ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಶ್ರದ್ಧಾ ಭಕ್ತಿಯ ಮಂಗಳೂರು ದಸರಾ ಸಂಪನ್ನ

Team Udayavani, Oct 16, 2021, 6:30 AM IST

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಮಂಗಳೂರು:ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು.
ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು.

ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ ನೆರವೇರಿತು. ರಾತ್ರಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ನಡೆದು ಬಳಿಕ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನಡೆದು ಅವಭೃಥ ಸ್ನಾನ ನಡೆಯಿತು. ಅ. 16ರಂದು ರಾತ್ರಿ 7 ರಿಂದ 8 ಗಂಟೆಯ ವರೆಗೆ ಭಜನೆ, ರಾತ್ರಿ 7.30ಕ್ಕೆ ಗುರುಪೂಜೆ ನಡೆಯಲಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ವರ್ಣರಂಜಿತ ಮೆರವಣಿಗೆ ಇರಲಿಲ್ಲ. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವನ್ನು ಸಾಂಕೇತಿಕವಾಗಿ ರಾಜಬೀದಿಯಲ್ಲಿ ನಗರ ಪ್ರದಕ್ಷಿಣೆ ನಡೆಸಲಾಯಿತು.

ಹುಲಿ ವೇಷದ ಆಕರ್ಷಣೆ
ಸಂಜೆ ವಿವಿಧ ತಂಡಗಳಿಂದ ನಡೆದ ಹುಲಿ ವೇಷ ಸೇವೆ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.ಈ ಬಾರಿ ದಸರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ದ್ದರು. ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ, ದೇವಸ್ಥಾನದ ಅಧ್ಯಕ್ಷ ಎಚ್‌.ಎಸ್‌.ಸಾಯಿರಾಮ್‌, ಉಪಾಧ್ಯಕ್ಷೆ ಉರ್ಮಿಳಾ ರಮೇಶ್‌, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಖಜಾಂಚಿ ಪದ್ಮರಾಜ್‌ ಆರ್‌., ವಿಧಾನಪರಿಷತ್‌ ಸದಸ್ಯಹರೀಶ್‌ ಕುಮಾರ್‌, ಕಿಯೋನಿಕ್ಸ್‌ ಅಧ್ಯಕ್ಷಹರಿಕೃಷ್ಣ ಬಂಟ್ವಾಳ, ದೇವಸ್ಥಾನದ ಟ್ರಸ್ಟಿಗಳಾದ ರವಿಶಂಕರ ಮಿಜಾರು, ಕೆ. ಮಹೇಶ್ಚಂದ್ರ, ಎಂ. ಶೇಖರ್‌ ಪೂಜಾರಿ, ಸಂತೋಷ್‌ ಕುಮಾರ್‌, ಜಗದೀಪ್‌ ಡಿ. ಸುವರ್ಣ, ದೇವಸ್ಥಾನದ ಅಭಿವೃದ್ಧಿಮಂಡಳಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷೆ ಡಾ| ಅನಸೂಯ ಬಿ.ಟಿ. ಸಾಲ್ಯಾನ್‌, ಉಪಾಧ್ಯಕ್ಷ ಡಾ| ಬಿ.ಜಿ. ಸುವರ್ಣ, ಸದಸ್ಯರಾದ ವೇದ ಕುಮಾರ್‌, ಜಯ ವಿಕ್ರಮ್‌, ರಾಧಾಕೃಷ್ಣ, ಎಚ್‌.ಎಸ್‌. ಜೈರಾಜ್‌, ಶೈಲೇಂದ್ರ ಸುವರ್ಣ, ರಮಾನಾಥ್‌ ಕರಂದೂರು, ಲೀಲಾಕ್ಷ ಕರ್ಕೇರ, ಸೂರ್ಯಕಾಂತ್‌ ಜೆ. ಸುವರ್ಣ, ಚಂದನ್‌ದಾಸ್‌, ಗೌರವಿ ಪಿ.ಕೆ.,ಕಿಶೋರ್‌ ದಂಡೆಕೇರಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಕೊಲ್ಲೂರು: ರಥೋತ್ಸವ
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಅ. 14ರಂದು ಚಂಡಿಕಾ ಯಾಗ, ಮಕ್ಕಳಿಗೆ ವಿದ್ಯಾರಂಭ, ನವಾನ್ನಪ್ರಾಶನ ಹಾಗೂ ರಾತ್ರಿ ರಥೋತ್ಸವ ಸರಳವಾಗಿ ನಡೆಯಿತು.

ನವರಾತ್ರಿ ರಥೋತ್ಸವದ ಸಂದರ್ಭ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಬಹುತೇಕ ಸ್ಥಳೀಯರು ಮಾತ್ರ ರಥೋತ್ಸವದಲ್ಲಿ ಪಾಲ್ಗೊಂಡರು.

ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಕಾರ್ಯನಿರ್ವಹಣಾ ಧಿಕಾರಿ ಮಹೇಶ್‌, ಗ್ರಾ.ಪಂ. ಅಧ್ಯಕ್ಷ ಶಿವರಾಮಕೃಷ್ಣ ಭಟ್‌, ಸಮಿತಿ ಸದಸ್ಯರಾದ ಡಾ| ಅತುಲ್‌ ಕುಮಾರ್‌ ಶೆಟ್ಟಿ, ಜಯಾನಂದ ಹೋಬಳಿದಾರ್‌, ಗಣೇಶ‌ ಕಿಣಿ, ಸಂಧ್ಯಾ ರಮೇಶ, ಗೋಪಾಲಕೃಷ್ಣ, ಶೇಖರ ಪೂಜಾರಿ ಉಪಸ್ಥಿತರಿದ್ದರು.

ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ಅಮ್ಮ ದೇವಿ ನಾರಾಯಣಿ ಎಂಬ ಉದ್ಘೋಷದೊಡನೆ ಭಕ್ತರು ದೇವಿ ಸ್ತ್ರೋತ್ರವನ್ನು ಜಪಿಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ ಪೂಂಜ ಶ್ರೀದೇವಿಯ ದರ್ಶನ ಪಡೆದರು.

ಶ್ರೀಕೃಷ್ಣ ಮಠದಲ್ಲಿ ವಿಜಯದಶಮೀ ಉತ್ಸವ
ಉಡುಪಿ: ಶ್ರೀಕೃಷ್ಣ ಮಠ ಶುಕ್ರವಾರ ವಿಜಯದಶಮೀ ಮತ್ತು ಮಧ್ವಜಯಂತಿ ಉತ್ಸವವನ್ನು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ನೇತೃತ್ವದಲ್ಲಿ ಆಚರಿಸಲಾಯಿತು. ನವರಾತ್ರಿ ಎಲ್ಲ ದಿನಗಳಲ್ಲಿ ಶ್ರೀಕೃಷ್ಣ ದೇವರಿಗೆ ದೇವಿ ಅಲಂಕಾರವನ್ನು ನಡೆಸಿ ಪೂಜಿಸಿದ್ದು ವಿಜಯದಶಮಿಯಂದು ಸಮಾಪನಗೊಂಡಿತು.

ಶ್ರೀಕೃಷ್ಣ ಮಠದಲ್ಲಿ ಕದಿರು ಕಟ್ಟುವ ಹಬ್ಬವನ್ನು ಆಚರಿಸಲಾಯಿತು. ಸೋದೆ ಮಠದಿಂದ ಭತ್ತದ ಕದಿರುಗಳನ್ನು ಮೆರವಣಿಗೆಯಲ್ಲಿ ತಂದು ಶ್ರೀಕೃಷ್ಣ ಮಠದಲ್ಲಿ ಒಂದೇ ದಿನ ತೆರೆಯುವ ಪೂರ್ವದ್ವಾರದ ಮೂಲಕ ಒಳಪ್ರವೇಶಿಸಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ವಿತರಿಸಲಾಯಿತು. ಮಧ್ವಾಚಾರ್ಯರ ಕಾಲದಿಂದ ಬಂದ ಅಕ್ಷಯ ಪಾತ್ರೆಗೆ ಹಿಂದಿನ ವರ್ಷ ತುಂಬಿದ ಕದಿರನ್ನು ತೆಗೆದು ಹೊಸ ಕದಿರುಗಳನ್ನು ತುಂಬಿಸಲಾಯಿತು.

 

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

RAJ”ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.