ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್ಪಿ ನಿರ್ಧಾರ
Team Udayavani, May 16, 2022, 11:49 PM IST
ಮಂಗಳೂರು : ನಗರ ಹೊರವಲಯದ ಮಳಲಿಯ ದರ್ಗಾವೊಂದರ ಒಳಭಾಗದಲ್ಲಿ ದೇವಸ್ಥಾನದ ಕುರುಹುಗಳು ಕಂಡು ಬಂದಿವೆ ಎನ್ನಲಾದ ಹಿನ್ನೆಲೆಯಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಸಲು ವಿಶ್ವ ಹಿಂದೂ ಪರಿಷತ್ ತೀರ್ಮಾನಿಸಿದೆ.
ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದ ನವೀಕರಣದ ಸಲುವಾಗಿ ಮುಂಭಾಗವನ್ನು ಕೆಡವಲಾಗಿತ್ತು. ಆಗ ಒಳಭಾಗದಲ್ಲಿ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿದೆ ಎಂದು ಹಿಂದುಪರ ಸಂಘಟನೆಗಳು ಹೇಳಿದ್ದವು. ಹಾಗಾಗಿ ಜಾಗದ ಧಾರ್ಮಿಕ ಮಹತ್ವ ತಿಳಿಯಲು ಹಿಂದೂ ಸಂಘಟನೆಗಳು ನಿರ್ಧರಿಸಿವೆ.
ಕೇರಳದಿಂದ ಪೊದುವಾಳ್ರನ್ನು ಕರೆಸಿ ಪ್ರಶ್ನಾ ಚಿಂತನೆಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಇದರ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.
ಸದ್ಯ ಈ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಗೊಂಡಿದ್ದು, ಜಿಲ್ಲಾಡ ಳಿತ ವತಿಯಿಂದ ಹಳೆಯ ಭೂ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಊರಿನವರೆಲ್ಲರೂ ತಾಂಬೂಲ ಪ್ರಶ್ನೆ ಅಥವಾ ಅಷ್ಟಮಂಗಲ ಪ್ರಶ್ನೆ ಇರಿಸುವುದಕ್ಕೆ ಇಚ್ಛೆ ವ್ಯಕ್ತಪಡಿಸಿದ್ದಾರೆ. ದೇವಸ್ಥಾನವಿತ್ತೇ, ಎಷ್ಟು ಸಮಯ ಹಿಂದಿನದ್ದು, ಯಾವ ದೇವರಿದ್ದರು ಇತ್ಯಾದಿ ಕುತೂಹಲಗಳಿರುವುದರಿಂದ ಇದನ್ನು ನಡೆಸುವ ಬಗ್ಗೆ ಯೋಚಿ ಸು ತ್ತಿರುವುದಾಗಿ ವಿಶ್ವ ಹಿಂದು ಪರಿಷತ್ ವಿಭಾಗ ಸಂಚಾಲಕ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ