ಮಂಗಳೂರು:ರೋಗ ಹರಡುವ ಭೀತಿ – ಸೀಯಾಳ ಸಿಪ್ಪೆಯ ತ್ಯಾಜ್ಯ ತೆರವಾಗದಿದ್ದರೆ ಅಪಾಯ!

ಬೇಸಗೆ ಮಳೆ ನಿರಂತರವಾಗಿ ಸುರಿಯುವುದಿಲ್ಲ.

Team Udayavani, May 3, 2023, 12:28 PM IST

ಮಂಗಳೂರು:ರೋಗ ಹರಡುವ ಭೀತಿ – ಸೀಯಾಳ ಸಿಪ್ಪೆಯ ತ್ಯಾಜ್ಯ ತೆರವಾಗದಿದ್ದರೆ ಅಪಾಯ!

ಮಹಾನಗರ: ಈಗ ಬೇಸಗೆ ಕಾಲವಾಗಿರುವುದರಿಂದ ನಗರದ ನೂರಾರು ಕಡೆಗಳಲ್ಲಿ ಸೀಯಾಳ ಮಾರಾಟ ನಡೆಯುತ್ತಿದೆ. ಪರಿಣಾಮ ಪ್ರತಿದಿನ ಟನ್‌ ಗಟ್ಟಲೆ ಸೀಯಾಳ ಸಿಪ್ಪೆಯ ತ್ಯಾಜ್ಯ ನಗರದಲ್ಲಿ ಉತ್ಪತ್ತಿಯಾಗುತ್ತಿದೆ. ಆದರೆ ಅದರ ವಿಲೇವಾರಿ ಮಾತ್ರ ನಿಯಮಿತವಾಗಿ ನಡೆಯುತ್ತಿಲ್ಲ.

ಪ್ರತಿ ವ್ಯಾಪಾರಿಯ ಬಳಿಯಲ್ಲೂ ಕನಿಷ್ಠ ಮೂರರಿಂದ ನಾಲ್ಕು ಗೋಣಿ ಚೀಲದಷ್ಟು ಸೀಯಾಳ ಸಿಪ್ಪೆ ಕಂಡುಬರುತ್ತಿದೆ. ಸದ್ಯ ಬಿಸಿಲು ಇರುವುದರಿಂದ ಸಮಸ್ಯೆ ಇಲ್ಲ. ಬೇಸಗೆ ಮಳೆ ಸುರಿಯಲು ಆರಂಭಿಸಿದರೆ ಮಾತ್ರ ಇದರಿಂದ ಅಪಾಯ ಖಚಿತ. ಸೀಯಾಳದ ಸಿಪ್ಪೆಗಳಲ್ಲಿ ನೀರು ನಿಂತು ಸೊಳ್ಳೆಗಳು ಮೊಟ್ಟೆ ಇಟ್ಟು ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

ನಗರದಲ್ಲಿ ಈ ಹಿಂದೆ ಹಲವು ಬಾರಿ ಮಲೇರಿಯಾ, ಡೆಂಗ್ಯೂ, ಚಿಕುನ್‌ ಗೂನ್ಯದಂತಹ ಸಾಂಕ್ರಾಮಿಕ ರೋಗಗಳು ಉಲ್ಬಣಗೊಂಡು ಸಮಸ್ಯೆಯಾಗಿತ್ತು. ಆಗ ವೇಳೆ ಪಾಲಿಕೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ನೀರು ನಿಲ್ಲುವ, ನೀರು ನಿಂತಿರುವ ಸ್ಥಳಗಳನ್ನು ಪತ್ತೆ ಮಾಡಿ, ತೆರವು ಮಾಡುವುದು, ಲಾರ್ವಾ ನಾಶ ಕಾರ್ಯಾಚರಣೆ ನಡೆಸಿದ್ದರು. ಮಳೆ ಬಂದರೆ
ಸೀಯಾಳ ಸಿಪ್ಪೆಯಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿ ತಾಣವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ.

ಬೇಸಗೆ ಮಳೆ ನಿರಂತರವಾಗಿ ಸುರಿಯುವುದಿಲ್ಲ. ಬದಲಾಗಿ ಬಿಟ್ಟು ಬಿಟ್ಟು ಸಂಜೆ ಹೊತ್ತಲ್ಲಿ ಸಾಮಾನ್ಯವಾಗಿ ಸುರಿಯುತ್ತದೆ. ಇದೇ ಅಪಾಯಕಾರಿಯಾಗಿದ್ದು, ಇದರಿಂದ ಸೀಯಾಳದ ಸಿಪ್ಪೆಯಲ್ಲಿ ಸಂಗ್ರಹವಾಗುವ ಈ ಸಿಹಿ ನೀರಿನಲ್ಲಿ ಸೊಳ್ಳೆಗಳು ಮೊಟ್ಟೆ ಇಟ್ಟು
ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗಬಹುದು. ಸ್ವಲ್ಪ ನೀರು ನಿಂತರೂ ಅದರಲ್ಲಿ ಸೊಳ್ಳೆಗಳು ಸಾವಿರಾರು ಮೊಟ್ಟೆಗಳನ್ನು ಇಡುತ್ತವೆ. ಸೀಯಾಳ ಸಿಪ್ಪೆಗಳನ್ನು ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತ್ಯಾಜ್ಯ ಪ್ರಮಾಣ ದ್ವಿಗುಣ
ಸದ್ಯ ಸೀಯಾಳ ವ್ಯಾಪಾರ ಹೆಚ್ಚಾಗಿರುವುದು ಮತ್ತು ಅದರಿಂದ ಉತ್ಪತ್ತಿಯಾಗುತ್ತಿರುವ ತ್ಯಾಜ್ಯ ಪ್ರಮಾಣವೂ ದ್ವಿಗುಣಗೊಂಡಿರುವುದರಿಂದ ವಿಲೇವಾರಿಯೂ ಕನಿಷ್ಠ ಎರಡು ದಿನಕ್ಕೊಮ್ಮೆ ನಡೆಯಬೇಕಿದೆ. ಈ ಬಗ್ಗೆ ಸೀಯಾಳ ವ್ಯಾಪಾರಿಗಳಲ್ಲಿ ಪ್ರಶ್ನಿಸಿದಾಗ, ತ್ಯಾಜ್ಯ ಸಂಗ್ರಾಹಕರು ಬರುತ್ತೇವೆ ಎಂದು ಹೇಳುತ್ತಾರೆ ಆದರೆ ಬರುವುದಿಲ್ಲ. ಪಾಲಿಕೆ ಅಧಿಕಾರಿಗಳು ನೋಡಿದರೆ ದಂಡ ಹಾಕುತ್ತಾರೆ ಎಂದು ಅಳಲು ತೋಡಿಕೊಳ್ಳುತ್ತಾರೆ.

ಗ್ರಾಮೀಣ ಭಾಗದಲ್ಲಾದರೆ ಇದನ್ನು ಉರುವಲಾಗಿ ಬಳಸುವುದರಿಂದ ವಿಲೇವಾರಿ ಸುಲಭ. ಆದರೆ ನಗರದಲ್ಲಿ ತ್ಯಾಜ್ಯ
ಸಂಸ್ಕರಣಾ ಕೇಂದ್ರಗಳಲ್ಲೇ ಗೊಬ್ಬರವಾಗಿ ಪರಿವರ್ತನೆಯಾಗಬೇಕಿದೆ.

ವಿಲೇವಾರಿಗೆ ಕ್ರಮ
ಸೀಯಾಳ ಸಿಪ್ಪೆ ತ್ಯಾಜ್ಯವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ತತ್‌ಕ್ಷಣದಿಂದಲೇ ಕಾರ್ಯಪ್ರವೃತ್ತರಾಗುವಂತೆ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರರಿಗೆ ಸೂಚಿಸುವಂತೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು.
– ಚನ್ನಬಸಪ್ಪ ಕೆ. ಮನಪಾ ಆಯುಕ್ತ

ಟಾಪ್ ನ್ಯೂಸ್

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.