ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ


Team Udayavani, Jun 4, 2023, 7:05 AM IST

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಮಂಗಳೂರು: ಕಳೆದುಹೋದ/ಕಳವಾದ ಮೊಬೈಲ್‌ಗ‌ಳನ್ನು ಪತ್ತೆ ಮಾಡಲು ಕೇಂದ್ರ ಸರಕಾರ ಜಾರಿಗೆ ತಂದಿರುವ “ಸಿಇಐಆರ್‌ ಪೋರ್ಟಲ್‌’ ನೆರವಿನಿಂದ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಇದುವರೆಗೆ ಪತ್ತೆ ಮಾಡಲಾದ ಒಟ್ಟು 524 ಮೊಬೈಲ್‌ ಪೋನ್‌ಗಳ ಪೈಕಿ 93 ಮೊಬೈಲ್‌ ಪೋನ್‌ಗಳನ್ನು ಶನಿವಾರ ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ಅವರು ವಾರಸುದಾರರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಮಾತನಾಡಿದ ಪೊಲೀಸ್‌ ಆಯುಕ್ತರು, ನಗರದಲ್ಲಿ ಇದುವರೆಗೆ 2,133 ಮೊಬೈಲ್‌ಪೋನ್‌ಗಳ ಪತ್ತೆಗೆ ಸಾರ್ವಜನಿಕರಿಂದ ಸಿಇಐಆರ್‌ ಪೋರ್ಟಲ್‌ ಮುಖಾಂತರ ಕೋರಿಕೆಗಳು ಬಂದಿವೆ. ಇದರಲ್ಲಿ 2,391 ಐಎಂಇಐಗಳನ್ನು ಬ್ಲಾಕ್‌ ಮಾಡಲಾಗಿದೆ. 524 ಮೊಬೈಲ್‌ ಪೋನ್‌ಗಳು ಪತ್ತೆಯಾಗಿವೆ. ಈಗಾಗಲೇ 240 ಮೊಬೈಲ್‌ ಪೋನ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು ಇದರಲ್ಲಿ 147 ಮೊಬೈಲ್‌ಗ‌ಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಇದೀಗ ಮತ್ತೆ 93 ಮೊಬೈಲ್‌ಗ‌ಳನ್ನು ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.

ಮೊಬೈಲ್‌ ಕಳೆದು ಹೋದರೆ ಪಕ್ಕದ ಪೊಲೀಸ್‌ ಠಾಣೆಯಲ್ಲಿ ಅಥವಾ ಕೆಎಸ್‌ಪಿ ಆ್ಯಪ್‌ನಲ್ಲಿ ದೂರು ದಾಖಲಿಸಿ http://www.ceir.gov.in ನಲ್ಲಿ ಮೊಬೈಲ್‌ನ ವಿವರ ಹಾಗೂ ದೂರಿನ ವಿವರಗಳನ್ನು ನಮೂದಿಸಿ ಸ್ವತಃ ಅರ್ಜಿದಾರರೆ ಐಎಂಇಐ ಬ್ಲಾಕ್‌ಗೆ ಕೋರಿಕೆ ಸಲ್ಲಿಸಬಹುದು ಅಥವಾ ಸ್ಥಳೀಯ ಪೊಲೀಸರು ಕೂಡ ಪೋರ್ಟಲ್‌ ಮೂಲಕ ವಿವರ ನಮೂದಿಸುತ್ತಾರೆ. ಈ ಪೋರ್ಟಲ್‌ನ ಬಳಕೆ ಸಾರ್ವಜನಿಕರಿಗೆ ಸುಲಭವಾಗಬೇಕೆಂಬ ಉದ್ದೇಶದಿಂದ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ “ಚಾಟ್‌ ಬಾಟ್‌’ ವ್ಯವಸ್ಥೆ ಜಾರಿಗೆ ತರಲಾಗಿದೆ. 8277949183 ಸಂಖ್ಯೆಗೆ ಏಜಿ ಮೆಸೇಜ್‌ ಕಳುಹಿಸಿದರೆ ಪೊಲೀಸರಿಂದ ಒಂದು ಲಿಂಕ್‌ ಬರುತ್ತದೆ. ಅದರ ಮೂಲಕವೂ ಮಾಹಿತಿಯನ್ನು ದಾಖಲಿಸಬಹುದು.

ಸೈಬರ್‌ ವಂಚನೆ ಬಳಕೆಗೆ ತಡೆ
ಸೈಬರ್‌ ವಂಚಕರು ಬಳಸುವ ಮೊಬೈಲ್‌ ಪೋನ್‌ಗಳ ಐಎಂಇಐನ್ನು ಕೂಡ ಸಿಇಐಆರ್‌ ಮೂಲಕ ಬ್ಲಾಕ್‌ ಮಾಡಲಾಗುತ್ತಿದೆ. ಇದರಿಂದಾಗಿ ಸೈಬರ್‌ ವಂಚಕರು ಅದೇ ಸಂಖ್ಯೆಯನ್ನು ಮತ್ತೆ ಬಳಕೆ ಮಾಡುವುದನ್ನು ತಡೆಯಬಹುದಾಗಿದೆ.

ಮೊಬೈಲ್‌ ಮರಳಿ ಪಡೆದವರ ಸಂಭ್ರಮ
“ನಾನು ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಅಲ್ಲಿ ಮೊಬೈಲ್‌ ಕಳವಾಗಿತ್ತು. ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು ಅನಂತರ ಸಿಇಐಆರ್‌ನಲ್ಲಿ ಮೂಲಕ ಮಾಹಿತಿ
ನಮೂದಿಸಲಾಗಿತ್ತು. 14,000 ರೂ. ಮೌಲ್ಯದ ಮೊಬೈಲ್‌ ವಾಪಸ್‌ ಸಿಕ್ಕಿದೆ’ ಎಂದು ಜೆಪ್ಪುವಿನ ಬಿಂದು ಅವರು ಸಂತೋಷ ಹಂಚಿಕೊಂಡರು. “ನಾನು ಮಣ್ಣಗುಡ್ಡೆಯಲ್ಲಿ ರೇಷನ್‌ ನಡೆಸಿಕೊಂಡಿದ್ದು ಮೊಬೈಲ್‌ ಕಳವಾಗಿದ್ದರಿಂದ ತುಂಬಾ ತೊಂದರೆಯಾಗಿತ್ತು. ಕಳೆದ ಡಿಸೆಂಬರ್‌ನಲ್ಲಿ ಕಳವಾಗಿದ್ದ ಮೊಬೈಲ್‌ ಈಗ ಸಿಕ್ಕಿದೆ’ ಎಂದು ಸುಕುಮಾರ ಶೆಟ್ಟಿ ಹೇಳಿದರು.

ಟಾಪ್ ನ್ಯೂಸ್

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶ

ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶ

Panambur ಬೇಡಿಕೆ ಈಡೇರಿಕೆ ಭರವಸೆ: ಲಾರಿ ಮುಷ್ಕರ ಮುಂದೂಡಿಕೆ

Panambur ಬೇಡಿಕೆ ಈಡೇರಿಕೆ ಭರವಸೆ: ಲಾರಿ ಮುಷ್ಕರ ಮುಂದೂಡಿಕೆ

Fraud Case ಆನ್‌ಲೈನ್‌ ಉದ್ಯೋಗ ಆಮಿಷ: ವಂಚನೆ

Fraud Case ಆನ್‌ಲೈನ್‌ ಉದ್ಯೋಗ ಆಮಿಷ: ವಂಚನೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.