ಮಂಗಳೂರು;ಪಾರ್ಕ್ನಲ್ಲಿದ್ದ ಅನ್ಯಕೋಮಿನ ಜೋಡಿಗಳ ಮೇಲೆ ದಾಳಿ
Team Udayavani, Jan 2, 2018, 5:07 PM IST
ಮಂಗಳೂರು: ನಗರದ ಪಿಲಿಕುಳ ನಿಸರ್ಗ ಧಾಮದಲ್ಲಿ ಜೊತೆಯಲ್ಲಿದ್ದ 2 ಅನ್ಯಕೋಮಿನ ಜೋಡಿಯ ಮೇಲೆ ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದ್ದು,ಭಾರೀ ಚರ್ಚೆಗೆ ಕಾರಣವಾಗಿದೆ.
ಹಿಂದೂ ಯುವತಿಯರಿಬ್ಬರು ಅನ್ಯ ಕೋಮಿನ ಯುವಕರೊಂದಿಗೆ ಪಾರ್ಕ್ನಲ್ಲಿದ್ದ ವೇಳೆ ಸಂಘಟನೆಯೊಂದರ ಕಾರ್ಯಕರ್ತರು ಎನ್ನಲಾದವರಿಂದ ದಾಳಿ ನಡೆದಿದೆ.
ವಿಷಯ ತಿಳಿದು ಪೊಲೀಸರು ಸ್ಥಳಕ್ಕಾಗಮಿಸಿದ್ದು ಈ ವೇಳೆ ಪೊಲೀಸ್ ಸಿಬಂದಿಯ ಸಮ್ಮುಖದಲ್ಲೇ ಯುವತಿಯೊಬ್ಬಳಿಗೆ ಯುವಕನೊಬ್ಬ ಥಳಿಸಿರುವುದು ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿದೆ.
ಕಾವೂರು ಪೊಲೀಸರು ಹಲ್ಲೆ ನಡೆಸಿದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಮೂಡು ಶೆಡ್ಡೆಯ ಸಂತೋಷ್ ಎಂದು ತಿಳಿದು ಬಂದಿದೆ.
ಯುವತಿಯ ಸಂಬಂಧಿಕರ ಸೂಚನೆಯ ಮೇರೆಗೆ ದಾಳಿ ನಡೆಸಲಾಗಿದೆ ಎಂದೂ ಹೇಳಲಾಗುತ್ತಿದೆ.
ನೈತಿಕ ಪೊಲೀಸ್ ಗಿರಿ ಎ ನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ರಾಮಲಿಂಗಾ ರೆಡ್ಡಿ ‘ಈ ಬಗ್ಗೆ ಕ್ರಮ ಕೈಗೊಳ್ಳಲು ಅಲ್ಲಿನ ಎಸ್ಪಿಗೆ ತಿಳಿಸಿದ್ದೇನೆ. ಮಧ್ಯಾಹ್ನದ ವೇಳೆ ಹಲ್ಲೆ ನಡೆಸಿದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದಿದ್ದಾರೆ.
ಸಚಿವ ಯು.ಟಿ .ಖಾದರ್ ಅವರು ಪ್ರತಿಕ್ರಿಯೆ ನೀಡಿದ್ದು ‘ಯುವತಿಯ ಮೇಲೆ ಹಲ್ಲೆ ನಡೆದಿರುವುದು ತಪ್ಪು, ಪೊಲೀಸರ ಮುಂದೆ ಹಲ್ಲೆ ನಡೆದಿದ್ದರೆ ಆ ಸಿಬಂದಿಯ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದ ಕುರಿತು ಗೃಹ ಸಚಿವರೊಂದಿಗೆ ಮಾತನಾಡಿದ್ದೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ