ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಪುನರಾರಂಭಗೊಳ್ಳದ ದೇಶೀಯ ಸರಕು ಸಾಗಾಟ

ಔಷಧ ಸಹಿತ ತುರ್ತು ಸಾಮಗ್ರಿ ರವಾನೆಗೆ ಪರದಾಟ

Team Udayavani, May 16, 2022, 6:45 AM IST

thumb 4

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶೀಯ ಕಾರ್ಗೋ ಸೇವೆ ಸ್ಥಗಿತಗೊಂಡು ಒಂದು ವರ್ಷ ಕಳೆದಿದ್ದು, ಔಷಧ ಮತ್ತಿತರ ತುರ್ತು ಸಾಮಗ್ರಿಗಳ ಸಾಗಾಟಕ್ಕೆ ತೀವ್ರ ತೊಂದರೆಯಾಗಿದೆ.

ಕೊರೊನಾ ಬಳಿಕ ಅಂತಾರಾಷ್ಟ್ರೀಯ ಕಾರ್ಗೊ ಸೇವೆ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡರೂ ದೇಶೀಯ ಕಾರ್ಗೋ ಸೇವೆ ಇನ್ನೂ ಆರಂಭಗೊಂಡಿಲ್ಲ. 2021ರ ಮಾರ್ಚ್‌ನಲ್ಲಿ ಈ ಸೇವೆ ಸ್ಥಗಿತಗೊಂಡಿತ್ತು. ಹೊರಗಿನ ಉತ್ಪನ್ನಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿವೆ. ಆದರೆ ಇಲ್ಲಿಂದ ರವಾನಿಸಲು ಅವಕಾಶವಿಲ್ಲ.

ಸ್ಕ್ರೀನರ್‌ಗಳ ಕೊರತೆ
ಕಾರ್ಗೋ ಟರ್ಮಿನಲನ್ನು 2017ರ ವರೆಗೆ ಮುಂಬಯಿಯ ಖಾಸಗಿ ಸಂಸ್ಥೆ ನಿರ್ವಹಿಸುತ್ತಿತ್ತು. ಆದರೆ ಕೊರೊನಾ ಸಂದರ್ಭ ಪರವಾನಿಗೆ ನವೀಕರಿಸಿಕೊಂಡಿರಲಿಲ್ಲ. ಬಳಿಕ ಗುತ್ತಿಗೆಯನ್ನು ಕೊನೆಗೊಳಿಸಿ ಸ್ಕ್ರೀನಿಂಗ್‌ ಯಂತ್ರದೊಂದಿಗೆ ಸಂಸ್ಥೆ ಜಾಗ ಖಾಲಿ ಮಾಡಿತು. ಅನಂತರ ಮತ್ತೂಂದು ಕಂಪೆನಿ ಗುತ್ತಿಗೆ ವಹಿಸಿಕೊಂಡರೂ ಸ್ಕ್ರೀನಿಂಗ್‌ ಯಂತ್ರಕ್ಕೆ ವ್ಯವಸ್ಥೆ ಮಾಡಿಕೊಂಡಿರಲಿಲ್ಲ. ಪರಿಣಾಮವಾಗಿ ಕಾರ್ಗೋ ಸಾಗಾಟಕ್ಕೆ ಬೇಡಿಕೆ ಇದ್ದರೂ ಸ್ಕ್ರೀನಿಂಗ್‌ ಯಂತ್ರದ ಅಲಭ್ಯತೆ ಅಡ್ಡಿಯಾಗಿತ್ತು. ಹಲವು ತಿಂಗಳುಗಳ ಬಳಿಕ ಯಂತ್ರವನ್ನು ತಂದರೂ ಕಾರ್ಗೊ ಸೇವೆ ಆರಂಭಿಸಲು ಮತ್ತೆ ಬಿಸಿಎಎಸ್‌ (ಬ್ಯೂರೋ ಆಫ್ ಸಿವಿಲ್‌ ಏವಿಯೇಷನ್‌ ಸೆಕ್ಯುರಿಟಿ) ಅನುಮತಿ ಪಡೆದುಕೊಳ್ಳಬೇಕೆಂಬ ಷರತ್ತು ವಿಧಿಸಲಾಯಿತು. ಕೊನೆಗೆ ಫೆ. 3ರಂದು ಬಿಸಿಎಎಸ್‌ ಅನುಮತಿ ನೀಡಿತು. ಆದರೆ ಈಗ ಸ್ಕ್ರೀನಿಂಗ್‌ ಸಿಬಂದಿ ಇಲ್ಲದೆ ಸಮಸ್ಯೆಯಾಗಿದೆ ಎಂದು ತಿಳಿದುಬಂದಿದೆ.

ತಿಂಗಳಿಗೆ 300
ಟನ್‌ ಸರಕು ಬೇಡಿಕೆ
ಮಂಗಳೂರು ವಿಮಾನ ನಿಲ್ದಾಣದಿಂದ ತಿಂಗಳಿಗೆ ಸರಿಸುಮಾರು 200ರಿಂದ 300 ಟನ್‌ ಸರಕು ದೇಶದ ವಿವಿಧ ರಾಜ್ಯಗಳಿಗೆ ರವಾನೆಯಾಗುತ್ತಿತ್ತು. ಮೀನು, ಮಲ್ಲಿಗೆ, ಹಣ್ಣು ಹಂಪಲು, ಔಷಧ, ಅಂಚೆ ಮೊದಲಾದವು ಬೇರೆ ರಾಜ್ಯಗಳಿಗೆ ವಿಮಾನದ ಮೂಲಕ ಹೋಗುತ್ತಿತ್ತು. ಪೂರೈಕೆದಾರರಿಗೂ ಇದರಿಂದ ಅನುಕೂಲವಾಗುತ್ತಿತ್ತು. ಈಗ ಇಂತಹ ಸರಕು ಸಾಗಾಟದಾರರಿಗೆ ಪೆಟ್ಟು ಬಿದ್ದಿದೆ.ಈ ಪೈಕಿ ಕೆಲವು ಸರಕುಗಳನ್ನು ಬೆಂಗಳೂರಿಗೆ ರಸ್ತೆ ಮೂಲಕ ಸಾಗಿಸಿ ಅಲ್ಲಿಂದ ವಿಮಾನದಲ್ಲಿ ಒಯ್ಯಲಾಗುತ್ತಿದೆ.

ಬೆಂಗಳೂರಿಗೆ ಸಾಗಿಸುವುದು ಹೆಚ್ಚುವರಿ ವೆಚ್ಚವಾಗುವುದರಿಂದ ಕೆಲವು ಸಾಗಾಟದಾರರು ಅದಕ್ಕೆ ಮನಸ್ಸು ಮಾಡುತ್ತಿಲ್ಲ. ಬೇಗನೆ ಹಾಳಾಗುವ ಕೆಲವು ಉತ್ಪನ್ನಗಳನ್ನು ರಸ್ತೆ ಮೂಲಕ ಕಳುಹಿಸಿದರೆ ಪ್ರಯೋಜನವಿಲ್ಲ ಎನ್ನುತ್ತಾರೆ ಪೂರೈಕೆದಾರರು.

ರಕ್ತ ಮಾದರಿ ಕಳುಹಿಸಲು ತೊಡಕು
ಪ್ರತೀ ದಿನ ರಕ್ತದ ಮಾದರಿಯನ್ನು ವಿಮಾನದ ಮೂಲಕ ಬೇರೆ ಬೇರೆ ರಾಜ್ಯ ಗಳಿಗೆ ಕಳುಹಿಸಿಕೊಡಲಾಗುತ್ತಿತ್ತು. ಅಲ್ಲದೆ ಮೃತದೇಹವನ್ನು ಕೂಡ ವಿಮಾನದ ಮೂಲಕ ಕಳುಹಿಸಲಾಗುತ್ತಿತ್ತು. ಇದಕ್ಕೂ ಈಗ ತೀವ್ರ ತೊಂದರೆಯಾಗಿದೆ. ಬೆಂಗಳೂರು ಅಥವಾ ಕಣ್ಣೂರಿಗೆ ತೆರಳಿ ರವಾನಿಸಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ.

ಬಿಸಿಎಎಸ್‌ ಅನುಮತಿ ದೊರೆತಿದ್ದು, ಸ್ಕ್ರೀನರ್‌ಗಳ ನೇಮಕ ಪ್ರಕ್ರಿಯೆ ಆಗುತ್ತಿದೆ. ಸ್ಕ್ರೀನಿಂಗ್‌ ದರ ನಿಗದಿ ಕೂಡ ಆಗಬೇಕಿದ್ದು, ಅನಂತರ ಡೊಮೆಸ್ಟಿಕ್‌ ಕಾರ್ಗೋ ಸೇವೆ ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳಲಿದೆ. ಈಗ ಡೊಮೆಸ್ಟಿಕ್‌ ಕಾರ್ಗೋವನ್ನು ಬೆಂಗಳೂರಿನ ಮೂಲಕ ಕಳುಹಿಸಿಕೊಡಲಾಗುತ್ತಿದೆ. ಮೃತದೇಹ ಸಾಗಾಟದಂತಹ ತುರ್ತು ಸಂದರ್ಭದಲ್ಲಿ ಕಸ್ಟಮ್ಸ್‌ ಅನುಮತಿ ಪಡೆದು ವ್ಯವಸ್ಥೆ ಮಾಡಿಕೊಡುತ್ತೇವೆ.
– ಸೆಲ್ವ ಕುಮಾರ್‌,
ಕಾರ್ಗೋ ವಿಭಾಗದ ಮ್ಯಾನೇಜರ್‌

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.