ಮಂಗಳೂರು : ಡಿ.7 ರ ಅಪರಾಧ ಸುದ್ದಿಗಳು
Team Udayavani, Dec 8, 2017, 10:15 AM IST
ಗೋ ಮಾಂಸ ಸಾಗಾಟ: ಇಬ್ಬರ ಸೆರೆ
ಬೆಳ್ತಂಗಡಿ: ಇಂದಬೆಟ್ಟು ಸಮೀಪ ಆಪೆ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಗುರುವಾರ ಬೆಳಗ್ಗೆ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಿಯಿಂದ ನಾವೂರು ಕಡೆಗೆ ಆಪೆ ರಿಕ್ಷಾದಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಸಾಗಿಸುತ್ತಿ¤ದ್ದ ಖಚಿತ ಮಾಹಿತಿಯನ್ನು ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಗಾಡಿ ಇಂದಬೆಟ್ಟು ನಿವಾಸಿಗಳಾದ ಶೇಕಬ್ಬ (65) ಹಾಗೂ ಶಬ್ಬೀರ್ (26) ಬಂಧಿತರು. ಆಪೆ ರಿಕ್ಷಾ ಹಾಗೂ 50 ಕೆಜಿ ಮಾಂಸವನ್ನು ಮುಟ್ಟುಗೋಲು ಹಾಕಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ ಢಿಕ್ಕಿ: ಟ್ರಾಕ್ಟರ್ ಪಲ್ಟಿ- ಒಬ್ಬನಿಗೆ ಗಾಯ
ಮಂಗಳೂರು: ಬೋಂದೆಲ್ ಚರ್ಚ್ ಎದುರು ಗುರುವಾರ ಬೆಳಗ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಬಸ್ ಪ್ರಯಾಣಿಕ ಪಚ್ಚನಾಡಿಯ ನವೀನ್ ಕುಮಾರ್ (60) ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಟ್ರ್ಯಾಕ್ಟರ್ ಪದವಿನಂಗಡಿ ಕಡೆಯಿಂದ ಪಚ್ಚನಾಡಿ ಕಡೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಬಸ್ ಡಿಕ್ಕಿಯಾಗಿತ್ತು. ಟ್ರ್ಯಾಕ್ಟರ್ ಸಂಪೂರ್ಣ ನಜ್ಜು ಗುಜ್ಜಾಗಿದೆ. ಬಸ್ ಚಾಲಕ ಅತಿ ವೇಗವಾಗಿ ಚಲಾಯಿಸಿಕೊಂಡು ಬಂದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಬಸ್ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಾಗ ಬಸ್ನಲ್ಲಿದ್ದ ಇತರ ಪ್ರಯಾಣಿಕರು ನವೀನ್ ಕುಮಾರ್ ಅವರ ಮೇಲೆ ಬಿದ್ದಿದ್ದಾರೆ. ಆಗ ಅವರ ಕೈಗೆ ಮೂಳೆ ಮುರಿತದ ಗಾಯವಾಗಿದೆ ಎಂದು ಕೇಸು ದಾಖಲಿಸಿಕೊಂಡ ದಕ್ಷಿಣ ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಬೊಂದೇಲ್ ಚರ್ಚ್ ಎದುದು ಆಗಿಂದಾಗ ಅಪಘಾತಗಳು ಸಂಭವಿಸುತ್ತಿದ್ದು, ಹಂಪ್ಸ್ ಅಥವಾ ಬ್ಯಾರಿಕೇಡ್ ಅಳವಡಿಸಿ ಅಪಘಾತ ನಿಯಂತ್ರಿಸುವ ಕಡೆಗೆ ಪೊಲೀಸರು ಪ್ರಯತ್ನಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಕುಳಾಯಿ ಗ್ರಾಮದ ನಿವಾಸಿ ನಾಪತ್ತೆ
ಸುರತ್ಕಲ್: ಇಲ್ಲಿನ ಕುಳಾಯಿ ಗ್ರಾಮದ ಚಿತ್ರಾಪುರ ನಿವಾಸಿ ಸುಬ್ರಹ್ಮಣ್ಯ ಭಟ್(60) ಅವರು ಡಿ.30ರಂದು ಮುಂಜಾನೆ ಮನೆ ಬಿಟ್ಟು ಹೋದವರು ಕಾಣೆಯಾಗಿದ್ದಾರೆ.
ಪೌರೋಹಿತ್ಯ ಮಾಡಿಕೊಂಡಿದ್ದ ಅವರು ಹಣಕಾಸಿನ ಅಡಚಣೆಯಿದ್ದು ವ್ಯವಸ್ಥೆ ಮಾಡುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದಾರೆ ಎನ್ನಲಾಗಿದೆ. 152 ಸೆ.ಮೀ ಎತ್ತರ, ಸಾಧಾರಣ ಮೈಕಟ್ಟು , ಬಿಳಿ ಮೈ ಬಣ್ಣ,ಪಂಚೆ ಹಾಗೂ ಕ್ರೀಂ ಬಣ್ಣದ ಅಂಗಿ ತೊಟ್ಟಿದ್ದಾರೆ. ಈ ಕುರಿತು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ