ಮಂಗಳೂರು ಏರ್ಪೋರ್ಟ್ಗೆ ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣ ಪ್ರಶಸ್ತಿ
Team Udayavani, Mar 10, 2020, 6:31 AM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಚಂಡೀಗಢ, ತಿರುವನಂತಪುರ ಹಾಗೂ ಲಕ್ನೋ ವಿಮಾನ ನಿಲ್ದಾಣಗಳು ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣ ಪ್ರಶಸ್ತಿಗೆ ಪಾತ್ರವಾಗಿವೆ.
ಈ ನಾಲ್ಕು ನಿಲ್ದಾಣಗಳು ಒಟ್ಟು 10 ವಿಭಾಗಗಳಲ್ಲಿ ಪ್ರಯಾಣಿಕರಿಗೆ ನೀಡಿದ ಉತ್ಕೃಷ್ಟ ಸೇವೆ, ವಿಶ್ವ ಗುಣಮಟ್ಟದ ಸೌಲಭ್ಯಗಳಿಗಾಗಿ ಈ ಪುರಸ್ಕಾರ ಸಂದಿದೆ.
ಜಾಗತಿಕ ಸಂಸ್ಥೆಯಾಗಿರುವ ಏರ್ಪೋರ್ಟ್ಸ್ ಕೌನ್ಸಿಲ್ ಇಂಟರ್ನ್ಯಾಶನಲ್ (ಎಸಿಐ) ವತಿಯಿಂದ ಏರ್ಪೋರ್ಟ್ ಸರ್ವಿಸ್ ಕ್ವಾಲಿಟಿ (ಎಎಸ್ಕ್ಯೂ)ಯು ಈ ಸರ್ವೆ ನಡೆಸಿದೆ. 2019ರಲ್ಲಿ ಜಗತ್ತಿನ 356 ವಿಮಾನ ನಿಲ್ದಾಣಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು. ಸರ್ವೇ ತಂಡವು ವಿಮಾನ ನಿಲ್ದಾಣಗಳಿಗೆ ಆಗಮಿಸಿದಾಗ ಪ್ರಯಾಣಿಕರು ವ್ಯಕ್ತಪಡಿಸುವ ಅಭಿಪ್ರಾಯ ಹಾಗೂ ಪ್ರಯಾಣಿಕರ ಸೇವಾ ಸಂತೃಪ್ತಿಯನ್ನು ಆಧರಿಸಿ ಎಎಸ್ಕ್ಯೂ ಅಂಕ ನೀಡಲಾಗುತ್ತದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರಯಾಣಿಕರ ಸೇತುವೆ ನಿರ್ಮಾಣ, ಟರ್ಮಿನಲ್ ಕಟ್ಟಡದ ಸುಧಾರಣೆ ಮೂಲಕ ಪರಿಸರ ಸುಂದರೀಕರಣ, ವಿಮಾನಗಳ ಮಾಹಿತಿ ಪ್ರದರ್ಶನ ಫಲಕ ಅಳವಡಿಕೆ, ಆ್ಯಪ್ ಆಧರಿತ ಕ್ಯಾಬ್ ಆಗ್ರಿಗೇಟರ್ ವ್ಯವಸ್ಥೆ, ಅಟೊಮ್ಯಾಟಿಕ್ ಎಲೆಕ್ಟ್ರಾನಿಕ್ ಆಕ್ಸೆಸ್ ಕಂಟ್ರೋಲ್, ಆಗಮನ-ನಿರ್ಗಮನಕ್ಕೆ ಇ-ಗೇಟ್ ವ್ಯವಸ್ಥೆ, ಟರ್ಮಿನಲ್ ಹಾಗೂ ನಗರದ ಕಡೆಗೆ ಉತ್ತಮ ಸೈನೇಜ್ ಫಲಕಗಳು, ಎಟಿಎಂ, 500ರಷ್ಟು ಟ್ರಾಲಿಗಳು, ಪರಿಸರ ಸ್ನೇಹಿ ವ್ಯವಸ್ಥೆಗಳನ್ನು ಮಂಗಳೂರು ವಿಮಾನ ನಿಲ್ದಾಣ ಹೊಂದಿವೆ. ಅಂಗವಿಕಲರಿಗಾಗಿ ಪೂರಕ ವ್ಯವಸ್ಥೆ, ಸಹಾಯ ಕೇಂದ್ರ, ಅನೇಕ ನಗದು ರಹಿತ ಪಾವತಿ ವ್ಯವಸ್ಥೆ, ಟರ್ಮಿನಲ್ ಕಟ್ಟಡದ ಪ್ರಮುಖ ಸ್ಥಳಗಳಲ್ಲಿ ಸ್ಥಳೀಯ ಕಲೆ, ಜಾನಪದ ಪ್ರತಿಬಿಂಬಿಸುವ ಪ್ರದರ್ಶನವನ್ನು ಪ್ರಯಾಣಿಕರು ಮೆಚ್ಚಿಕೊಂಡಿದ್ದಾರೆ ಎಂದು ಸರ್ವೇಯಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ