ಮಂಗಳೂರು: ಬಾಲ್ಕನಿಯ ಕರ್ಟನ್ ಸರಿಪಡಿಸುವ ವೇಳೆ 5ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು
Team Udayavani, Jun 16, 2022, 10:54 AM IST
ಮಂಗಳೂರು: ನಗರದ ಕಂಕನಾಡಿಯ ವಸತಿ ಸಂಕೀರ್ಣವೊಂದರ ಐದನೇ ಮಹಡಿಯಿಂದ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ಹತ್ತನೇ ತರಗತಿ ವಿದ್ಯಾರ್ಥಿನಿ ಸೆಹರ ಇಮ್ತಿಯಾಜ್(15) ಮೃತ ಪಟ್ಟ ದುರ್ದೈವಿ.
ಸಂಜೆ ವೇಳೆ ಕುರ್ಚಿ ಮೇಲೆ ಹತ್ತಿ ಬಾಲ್ಕನಿಯ ಕರ್ಟನ್ ಸರಿಪಡಿಸುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ. ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಚಾರ್ಮಾಡಿ ಘಾಟ್ನಲ್ಲಿ ಗೂಡ್ಸ್ ವಾಹನ ಪಲ್ಟಿ: ಮೂವರು ಗಂಭೀರ
ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.