ಮಂಗಳೂರು: ಇಂದಿನಿಂದ ಸರ್ವಿಸ್ ಬಸ್ ನಿಲ್ದಾಣದಲ್ಲೇ ಸಿಟಿ ಬಸ್ ನಿಲುಗಡೆ
Team Udayavani, Apr 1, 2023, 12:54 PM IST
ಮಂಗಳೂರು: ಮಂಗಳೂರಿನ ಸಿಟಿ ಬಸ್ ಪ್ರಯಾಣಿಕರು ಗಮನಿಸಿ… ಇಂದು ಎ.1 ರಿಂದ ಸ್ಟೇಟ್ ಬ್ಯಾಂಕ್ ಸಿಟಿ ಬಸ್ ನಿಲ್ದಾಣಕ್ಕೆ ಬಸ್ ಗಳು ಬರುವುದಿಲ್ಲ, ಬದಲಾಗಿ ಪಕ್ಕದ ಸರ್ವಿಸ್ ಬಸ್ ನಿಲ್ದಾಣದಿಂದಲೇ ಹೊರಡಲಿವೆ.
ಈ ಹಿಂದಿನ ಸಿಟಿ ಬಸ್ ನಿಲ್ದಾಣ ಬಳಿ ವಾಹನಗಳ ಸುಗಮ ಸಂಚಾರ ಹಿನ್ನಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದು ಶನಿವಾರ ಜಾರಿಗೊಂಡಿದೆ.
ಖಾಸಗಿ ವಾಹನ ಸಂಚಾರದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಇದೇ ವೇಳೆ ಪೊಲೀಸ್ ಆಯುಕ್ತರ ಕಚೇರಿ ಎದುರಿನ ರಸ್ತೆಯಿಂದ (ಸರ್ವಿಸ್ ಬಸ್ ನಿಲ್ದಾಣ ಪಕ್ಕ) ಬಸ್ ಹೊರತುಪಡಿಸಿ ಇತರ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಮೊದಲ ದಿನ ಗೊಂದಲ: ಪೊಲೀಸರ ಕ್ರಮದಿಂದ ಮೊದಲ ದಿನ ಪ್ರಯಾಣಿಕರು, ವಾಹನ ಚಾಲಕರಲ್ಲಿ ಗೊಂದಲ ಉಂಟಾಗಿದ್ದು ಪೊಲೀಸರು ಸ್ಥಳದಲ್ಲಿದ್ದು ಸೂಚನೆ ನೀಡುತ್ತಿದ್ದಾರೆ. ಪೊಲೀಸರ ಕ್ರಮಕ್ಕೆ ಪೂರ್ಣ ಸಹಕಾರ ನೀಡುತ್ತಿರುವುದಾಗಿ ಬಸ್ ಮಾಲಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ