ಮಂಗಳೂರು: 1.27 ಲಕ್ಷ ಸಸಿ ವಿತರಣೆಗೆ ಸಿದ್ಧ
Team Udayavani, Jun 3, 2020, 5:59 AM IST
ಮಂಗಳೂರು: ಪಡೀಲ್ನಲ್ಲಿರುವ ಮಂಗಳೂರು ಅರಣ್ಯ ವಿಭಾಗದ “ಸಸ್ಯ ಕ್ಷೇತ್ರ’ದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳಿಗೆ ವಿತರಿಸಲು 1.27 ಲಕ್ಷ ಸಸಿಗಳನ್ನು ಸಿದ್ಧಪಡಿಸಿಡಲಾಗಿದೆ. ಜೂ.1ರಿಂದ ವಿತರಣೆ ಆರಂಭವಾಗಿದೆ ಎಂದು ಮಂಗಳೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತ ನಾಡಿದ ಅವರು, 2020-21ನೇ ಸಾಲಿನಲ್ಲಿ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಸಸಿ ವಿತರಿಸಲು 40,000 ಸಾಗುವಾನಿ, ನೆಲ್ಲಿ, ನುಗ್ಗೆ, ಪೇರಳೆ, ಬೀಟೆ, ಬಿಲ್ವಪತ್ರೆ, ಸೀತಾಫಲ, ಶಿವಣೆ, ಶ್ರೀಗಂಧ, ಹೂವಾಸಿ, ಹೆಬ್ಬೇವು, ಕರಿಬೇವು, ಸಂಪಿಗೆ, ಸುರಹೊನ್ನೆ, ನೇರಳೆ, ಪನ್ನೇರಳೆ ಸಹಿತ 36ಕ್ಕೂ ಅಧಿಕ ವಿಧದ 50,000 ಗಿಡ ಸಿದ್ಧಪಡಿಸಲಾಗಿದೆ. ರಸ್ತೆ ಬದಿ ನೆಡು ತೋಪು ಬೆಳೆಸಲು 1,980 ಗಿಡ, ಇತರ ಪ್ರದೇಶಗಳಲ್ಲಿ ಅಗತ್ಯ ಕಾಮಗಾರಿಗಳಿಗಾಗಿ ಕಡಿದ ಮರದ ಬದಲಿಗೆ ಎರಡು ಸಸಿ ನೆಡಲು ವಿವಿಧ ಇಲಾಖೆಗಳಿಂದ ಪಾವತಿಸಿಕೊಂಡ ಹಣದಲ್ಲಿ ಸಸಿ ನಾಟಿ ಮಾಡಲು 6,000 ಗಿಡಗಳನ್ನು ಸಿದ್ಧಪಡಿಸಲಾಗಿದೆ ಎಂದರು.
ಹಸಿರು ಕರ್ನಾಟಕ ಯೋಜನೆ: ಹಸುರು ಕರ್ನಾಟಕ ಯೋಜನೆಯಡಿ ಕಳೆದ ಸಾಲಿನಲ್ಲಿ ತೆಂಕ ಎಡಪದವು, ಬಡಗ ಎಕ್ಕಾರು ಮತ್ತು ಬೆಂಗರೆಯಲ್ಲಿ 25 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಸಿದ ನೆಡುತೋಪಿನಲ್ಲಿ ಬದಲಿಯಾಗಿ ನೆಡಲು 500 ಗಿಡ ಸಿದ್ಧಪಡಿಸಲಾಗಿದೆ. ಈ ಯೋಜನೆಯಡಿ ಸಂಘ ಸಂಸ್ಥೆಗಳಿಗೆ, ಶಾಲಾ ಕಾಲೇಜು ಮತ್ತು ಧಾರ್ಮಿಕ ಸಂಸ್ಥೆಗಳಿಗೆ ಉಚಿತವಾಗಿ ವಿತರಿಸಲು ಸಾಗುವಾನಿ, ಶ್ರೀಗಂಧ ಮತ್ತು ಮಹಾಗನಿ ಸೇರಿ 11 ಸಾವಿರ ಗಿಡ ಸಿದ್ಧಪಡಿಸಲಾಗಿದೆ.
ಮಂಗಳೂರು ವಲಯ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಕೃಷ್ಣ ನಾಯ್ಕ, ಅರಣ್ಯ ರಕ್ಷಕ ಸೋಮನಿಂಗ ಎಚ್.ಹಿಪ್ಪರಗಿ ಉಪಸ್ಥಿತರಿದ್ದರು.
ನಗರ ಹಸುರೀಕರಣ
ನಗರ ಹಸರೀಕರಣ ಯೋಜನೆಯಡಿ ಈಗಾಗಲೇ ಗುರುತಿಸಿದ ಸ್ಥಳಗಳಲ್ಲಿ ನೆಡಲು ಒಟ್ಟು 365 ಗಿಡ, ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆಯಿಂದ ಸಾರ್ವಜನಿಕರಿಗೆ ವಿತರಿಸಲು 35 ಬಗೆಯ 10,000 ಗಿಡ ಸಿದ್ಧಪಡಿಸಲಾಗಿದೆ ಎಂದು ಪಿ.ಶ್ರೀಧರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು