ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಕೊರೊನಾ ವೈರಸ್ ಪತ್ತೆಯಾಗಿಲ್ಲ; ಜಿಲ್ಲಾಧಿಕಾರಿ
Team Udayavani, Mar 11, 2020, 5:45 PM IST
ಮಂಗಳೂರು: ಜಿಲ್ಲೆಯಲ್ಲಿ ಯಾವುದೇ ಕೊರೊನಾ ವೈರಸ್ ಪತ್ತೆಯಾಗಿಲ್ಲ. ಜನರು ಆಂತಕಗೊಳ್ಳುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸೂಕ್ತ ಸಿದ್ದತೆ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಹೇಳಿದರು.
ಅವರು ಬುಧವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಅಂತಾರಾಷ್ಟ್ರೀಯ ವಿಮಾನ ಮತ್ತು ಎನ್ಎಂಪಿಟಿಯಲ್ಲಿ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಈವರೆಗೆ ಜಿಲ್ಲೆಯಲ್ಲಿ 10 ಗಂಟಲು ಜನರ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆ ಕಳುಹಿಸಲಾಗಿದ್ದು ಅದರಲ್ಲಿ ಏಳು ವರದಿ ನೆಗೆಟಿವ್ ಬಂದಿದೆ.ಇನ್ನೂ ಮೂರು ವರದಿ ಪರೀಕ್ಷಾ ಹಂತದಲ್ಲಿ ಇದೆ ಎಂದು ಹೇಳಿದರು.
ದುಬೈನಿಂದ ಬಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಪರಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆತ ಪರಾರಿ ಆದ ನಂತರ ಅವರ ಕುಟುಂಬದವರಿಗೆ ಸೂಕ್ತ ತಿಳುವಳಿಕೆ ನೀಡಿ ಆ ವ್ಯಕ್ತಿಗೆ ಚಿಕಿತ್ಸೆ ನೀಡಲಾಗಿತ್ತು.ವ್ಯಕ್ತಿಯ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು,ಆತನ ವರದಿ ಬಂದಿದ್ದು, ಕೋವಿಡ್ – 19 ಲಕ್ಷಣ ಕಂಡುಬಂದಿಲ್ಲ ಎಂದರು.