ಮಂಗಳೂರು: ಹೀಗೊಂದು ವಿಶೇಷ ಪ್ರತಿಭಟನೆ !
Team Udayavani, May 1, 2017, 12:39 PM IST
ಮಂಗಳೂರು: ಅನಧಿಕೃತ ಬ್ಯಾನರ್ಗಳನ್ನು ತೆರವುಗೊಳಿಸುವಲ್ಲಿ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಸ್ವತ್ಛ ಮಂಗಳೂರು ಕಾರ್ಯಕರ್ತರು ಹಾಗೂ ಅಗ್ಲಿ ಇಂಡಿಯನ್ಸ್ ಕಾರ್ಯಕರ್ತರು ಪಾಲಿಕೆ ಮುಂಭಾಗವೇ ಬ್ಯಾನರ್ಗಳನ್ನು ರಾಶಿ ಹಾಕುವ ಮೂಲಕ ವಿಭಿನ್ನ ರೀತಿಯಲ್ಲಿ ಎಚ್ಚರಿಕೆ ನೀಡುವ ಪ್ರತಿಭಟನ ಆಂದೋಲನವನ್ನು ಕೈಗೊಂಡಿದ್ದಾರೆ.
ಮಂಗಳೂರಿನ ಸುತ್ತಮುತ್ತಲಿರುವ ಕಸಗಳನ್ನು ತೆಗೆದು ಸ್ವತ್ಛಗೊಳಿಸುವುದಲ್ಲದೇ ನಗರದ ರೂಪಗೆಡಿಸುವ ಅನಧಿಕೃತ ಬ್ಯಾನರ್ಗಳನ್ನು ತೆಗೆದು ಸ್ವತ್ಛಗೊಳಿಸುವ ಕಾರ್ಯವನ್ನು ಸ್ವತ್ಛ ಮಂಗಳೂರು ಕಾರ್ಯಕರ್ತರು ಹಾಗೂ ಅಗ್ಲಿ ಇಂಡಿಯನ್ಸ್ ನಡೆಸುತ್ತಿದ್ದರು. ಅನಧಿಕೃತ ಬ್ಯಾನರ್ಗಳ ತೆರವಿಗಾಗಿ ಸಂಬಂಧಪಟ್ಟವರಿಗೆ ಮನವಿಯನ್ನು ಕೂಡ ಸಲ್ಲಿಸಲಾಗಿತ್ತು.
ಹಲವು ವಾರಗಳ ಕಾಲ ಸ್ವತ್ಛತಾ ಕಾರ್ಯ ನಡೆಸಿದರೂ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಮಾತ್ರ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಸ್ವತಃ ಕಾರ್ಯಕರ್ತರೇ ಮುಂದೆ ಬಂದು ಪಾಲಿಕೆಯ ಸಂಬಂಧಪಟ್ಟವರನ್ನು ಎಚ್ಚರಿಸುವ ನಿಟ್ಟಿನಲ್ಲಿ ಲಾಲ್ಬಾಗ್ ಪರಿಸರದಲ್ಲಿ ನೇತಾಡುತ್ತಿದ್ದ ಅನಧಿಕೃತ ಬ್ಯಾನರ್ಗಳನ್ನು ತೆಗೆದು ಪಾಲಿಕೆ ಕಚೇರಿಯ ಮುಂಭಾಗ ಗೇಟ್ಗೆ ಅಳವಡಿಸಿದಲ್ಲೇ ರಾಶಿ ಹಾಕಿದ್ದಾರೆ.
ಪಾಲಿಕೆ ಇನ್ನೂ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಈ ಕೆಲಸಕ್ಕಾಗಿಯೇ ಪ್ರತ್ಯೇಕ ತಂಡವನ್ನು ಕಾರ್ಯಾಚರಣೆಗೆ ಇಳಿಸುವ ಉದ್ದೇಶವನ್ನು ಸ್ವತ್ಛ ಮಂಗಳೂರಿನ ಹಿರಿಯ ಕಾರ್ಯಕರ್ತರು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ