ಮಂಗಳೂರು: ಸಿಸಿಬಿ ಕಾರ್ಯಾಚರಣೆ; ಗಾಂಜಾ ಮಾರುತ್ತಿದ್ದ 12 ವಿದ್ಯಾರ್ಥಿಗಳ ಬಂಧನ
Team Udayavani, Jul 9, 2022, 1:16 PM IST
ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತರನ್ನು ಕೇರಳದ ಶಾನೂಫ್ ಅಬ್ದುಲ್ ಗಫೂರ್ (21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ ಟಿ ಪಿ(22), ಫಹಾದ್ ಹಬೀಬ್ (22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಎಂದು ಗುರುತಿಸಲಾಗಿದೆ.
ಬಂಧಿತರಿಂದ 900 ಗ್ರಾಂ ತೂಕದ ರೂ. 20,000/- ಮೌಲ್ಯದ ಗಾಂಜಾ, ಗಾಂಜಾವನ್ನು ಸೇದುವ ಸ್ಮೊಕಿಂಗ್ ಪೈಪ್ಸ್ , ರೋಲಿಂಗ್ ಪೇಪರ್, ರೂ. 4,500/- ಹಾಗೂ 11 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,85,000/- ಆಗಬಹುದು.
ಇದನ್ನೂ ಓದಿ: ಸಕಲೇಶಪುರ: ಹಾಸನದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಲಾರಿಗೆ ಢಿಕ್ಕಿ; 15 ಮಂದಿಗೆ ಗಾಯ
ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ರವರ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ನಗರದ ವೆಲೆನ್ಸಿಯಾ ಸೂಟರ್ ಪೇಟೆ 3 ನೇ ಕ್ರಾಸ್ ನ ವಸತಿಗೃಹವೊಂದಕ್ಕೆ ದಾಳಿ ನಡೆಸಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಹೊಂದಿದ್ದ 12 ವಿದ್ಯಾರ್ಥಿಗಳನ್ನು ಬಂಧಿಸಿದರು.
ಈ ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಯುವಕರು/ವಿದ್ಯಾರ್ಥಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ