ಮಂಗಳೂರು: ಹಜ್‌ ಯಾತ್ರೆ ಇಂದು ಆರಂಭ


Team Udayavani, Jul 17, 2019, 5:37 AM IST

huj-yatre

ಮಂಗಳೂರು: ಮಂಗಳೂರು ಹಜ್‌ ನಿರ್ವಹಣ ಸಮಿತಿಯ ಮೂಲಕ ಈ ವರ್ಷದ ಹಜ್‌ ಯಾತ್ರಿಕರನ್ನು ಕಳುಹಿಸಿ ಕೊಡುವ ಕಾರ್ಯ ಜು. 17ರಿಂದ ಆರಂಭವಾಗಲಿದ್ದು, 19ರ ವರೆಗೆ ನಡೆಯಲಿದೆ.

ಹಜ್‌ ಯಾತ್ರೆಯ ಉದ್ಘಾಟನೆ ಸಮಾರಂಭ ಬುಧವಾರ ಬೆಳಗ್ಗೆ 10.30ಕ್ಕೆ ಬಜಪೆ ಅನ್ಸಾರ್‌ ಪಬ್ಲಿಕ್‌ ಸ್ಕೂಲ್ನಲ್ಲಿ ನೆರವೇರಲಿದೆ.

ಮೂರು ದಿನಗಳಲ್ಲಿ ಐದು ವಿಮಾನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯ 750 ಹಜ್‌ ಯಾತ್ರಾರ್ಥಿ ಗಳು ಮಂಗಳೂರು ವಿಮಾನ ನಿಲ್ದಾಣದ ಮೂಲಕ ಮದೀನಾ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.

ಮಂಗಳೂರಿನಿಂದ ಮೊದಲ ವಿಮಾನ ಜು. 17ರಂದು ಸಂಜೆ 6.50ಕ್ಕೆ ನಿರ್ಗಮಿಸಲಿದೆ. ಜು.18ರಂದು ಬೆಳಗ್ಗೆ 11.50ಕ್ಕೆ ಮತ್ತು ಮಧ್ಯಾಹ್ನ 12.50ಕ್ಕೆ ಎರಡು ವಿಮಾನಗಳು ಹೊರಡಲಿವೆ. ಜು.19ರಂದು ತಡರಾತ್ರಿ 12.30ಕ್ಕೆ ಮತ್ತು ಬೆಳಗ್ಗೆ 5.50ಕ್ಕೆ ಹಜ್‌ ಯಾತ್ರಿಕರ ವಿಮಾನಗಳು ನಿರ್ಗಮಿಸಲಿವೆ. ಪ್ರತಿ ವಿಮಾನದಲ್ಲಿ ತಲಾ 150 ಮಂದಿ ಪ್ರಯಾಣಿಸಲಿದ್ದಾರೆ.

ಮಕ್ಕಾ ಮತ್ತು ಮದೀನಾ ಯಾತ್ರೆ ಮುಗಿಸಿ ಹಾಜಿಗಳು ಆ. 31ರಿಂದ ಸೆ. 2ರ ತನಕ 5 ತಂಡಗಳಲ್ಲಿ ಜೆದ್ದಾ ವಿಮಾನ ನಿಲ್ದಾಣದ ಮೂಲಕ ಹಂತಹಂತವಾಗಿ ಮಂಗಳೂರಿಗೆ ಹಿಂದಿರುಗಲಿದ್ದಾರೆ.

ಹಜ್‌ ಶಿಬಿರಕ್ಕೆ ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಭೇಟಿ

ರಾಜ್ಯ ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷ ಜಿ.ಎ. ಬಾವಾ ಮಂಗಳವಾರ ಮಂಗಳೂರು ಹಳೆ ವಿಮಾನ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ಹಜ್‌ ಶಿಬಿರಕ್ಕೆ ಭೇಟಿ ನೀಡಿ ಯಾತ್ರಿಕರಿಗೆ ಶುಭ ಹಾರೈಸಿದರು. ಇದೇ ವೇಳೆ ಹಜ್‌ ಭವನ ನಿರ್ಮಾಣಕ್ಕೆ ಸರಕಾರದಿಂದ ಆಗಬೇಕಾದ ಎಲ್ಲ ಕೆಲಸ ಕಾರ್ಯಗಳಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಯಾತ್ರಿಕರ ಲಗೇಜ್‌ ಕೌಂಟರ್‌ ವಿಭಾಗದಲ್ಲಿ ಬುಧವಾರದ ಹಜ್‌ ಯಾತ್ರಿಕ ಮಂಗಳೂರು ಹರೇಕಳ ನ್ಯೂಪಡ್ಪು ನಿವಾಸಿ ಮಹಮ್ಮದ್‌ ಮುಸ್ಲಿಯಾರ್‌ ಅವರಿಗೆ ಗುರುತಿನ ಕೈಬಳೆ, ಬೋರ್ಡಿಂಗ್‌ ಪಾಸ್‌ ಮತ್ತು ಲಗ್ಗೇಜ್‌ ಟ್ಯಾಗನ್ನು ಜಿ.ಎ. ಬಾವಾ ಅವರು ವಿತರಿಸಿ ಪ್ರಕ್ರಿಯೆಗೆ ಚಾಲನೆ ನೀಡಿದರು. ರಶೀದ್‌ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ವಾರದೊಳಗೆ ಸದಸ್ಯರ ನೇಮಕ

ನಾನು ರಾಜ್ಯ ಅಲ್ಪಸಂಖ್ಯಾಕರ ಆಯೋಗದ ಅಧ್ಯಕ್ಷ ಸ್ಥಾನ ವಹಿಸಿ ತಿಂಗಳು ಕಳೆದಿದೆ. ಇನ್ನು 8 ಮಂದಿ ಸದಸ್ಯರ ನೇಮಕವಾದರೆ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿದೆ. ವಾರದೊಳಗೆ ಅವರ ನೇಮಕವೂ ಆಗಲಿದೆ. ಸರಕಾರ ಬದಲಾದರೂ 3 ವರ್ಷಗಳ ಆಡಳಿತಾವಧಿ ಇರುತ್ತದೆ ಎಂದು ಜಿ.ಎ. ಬಾವಾ ತಿಳಿಸಿದರು.
‘ವಿಚಾರಣಾಧೀನ ಕೈದಿಗಳಿಗೆ ನೆರವು’

ಮಂಗಳೂರು: ಜಾಮೀನು ಲಭಿಸಿದರೂ ದಂಡ ಪಾವತಿಸಲು ಹಣವಿಲ್ಲದೆ ರಾಜ್ಯದ ವಿವಿಧ ಜೈಲುಗಳಲ್ಲಿ ಉಳಿದಿರುವ ವಿಚಾರಣಾಧೀನ ಕೈದಿಗಳ ಬಿಡು ಗಡೆಗೆ ಸಹಾಯ ಮಾಡಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷ ಜಿ.ಎ. ಬಾವಾ ತಿಳಿಸಿದ್ದಾರೆ. ಇದು ಒಂದು ಬಾರಿ ಜೈಲಿಗೆ ಹೋದವರಿಗೆ ಮಾತ್ರ ಅನ್ವಯಿಸಲಿದೆ ಎಂದವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.