫೋಟೊಗ್ರಾಫರನ್ನು ಕರೆಸಿ ಫೋಟೊ ತೆಗೆಸಿದ್ದೆವು. ಈ ವರ್ಷದ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದೆವು.
ರಜನಿ ಪ್ರಭು, ಪುತ್ತೂರು, (ವಿಜಯಾ ಪೈ ಮತ್ತು ಗೆಳತಿಯರ ತಂಡದ ಸದಸ್ಯೆ).

ತುಂಬಾ ಖುಷಿಯಾಗಿದೆ. ಪತ್ರಿಕೆಯು ಇಂತಹ ಕಾರ್ಯಕ್ರಮ ಮುಂದುವರಿಸಲಿ. ಸ್ಪರ್ಧೆಯ ಫಲಿತಾಂಶ ಯಾವಾಗ ಬರುತ್ತದೆ ಎಂದು ಕಾಯುತ್ತಾ ಇದ್ದೆ; ರಿಸಲ್ಟ್  ಬರುವ ತನಕ ನಿದ್ದೆ  ಬಂದಿರಲಿಲ್ಲ.
– ವಂದನಾ ರೈ (ಸೌರಭಾ ಶೆಟ್ಟಿ  ಮತ್ತು ಕುಟುಂಬ)

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.