ಕುತ್ತಾರುವಿನಲ್ಲಿ ಮಲೇರಿಯಾ ಮಾಸಾಚರಣೆ


Team Udayavani, Jul 2, 2017, 3:45 AM IST

0107ule7.jpg

ಕುತ್ತಾರು:  ಸಾಮಾಜಿಕ ಚಟುವಟಿಕೆಯಂತಹ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಕಲಿಯಲು ಪೂರಕವಾಗಿದೆ. ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಸ್ಥಿತಿಯನ್ನು ಬೆಳೆಸುವ ಕಾರ್ಯ ಶಿಕ್ಷಣ ಸಂಸ್ಥೆಗಳಿಂದ ಆಗಬೇಕಾಗಿದೆ ಎಂದು ಎಂದು ಜಿಲ್ಲಾ ಪಂಚಾಯತ್‌ ಸದಸ್ಯೆ  ಧನಲಕ್ಷ್ಮೀ ಗಟ್ಟಿ ಅಭಿಪ್ರಾಯಪಟ್ಟರು.

ಅವರು ಸಂತ ಆಗ್ನೆಸ್‌ ಕಾಲೇಜು ಮಂಗಳೂರು ಇದರ  ಸಮುದಾಯದತ್ತ ಆಗ್ನೆಸ್‌, ಜಿಲ್ಲಾ ಪಂಚಾಯತ್‌ ಮಂಗಳೂರು ಇದರ ಮಲೇರಿಯಾ ಮಾಸಾಚರಣೆ- 2017ರ ಪ್ರಯುಕ್ತ ನಡೆದ “ಒಳಿತಿಗಾಗಿ ಮಲೇರಿಯಾ ಕೊನೆಗೊಳಿಸಿ’  ಕಾರ್ಯಕ್ರಮಕ್ಕೆ ಕುತ್ತಾರು ದುರ್ಗಾ ವಾಹಿನಿ ಮಹಿಳಾ ಮಂಡಳಿಯಲ್ಲಿ ಶನಿವಾರ  ಚಾಲನೆ ನೀಡಿ ಮಾತನಾಡಿದರು.
ಪರಿಸರದ ಸ್ವತ್ಛತೆಗೆ ಹೆಚ್ಚಿನ ಗಮನ ನೀಡಬೇಕು. ಕೈಯಲ್ಲಿ  ಕೆಸರಾದರೂ ಆರೋಗ್ಯದ ಮತ್ತು ಸಮಾಜದ ಹಿತದೃಷ್ಟಿಯಿಂದ ಶುಚಿತ್ವವನ್ನು ಕಾಪಾಡಬೇಕಿದೆ. ಇದನ್ನು ಮುಂದಿಟ್ಟುಕೊಂಡು  ಸೋಮೇಶ್ವರ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಮುನ್ನೂರು, ಅಂಬ್ಲಿಮೊಗರು, ಹರೇಕಳ ಮತ್ತು  ಸೋಮೇಶ್ವರ ಗ್ರಾ.ಪಂ. ವ್ಯಾಪ್ತಿಗಳಲ್ಲಿ  ವಿದ್ಯಾರ್ಥಿನಿಯರೇ ಸೇರಿ ಸ್ವತ್ಛತಾ ಆಂದೋಲನ  ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ ಎಂದು ಹೇಳಿದರು.  

ಮುಂದೆ  ಕೋಟಿ ವೃಕ್ಷ ಆಂದೋಲನದಡಿಯಲ್ಲಿ  ಇನ್ನಷ್ಟು ಗಿಡಗಳನ್ನು  ಆಗ್ನೆಸ್‌ ಕಾಲೇಜಿನ ವಿದ್ಯಾರ್ಥಿ ನಿಯರು ನೆಡುವವರಿದ್ದು,  ಇದರ ಜತೆಗೆ ಗದ್ದೆಗಳಲ್ಲಿ ನೇಜಿ ನೆಡುವ  ಕಾರ್ಯದಲ್ಲೂ ಭಾಗವಹಿಸಲಿದ್ದಾರೆ  ಎಂದು ಅವರು ತಿಳಿಸಿದರು. 

ಮುನ್ನೂರು  ಪ್ರಾಥಮಿಕ ಆರೋಗ್ಯ ಕೇಂದ್ರದ ಉಪಕೇಂದ್ರದ ಆವರಣದಲ್ಲಿ ವಿದ್ಯಾರ್ಥಿನಿಯರೇ  ಸೇರಿಕೊಂಡು  ಇಂಗು ಗುಂಡಿಯನ್ನು ತೆರೆದರು.  

ತಲಾ  ಐವರು ವಿದ್ಯಾರ್ಥಿನಿಯರಂತೆ ಹಾರೆ, ಪಿಕ್ಕಾಸು ಹಿಡಿದು ಕಠಿನವಾಗಿದ್ದ ಭೂಮಿಯನ್ನು ಅಗೆದು  ಐದು ಇಂಗು ಗುಂಡಿಗಳನ್ನು ತೆರೆದರು. 
 
ಪಟ್ಟಣ ಪ್ರದೇಶದ  ವಿದ್ಯಾರ್ಥಿನಿ ಯರು ಗ್ರಾಮೀಣ ಭಾಗದಲ್ಲಿ ಜನರಿಗೆ ಉಪಯುಕ್ತವಾಗುವ ರೀತಿಯಲ್ಲಿ, ಯುವಕರನ್ನೂ ಮೀರಿಸುವ ಕೆಲಸ ದಲ್ಲಿ ಪಾಲ್ಗೊಂಡಿರುವುದು ಎಲ್ಲರ ಪ್ರಶಂಸೆಗೆ ಪಾತ್ರ ವಾಯಿತು.
 
ಇನ್ನಾದರೂ ಇಂಗು ಗುಂಡಿ ಯಿಂದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಲೆದೋರುವ  ನೀರಿನ ಅಭಾವ ಪರಿಹಾರವಾಗಬಹುದು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ಕೇಳಿಬಂತು.  ಇದೇ ಸಂದರ್ಭ ವಿದ್ಯಾರ್ಥಿ ನಿಯರಿಂದ  ಕುತ್ತಾರು ದುರ್ಗಾವಾಹಿನಿ ಮಹಿಳಾ ಮಂಡಳಿಯಿಂದ ಕುತ್ತಾರು ಸರಕಾರಿ ಶಾಲೆಯವರೆಗೆ ಮಲೇರಿಯಾ ಮಾಸಾಚರಣೆ-2 017  ಜಾಗೃತಿ ಜಾಥಾ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಆಗ್ನೆಸ್‌ ಕಾಲೇಜಿನ ಪ್ರಾಂಶು ಪಾಲೆ ಡಾ| ಎಂ. ಜೆಸ್ವೀನಾ ಎ.ಸಿ. ವಹಿಸಿದ್ದರು. 

ಸೋಮೇಶ್ವರ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಉಚ್ಚಿಲ್‌, ಮೂನ್ನೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ರೂಪಾ ಆರ್‌. ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುದೇಶ್‌, ಮಹಿಳಾ ಮಂಡಲ ಪ್ರಧಾನ ಕಾರ್ಯದರ್ಶಿ ಆಶಾಲತಾ ಕುಶಾಲಪ್ಪ, ಅಂಗನ ವಾಡಿ ಕಾರ್ಯಕರ್ತೆ ಸುನೀತಾ ಗಟ್ಟಿ ಉಪಸ್ಥಿತ ರಿದ್ದರು. ಸಮುದಾಯದತ್ತ ಆಗ್ನೇಸ್‌ ಇದರ ಸಂಯೋಜಕ ಚಂದ್ರಮೋಹನ್‌ ಮರಾಠೆ ಸ್ವಾಗತಿಸಿದರು. ಮಮತಾ ಕಾರ್ಯಕ್ರಮ ನಿರೂಪಿಸಿದರು.  ಎಡಿಲೆಟ್‌ ಸಲ್ದಾನ ವಂದಿಸಿದರು.

ಟಾಪ್ ನ್ಯೂಸ್

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು

ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು

ಪುತ್ತೂರು: 10 ಶಾಲೆಗಳಿಗೆ ಹೈ ಟೆನ್ಶ ನ್‌ ತಂತಿ ಟೆನ್ಶನ್‌| ಸ್ಥಳಾಂತರಕ್ಕೆ ಪೋಷಕರ ಆಗ್ರಹ

ಪುತ್ತೂರು: 10 ಶಾಲೆಗಳಿಗೆ ಹೈ ಟೆನ್ಶ ನ್‌ ತಂತಿ ಟೆನ್ಶನ್‌| ಸ್ಥಳಾಂತರಕ್ಕೆ ಪೋಷಕರ ಆಗ್ರಹ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

5-

ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

4-

UV Fusion: ಬದುಕು ಬಂಗಾರವಾಗಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.