ರಾಜಕೀಯ ಲಾಭಕ್ಕಾಗಿ ಧರ್ಮದ ವಿಷಯದಲ್ಲಿ ಪ್ರಚೋದಿಸುವವರನ್ನು ಬಹಿಷ್ಕರಿಸಬೇಕು: ರಮಾನಾಥ ರೈ
Team Udayavani, Jan 18, 2020, 12:55 PM IST
ಮಂಗಳೂರು: ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಪ್ರಚೋದನೆ ಹುಟ್ಟಿಸುವ ಕೆಲಸ ಕೆಲವರು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.
ಅವರು ಶನಿವಾರದಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಕನಕಪುರದಲ್ಲಿ ಏಸುವಿನ ಪ್ರತಿಮೆಯನ್ನು ಸ್ಥಾಪನೆ ವಿಚಾರವಾಗಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಹೆಸರು ಹೇಳದೇ ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ಲಾಭಕ್ಕಾಗಿ ಧರ್ಮದ ವಿಷಯದಲ್ಲಿ ಪ್ರಚೋದನೆ ಮಾಡುವವರನ್ನು ಸಮಾಜ ಬಹಿಷ್ಕಾರ ಮಾಡಬೇಕು. ಕಲ್ಲಡ್ಕ ಶಾಲೆಗೆ ಕೊಲ್ಲೂರಿನಿಂದ ಒಂದು ಕೆ.ಜಿ ಅಕ್ಕಿ ಹೋಗಲಿಲ್ಲ, ಎಲ್ಲ ಹಣ ಚೆಕ್ ಮೂಲಕ ಹೋಗುತ್ತಿತ್ತು. ಭಕ್ತರು ಹುಂಡಿಗೆ ಹಾಕಿದ ಹಣ ಪಡೆಯುತ್ತಿದ್ದರು. ಅಲ್ಪಸಂಖ್ಯಾತರು ಮತೀಯವಾದಿಗಳಾದರೇ ಸಮುದಾಯಕ್ಕೆ ಅಪಾಯ, ಬಹುಸಂಖ್ಯಾತರು ಮತೀಯವಾದಿಗಳಾದರೇ ದೇಶಕ್ಕೆ ಅಪಾಯ ಎಂದು ಹೇಳಿದರು.
ರಾಜ್ಯದಲ್ಲಿ ಎಸ್ಡಿಪಿಐ ಬ್ಯಾನ್ ವಿಚಾರದಲ್ಲಿ ನನಗೆ ಯಾವುದೇ ಮಾಹಿತಿ ಇಲ್ಲ. ಬಿಜೆಪಿ ಲಾಭ ನಷ್ಟ ಲೆಕ್ಕ ಹಾಕಿ ತೀರ್ಮಾನ ಮಾಡಬಹುದು. ಈ ವಿಚಾರದಲ್ಲಿ ನಾನು ಪಕ್ಷದ ತೀರ್ಮಾನಕ್ಕೆ ಬದ್ದವಾಗಿದ್ದೇನೆ. ಬಿಜೆಪಿಗೆ ಲಾಭ ಇದೆ ಎಂದಾದರೇ ಬ್ಯಾನ್ ಮಾಡಬಹುದು. ನಾನು ಯಾವುದೇ ರೀತಿಯಲ್ಲಿ ಮತೀಯವಾದಕ್ಕೆ ಬೆಂಬಲ ನೀಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ