ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಹೆದ್ದಾರಿ ನಿರ್ಮಾಣ


Team Udayavani, May 27, 2017, 11:07 AM IST

nalin.jpg

ಪುತ್ತೂರು: ಕೇಂದ್ರ ಸರಕಾರದ ಭಾರತ್‌ ಮಾಲಾ ಯೋಜನೆಯಡಿ 1.18 ಲಕ್ಷ ಕೋ. ರೂ. ವೆಚ್ಚದಲ್ಲಿ ಮಂಗಳೂರು -ಬೆಂಗಳೂರು ಹೈಸ್ಪೀಡ್‌ ಹೆದ್ದಾರಿ ನಿರ್ಮಾಣವಾಗಲಿದೆ ಎಂದು ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.

ಶುಕ್ರವಾರ ಪುತ್ತೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಹೈಸ್ಪೀಡ್‌ ಹೆದ್ದಾರಿಗಳ ನಿರ್ಮಾಣದಲ್ಲಿ ಮೊದಲನೇ ಹಂತಕ್ಕೆ ನಾಲ್ಕು ಹೆದ್ದಾರಿಗಳನ್ನು ಆಯ್ಕೆ ಮಾಡಿದ್ದು, ಅವುಗಳಲ್ಲಿ ಬೆಂಗಳೂರು -ಮಂಗಳೂರು ಒಂದಾಗಿದೆ. ಮುಂಬಯಿ-ಕೋಲ್ಕತ್ತಾ, ಲೂಧಿಯಾನ-ಕಾಂಡ್ಲಾ, ಪೋರ್‌ಬಂದರ್‌-ಸಿಲ್ಚಾರ್‌ ಹೈಸ್ಪೀಡ್‌ ಹೆದ್ದಾರಿಗಳು 3.8 ಲಕ್ಷ ಕೋ.ರೂ.ಗಳಲ್ಲಿ ನಿರ್ಮಾಣವಾಗಲಿವೆ. ಉತ್ಕೃಷ್ಟ ಮಟ್ಟದ ಈ ಹೆದ್ದಾರಿಯಿಂದ 4 ಗಂಟೆಗಳಲ್ಲಿ ಮಂಗಳೂರಿನಿಂದ ಬೆಂಗಳೂರು ತಲುಪಲು ಸಾಧ್ಯವಾಗಲಿದ್ದು, 5 ವರ್ಷದ ಒಳಗೆ ಈ ಯೋಜನೆ ಸಾಕಾರಗೊಳ್ಳಲಿದೆ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ 3 ವರ್ಷ ಪೂರೈಸುತ್ತಿದ್ದು, ವಿವಿಧ ಯೋಜನೆಗಳ ಮೂಲಕ ಜನಸಾಮಾನ್ಯರು, ಬಡವರು, ರೈತರು, ಮಹಿಳೆಯರು ಸ್ವಾಭಿಮಾನದ ಬದುಕು ನಡೆಸುವಂತೆ ವಾತಾವರಣ ಸೃಷ್ಟಿಯಾಗಿದೆ. ಅನಿವಾಸಿ ಭಾರತೀಯರೂ ಇಂದು ಹೆಮ್ಮೆಯಿಂದ ನಾವು ಭಾರತೀಯರು ಎನ್ನುತ್ತಿದ್ದಾರೆ ಎಂದರು.

ರಾಜಕೀಯ ಪರಿವರ್ತನೆ
ಜಗತ್ತಿನಲ್ಲಿ ಆರ್ಥಿಕ ಕುಸಿತ ಆದಾಗಲೂ ನೋಟು ಅಪನಗದೀಕರಣ ಮೂಲಕ ಭಾರತವನ್ನು ಆರ್ಥಿಕ ಸದೃಢತೆಗೆ ತಂದ ನರೇಂದ್ರ ಮೋದಿಯವರ ದಿಟ್ಟತನ ಎಲ್ಲರಿಗೂ ಮೆಚ್ಚುಗೆಯಾಗಿದೆ ಎಂದರು.

ಜಿಲ್ಲೆಗೆ 13 ಸಾವಿರ ಕೋ. ರೂ.
ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ 3 ವರ್ಷ ಅವಧಿಯಲ್ಲೇ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕೆಲಸಗಳಿಗಾಗಿ 13 ಸಾವಿರ ಕೋ. ರೂ. ಅನುದಾನ ಲಭಿಸಿದೆ ಎಂದರು.

ಸಚಿವರ ಭರವಸೆ
ರೈಲ್ವೇಗೆ ಸಂಬಂಧಿಸಿ ಕುಡ್ಲ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಸೇರಿದಂತೆ 3-4 ಬೇಡಿಕೆಗಳು ಇವೆ. ಈ ಕುರಿತು ರೈಲ್ವೇ ಸಚಿವರಿಗೆ ವಿನಂತಿ ಮಾಡಲಾಗಿದ್ದು, ಅಕ್ಟೋಬರ್‌ ಅನಂತರ ಬೇಡಿಕೆಗಳನ್ನು ಈಡೇರಿಸುವುದಾಗಿ ರೈಲ್ವೇ ಸಚಿವರು ಭರವಸೆ ನೀಡಿದ್ದಾರೆ ಎಂದು ನಳಿನ್‌ ಕುಮಾರ್‌ ಕಟೀಲು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಜೀವಂಧರ ಜೈನ್‌, ಕಾರ್ಯದರ್ಶಿ ರಾಮದಾಸ್‌ ಹಾರಾಡಿ, ತಾ.ಪಂ.ಅಧ್ಯಕ್ಷೆ ಭವಾನಿ ಚಿದಾನಂದ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.