ಮಂಗಳೂರು – ದುಬಾೖ ವಿಮಾನಯಾನ ಆರಂಭ
Team Udayavani, Aug 18, 2021, 1:34 AM IST
ಮಂಗಳೂರು: ಬಹುದಿನಗಳ ಬಳಿಕ ಮಂಗಳೂರಿನಿಂದ ದುಬಾೖಗೆ ವಿಮಾನಯಾನ ಆ. 18ರಿಂದ ಆರಂಭವಾಗಲಿದೆ.
ಬುಧವಾರ ಏರ್ಇಂಡಿಯಾ ಎಕ್ಸ್ ಪ್ರಸ್ ವಿಮಾನವು ಮಂಗಳೂರಿನಿಂದ ಕೇರಳದ ತಿರುವನಂತಪುರ ಮೂಲಕ ದುಬಾೖ ತಲುಪಲಿದೆ. ಆ. 20ರಂದು ಮಂಗಳೂರಿನಿಂದ ದುಬಾೖಗೆ ನೇರ ವಿಮಾನ ಆರಂಭಗೊಳ್ಳಲಿದೆ. ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿರುವುದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ.
ಭಾರತದ ವಿಮಾನಗಳಿಗೆ ಯುಎಇ ವಿಧಿಸಿದ್ದ ನಿರ್ಬಂಧವನ್ನು ಆ. 5ರಂದು ವಾಪಸ್ ಪಡೆದಿತ್ತು. ಆದರೆ ಭಾರತದಿಂದ ಹೊರಡುವ 48 ಗಂಟೆ ಮೊದಲು ನಡೆಸಿದ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಮತ್ತು 4 ಗಂಟೆ ಮೊದಲು ನಡೆಸಿದ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು.
ಆದರೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆ ಇಲ್ಲದ ಕಾರಣ ಯುಎಇಗೆ ವಿಮಾನ ಯಾನ ಆರಂಭವಾಗಿರಲಿಲ್ಲ. ಇದೀಗ ಅತ್ಯಾಧುನಿಕ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆಯನ್ನು ವಿಮಾನ ನಿಲ್ದಾಣದಲ್ಲಿ ಆರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ