ಕದ್ರಿ ಉದ್ಯಾನವನವೆಲ್ಲ ಹೂ ರಾಶಿಯ ಘಮ ಘಮ…


Team Udayavani, Jan 26, 2019, 4:30 AM IST

26-january-1.jpg

ಮಹಾನಗರ: ಕದ್ರಿ ಉದ್ಯಾನ ವನದಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ಹೂವಿನ ಘಮ ಘಮ… ಪಾರ್ಕ್‌ನ ಒಂದು ಭಾಗವಿಡೀ ಹೂಗಳ ರಾಶಿಯಿಂದ ಕಂಗೊಳಿ ಸುತ್ತಿದ್ದರೆ, ಮತ್ತೊಂದೆಡೆ  ವಿಧವಿಧ ತರಕಾರಿ ಗಳ ತರಾವರಿ… ಜತೆಗೆ ಆ ಅಂದವನ್ನು ಜನರ ಕಣ್ತುಂಬಿಸಿ ಕೊಡುವುದಕ್ಕೆ ಸಿದ್ಧತೆಯಲ್ಲಿ ತೊಡಗಿರುವ ಕೆಲಸಗಾರರ ತಂಡ…

ಕದ್ರಿ ಉದ್ಯಾನವನದಲ್ಲಿ ಶನಿವಾರದಿಂದ ಪ್ರಾರಂಭಗೊಳ್ಳುತ್ತಿರುವ ಮೂರು ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಕದ್ರಿ ಪಾರ್ಕ್‌ ಆವರಣ ಸಿಂಗಾರಗೊಂಡಿದೆ. ಪಾರ್ಕ್‌ನ ಎಡಭಾಗದ ಒಂದು ಬದಿಯಲ್ಲಿ ಹೂವುಗಳ ಜೋಡಣೆ ಬಿರುಸಾಗಿದೆ. ಜತೆಗೆ ಪ್ರದರ್ಶನದ ಇಡೀ ಪರಿಸರವನ್ನು ಸ್ವಚ್ಛಗೊಳಿಸುವ ಕೆಲಸವೂ ಆಗಿದೆ. ಶುಕ್ರವಾರ ಮಧ್ಯಾಹ್ನದ ವೇಳೆಗೆ ಪ್ರದರ್ಶನಕ್ಕೆ ಬೇಕಾದ ಸುಮಾರು ಶೇ.60ರಷ್ಟು ಕೆಲಸ ಪೂರ್ಣಗೊಂಡಿದೆ. ಫಲಪುಷ್ಪ ಪ್ರದರ್ಶನಕ್ಕೆಂದೇ ಜೀನ್ಯ, ಚೆಂಡು ಹೂವು ಸಹಿತ ವಿವಿಧ ಹೂವಿನ ಗಿಡಗಳನ್ನು ಬೆಳೆಸಲಾಗಿದೆ. ಅಲ್ಲದೆ, ಹೂವಿನಿಂದ ತುಂಬಿರುವ ಗಿಡಗಳನ್ನು ತಂದು ಇಲ್ಲಿ ನೆಡಲಾಗಿದೆ. ಗುಚ್ಛದ ಮಾದರಿಯಲ್ಲಿ ಹೂವಿನ ಗಿಡಗಳನ್ನು ನೆಡಲಾಗಿದೆ. ಆಯತ, ವೃತ್ತಾಕಾರದಲ್ಲಿಯೂ ಗಿಡಗಳನ್ನು ನೆಟ್ಟಿರುವುದು ಸಾರ್ವಜನಿಕರನ್ನು ಕೈ ಬೀಸಿ ಕರೆಯುವಂತಿದೆ.

ಈ ಪರಿಸರದಲ್ಲಿರುವ ಬಿದಿರಿನ ಹಿಂಡು ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆ. ಬಿದಿರಿನ ಹಿಂಡಿನ ಸುತ್ತಲೂ ವಿವಿಧ ಬಣ್ಣದ ಹೂವಿನ ಗಿಡಗಳನ್ನು ಜೋಡಿಸಿಟ್ಟಿರುವುದು ಆಕರ್ಷಕವಾಗಿದೆ.

ಅಂಥೂರಿಯಂ, ಆರ್ಕಿಡ್‌ ಗಿಡಗಳೂ ಗಮನ ಸೆಳೆಯುತ್ತಿವೆ. ವಿವಿಧ ತಾಲೂಕು, ಇಲಾಖೆ ಕ್ಷೇತ್ರಗಳಲ್ಲಿ ಉತ್ಪಾದಿಸಿದ ತರಕಾರಿ ಸಸಿ, ಹೂವಿನ ಗಿಡಗಳನ್ನು ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯೂ ಇದೆ. ಬಣ್ಣ ಬಣ್ಣದ ಕಾನೇರ್ಷನ್‌ ಮತ್ತು ಗುಲಾಬಿ ಹೂವುಗಳಿಂದ ಅಲಂಕರಿಸಿದ ಸಮುದ್ರದಲ್ಲಿ ತೇಲುವ ಹಡಗು ಈ ಬಾರಿಯ ಪ್ರದರ್ಶನದ ವೈಶಿಷ್ಟ್ಯ.

ಉದ್ಯಾನವನದ ಒಳಭಾಗದಲ್ಲಿ ಒಟ್ಟು 90ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗಿದೆ. ಫಲಪುಷ್ಪ ಪ್ರದರ್ಶನ ನಡೆಯುವ ಪರಿಸರದಲ್ಲಿ 65, ಉದ್ಯಾನವನಕ್ಕೆ ಪ್ರವೇಶಿಸುವ ಗೇಟ್ ಪಕ್ಕದಲ್ಲಿ ಸುಮಾರು 25 ಸ್ಟಾಲ್‌ಗ‌ಳಿವೆ. ಈ ಸ್ಟಾಲ್‌ಗ‌ಳಲ್ಲಿ ವಿವಿಧ ನರ್ಸರಿದಾರರು, ಬೀಜ/ಗೊಬ್ಬರಗಳ ಮಾರಾಟಗಾರರು, ಯಂತ್ರಗಳ ಮಾರಾಟಗಾರರು ಮಳಿಗೆಗಳನ್ನು ತೆರೆಯಲಿದ್ದು, ವಿವಿಧ ಉದ್ದಿಮೆದಾರರಿಂದ ಸಾರ್ವಜನಿಕರು ತಮಗೆ ಅಗತ್ಯವಿರುವ ಉತ್ಪನ್ನಗಳ ಖರೀದಿ, ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಹನಿ ನೀರಾವರಿ ಪ್ರಾತ್ಯಕ್ಷಿಕೆ, ಹೈಡ್ರೋಪೊನಿಕ್ಸ್‌, ಜೇನುಸಾಕಾಣಿಕೆ ಮಾದರಿ, ಅಣಬೆ ಮಾದರಿಗಳು, ಜೇನು ಬೇಸಾಯ ಬಗ್ಗೆ ಮಾಹಿತಿ, ಜೇನಿನ ಮೌಲ್ಯವರ್ಧಿತ ಉತ್ಪನ್ನಗಳ ಮಾರಾಟ, ಕೈ ತೋಟದ ಪ್ರಾತ್ಯಕ್ಷಿಕೆ, ಅಭಿವೃದ್ಧಿ ಇಲಾಖೆಗಳ ಪ್ರದರ್ಶನದ ಮಳಿಗೆಗಳು ಇರಲಿವೆ ಎಂದು ದ.ಕ. ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್‌. ನಾಯಕ್‌ ತಿಳಿಸಿದ್ದಾರೆ.

ಸುಮಾರು 20ಕ್ಕೂ ಹೆಚ್ಚು ತಳಿಗಳ ತರಕಾರಿ ಗಿಡಗಳನ್ನು ಬೆಳೆಸಲಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಬೆಳೆಸುವ ಕೆಲಸ ಶುರುವಾಗಿದ್ದು, ಪ್ರಸ್ತುತ ಫಲಭರಿತವಾಗಿವೆ. ಪಾಲಕ್‌, ಕ್ಯಾಬೇಜ್‌, ಕೊತ್ತಂಬರಿ ಸೊಪ್ಪು, ಸಹಿತ 20ಕ್ಕೂ ಹೆಚ್ಚು ತರಕಾರಿ ಗಿಡಗಳನ್ನು ಪ್ರದರ್ಶನಕ್ಕಿಡಲಾಗಿದೆ.

ಗಾಂಧೀಜಿಯವರ ಪ್ರತಿಮೆ
ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನದ ಹೊರಭಾಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಲಾಗಿದೆ.

ಜ. 26-28: ಪ್ರದರ್ಶನ
ಜ. 26ರಿಂದ 28ರ ವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. 26ರಂದು ಬೆಳಗ್ಗೆ 10.30ಕ್ಕೆ ಪ್ರದರ್ಶನಕ್ಕೆ ಚಾಲನೆ ದೊರೆಯಲಿದೆ. ಮೂರೂ ದಿನವೂ ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿದೆ. ಮಕ್ಕಳಿಗೆ 10 ರೂ. ಮತ್ತು ಹಿರಿಯರಿಗೆ 20 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಶಾಲೆಗಳಿಂದ ಸಮವಸ್ತ್ರ ಧರಿಸಿ ಬಂದ ಮಕ್ಕಳಿಗೆ, ವಿಕಲಚೇತನರಿಗೆ ಮತ್ತು ಭಿನ್ನ ಸಾರ್ಮಥ್ಯದ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.

ಕಾಯಕಯೋಗಿಗಳು
ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ ವತಿಯಿಂದ ಫಲಪುಷ್ಪ ಪ್ರದರ್ಶನವನ್ನು ಪ್ರತಿವರ್ಷ ಜ. 26ರಂದು ಹಮ್ಮಿಕೊಳ್ಳುತ್ತಿದ್ದರೂ ಈ ಪ್ರದರ್ಶನದ ಯಶಸ್ವಿನ ಹಿಂದಿರುವುದು ಹೂವು-ತರಕಾರಿಯನ್ನು ಬೆಳೆಸುವುದು, ಸಮಸ್ಯೆಯಾಗದಂತೆ ಪಾಲನೆ ಮಾಡುವ ಕೆಲಸಗಾರರು. ಕೆಲವು ದಿನಗಳಿಂದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿರುವ ಇವರು, ಶುಕ್ರವಾರ ಇಡೀ ಪರಿಸರವನ್ನು ಸ್ವಚ್ಛಗೊಳಿಸುವಲ್ಲಿ ತಲ್ಲೀನರಾಗಿದ್ದರು. ಇಡೀ ಪರಿಸರಲ್ಲಿ ಹುಲ್ಲು ಕಡ್ಡಿಗಳನ್ನು ಕಿತ್ತು, ಗುಡಿಸಿ ಪ್ರದರ್ಶನ ಆಕರ್ಷಣೀಯವಾಗಿ ಕಾಣುವಂತೆ ಮುತುವರ್ಜಿ ವಹಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.