ಮಂಗಳೂರು ನಗರವನ್ನು ನಂ. 1 ಸ್ಥಾನಕ್ಕೇರಿಸಲು ವಾರ ಕಾಲ ಅವಕಾಶ

ಸುಲಲಿತ ಜೀವನ ಸೂಚ್ಯಂಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ

Team Udayavani, Feb 23, 2020, 5:59 AM IST

ram-28

ಮಹಾನಗರ: ಸುಲಲಿತ ಜೀವನ ಸೂಚ್ಯಂಕ ಸಮೀಕ್ಷೆ ಮೂಲಕ ಮಂಗಳೂರು ನಗರವನ್ನು ನಂ. 1 ಸ್ಥಾನಕ್ಕೇರಿಸಲು ನಾಗರಿಕರಿಗೆ ಇನ್ನು ಒಂದು ವಾರಗಳ ಕಾಲಾವಕಾಶವಿದೆ. ನಮ್ಮ ನಗರವನ್ನು ಆಯ್ಕೆ ಮಾಡಲು ಈ ಅವಕಾಶವನ್ನು ಸದುಪಯೋಗಪಡಿಸಿ ಕೊಳ್ಳಬಹುದಾಗಿದೆ.

ದೇಶದ ಸ್ಮಾರ್ಟ್‌ಸಿಟಿ ಮಿಷನ್‌ ನಗರಗಳು ಪ್ರಮುಖ ಮೂಲ ಸೌಕರ್ಯ ಒದಗಿಸುವ, ನಾಗರಿಕರಿಗೆ ಯೋಗ್ಯವಾದ ಸುಲಲಿತ ಜೀವನಮಟ್ಟ ನೀಡುವ ಸ್ವಚ್ಛ ಮತ್ತು ಸುಸ್ಥಿರ ಪರಿಸರ ಹಾಗೂ ಉತ್ತಮ ಪರಿಹಾರಗಳಿಗೆ ಸಂಬಂಧಿಸಿದಂತೆ ನಗರವನ್ನು ಉತ್ತೇಜಿಸುವ ದೃಷ್ಟಿಯಿಂದ ಸುಲಲಿತ ಜೀವನ ಸೂಚ್ಯಂಕ ಸಮೀಕ್ಷೆಯನ್ನು ನಡೆಸುತ್ತಿದೆ.

ಸಮೀಕ್ಷೆಯು ಆನ್‌ಲೈನ್‌ ಮೂಲಕ ನಡೆಯುತ್ತಿದ್ದು, ಫೆ. 1ರಿಂದ ಆರಂಭ ವಾಗಿದ್ದು, ಫೆ. 29ರ ವರೆಗೆ ಇರುತ್ತದೆ. ನಗರದ ಕುಡಿಯುವ ನೀರು, ರಸ್ತೆ, ಶಿಕ್ಷಣ, ಸಾರಿಗೆ ವ್ಯವಸ್ಥೆ, ಒಳಚರಂಡಿ ಸಹಿತ ಒಟ್ಟಾರೆ ಮೂಲ ಸೌಕ ರ್ಯಗಳ ಬಗ್ಗೆ 22 ಪ್ರಶ್ನೆಗಳನ್ನು ಕೇಳಲಾಗಿದೆ. ಪ್ರಶ್ನೆಗಳ ಕೆಳಗೆ ಆಯ್ಕೆಗಳನ್ನು ಕೊಡಲಾಗಿದ್ದು, ಜನರು ಧನಾತ್ಮಕ, ಋಣಾತ್ಮಕ ವಾಗಿದ್ದಲ್ಲಿ ಹಾಗೆಯೇ ಉತ್ತರ ತಿಳಿಸಲು ಅವಕಾಶವಿದೆ.

ಜನರ ಪಾಲ್ಗೊಳ್ಳುವಿಕೆಯ ಮೂಲಕ ನಗರದ ಸಮಸ್ಯೆ ಅಥವಾ ಅಭಿವೃದ್ಧಿಯಾಗ ಬೇಕಿರುವ ಕ್ಷೇತ್ರಗಳ ಬಗ್ಗೆ ಸರಕಾರಕ್ಕೆ ತಿಳಿಸಲು ಸಾಧ್ಯವಿದೆ. ಉತ್ತಮ ಅಂಶಗಳ ಬಗ್ಗೆಯೂ ಜನರ ಪಾಲ್ಗೊಳ್ಳುವಿಕೆಯೇ ನಿರ್ಧರಿಸುವುದರಿಂದ ಮುಂದಿನ ಒಂದು ವಾರ ಕಾಲ ಜನ ಹೆಚ್ಚಿನ ಆಸಕ್ತಿಯೊಂದಿಗೆ ಪಾಲ್ಗೊಂಡು ನಮ್ಮ ನಗರವನ್ನು ಆಯ್ಕೆ ಮಾಡಬಹುದು. ಸಾರ್ವಜನಿಕರು https://e0l2019.org/CitizenFeedback ಲಿಂಕ್‌ ಓಪನ್‌ ಮಾಡಿ ತಮ್ಮ ಅಭಿಪ್ರಾಯ ತಿಳಿಸಬಹುದು.

ಪಾಲ್ಗೊಳ್ಳುವಿಕೆಯಲ್ಲಿ ವರೆಗೆ 3ನೇ ಸ್ಥಾನ
ಸಮೀಕ್ಷೆಯ ಇಲ್ಲಿವರೆಗಿನ ಪಾಲ್ಗೊಳ್ಳುವಿಕೆಯ ಶೇಕಡಾವಾರು ಪ್ರಮಾಣದಲ್ಲಿ ಮಂಗಳೂರು 3ನೇ ಸ್ಥಾನದಲ್ಲಿದ್ದು, ತುಮಕೂರು ಮೊದಲ ಸ್ಥಾನ ದಲ್ಲಿದೆ. ಆದರೆ ನಿಗದಿತ ಗುರಿ ಮೀರಲಾಗಿದೆ. ಮಂಗಳೂರಿ ನಲ್ಲಿ 5,172ರಷ್ಟು ಮಂದಿ ಪಾಲ್ಗೊಳ್ಳುವ ಗುರಿ ಇಟ್ಟು ಕೊಳ್ಳಲಾಗಿತ್ತಾದರೂ 6,246 ಮಂದಿ ಈಗಾಗಲೇ ಅಭಿಪ್ರಾಯ ವ್ಯಕ್ತಪಡಿಸಿರುವುದರಿಂದ ಗುರಿ ಮೀರಿ ಸಾಧನೆಯಾಗಿದೆ. ಆದರೆ ಜನರ ಪಾಲ್ಗೊಳ್ಳುವಿಕೆಯ ಶೇಕಡಾವಾರು ಪ್ರಮಾಣದಲ್ಲಿ ಮಂಗಳೂರಿನಲ್ಲಿ ಶೇ. 121 ಪ್ರಮಾಣ ಆಗುವುದರೊಂದಿಗೆ 3ನೇ ಸ್ಥಾನದಲ್ಲಿದೆ. ಶೇ. 133ರಷ್ಟು ಜನರು ಪಾಲ್ಗೊಳ್ಳುವಿಕೆಯೊಂದಿಗೆ ತುಮಕೂರು ಮೊದಲ ಸ್ಥಾನದಲ್ಲಿದ್ದರೆ, ಶೇ. 129ರಷ್ಟು ಜನರ ಪಾಲ್ಗೊಳ್ಳುವಿಕೆಯೊಂದಿಗೆ ದಾವಣಗೆರೆ ಎರಡನೇ ಸ್ಥಾನದಲ್ಲಿದೆ. ಫೆ. 29ರೊಳಗೆ ನಾಗರಿಕರ ಪಾಲ್ಗೊಳ್ಳುವಿಕೆಯಲ್ಲಿ ಈ ಎರಡೂ ನಗರಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಕಾಯ್ದುಕೊಳ್ಳುವ ಸವಾಲು ಮಂಗಳೂರಿಗಿದೆ. ಇದಕ್ಕೆ ಜನರ ಸಹಕಾರ ಅಗತ್ಯವಾಗಿದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು.

ಗುರಿ ಮೀರಿ ಸಾಧನೆ
ಸಮೀಕ್ಷೆಯಲ್ಲಿ ನಗರದ ಒಟ್ಟು ಜನಸಂಖ್ಯೆಯ ಶೇ. 1ರಷ್ಟು ಜನ ಪಾಲ್ಗೊಳ್ಳಲೇಬೇಕೆಂಬ ನಿಯಮವಿದೆ. ಅದಕ್ಕಾಗಿ ಪ್ರತಿ ನಗರಗಳಿಗೆ ಒಟ್ಟು ಜನಸಂಖ್ಯೆಯ ಶೇ. 1ರಷ್ಟು ಜನರ ಗುರಿ ನಿಗದಿಪಡಿಸಲಾಗಿದೆ. ಮಂಗಳೂರಿನಲ್ಲಿ ಒಟ್ಟು 5.20 ಲಕ್ಷ ಜನಸಂಖ್ಯೆಯಿದ್ದು, ಈ ಪೈಕಿ ಶೇ. 1 ಅಂದರೆ 5,172 ಮಂದಿಯನ್ನು ಒಳಗೊಳ್ಳುವ ಗುರಿ ನಿಗದಿಪಡಿಸಲಾಗಿದೆ. ಪ್ರಸ್ತುತ ನಿಗದಿತ ಗುರಿ ಮೀರಿ ಸಾಧನೆಯಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ
ಸಮೀಕ್ಷೆಗೆ ಗುರಿ ನಿಗದಿಪಡಿಸಿರುವುದು ಗುರಿ ಸಾಧನೆಯಾಗಬೇಕೆಂಬ ದೃಷ್ಟಿಯಿಂದ. ಆದರೆ ಜನರ ಪಾಲ್ಗೊಳ್ಳುವಿಕೆ ಗುರಿ ಮೀರಿ ಸಾಧನೆಯಾಗುವುದರೊಂದಿಗೆ ನಂ. 1 ಸ್ಥಾನಕ್ಕೇರಬೇಕು. ಇದರಿಂದ ಭವಿಷ್ಯದಲ್ಲಿ ನಗರದ ಆದ್ಯತೆಗಳನ್ನು ಸರಕಾರಕ್ಕೆ ತಿಳಿಸಲು ಸುಲಭವಾಗುತ್ತದೆ. ಮುಂದಿನ ಒಂದು ವಾರ ಕಾಲ ಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು.
 - ಮೊಹಮ್ಮದ್‌ ನಝೀರ್‌, ನಿರ್ದೇಶಕ, ಸ್ಮಾರ್ಟ್‌ ಸಿಟಿ ಯೋಜನೆ ಮಂಗಳೂರು

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.