ಮಂಗಳೂರು ಏಳು ಪಟ್ಣ ಮೊಗವೀರ ಸಂಯುಕ್ತ ಮಹಾಸಭಾದಿಂದ ಪೂಜೆ
Team Udayavani, Aug 8, 2017, 7:05 AM IST
ಪಣಂಬೂರು: ಮಂಗಳೂರು ಏಳು ಪಟ್ಣ ಮೊಗವೀರ ಸಂಯುಕ್ತ ಮಹಾ ಸಭಾ ವತಿಯಿಂದ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಸಾಮೂಹಿಕ ಸಮುದ್ರ ಪೂಜೆ ಕದ್ರಿ ಸುವರ್ಣ ಕದಳೀ ಮಠದ ಶ್ರೀ ರಾಜಾಯೋಗಿ ನಿರ್ಮಲಾನಾಥಜೀ ಮಹಾರಾಜ್ ಅವರ ನೇತೃತ್ವದಲ್ಲಿ ಸೋಮವಾರ ನೆರವೇರಿತು.
ಪ್ರಸಕ್ತ ಮೀನುಗಾರಿಕಾ ಋತುವಿನಲ್ಲಿ ಸುರಕ್ಷಿತ ಮತ್ತು ಸಮೃದ್ಧ ಮೀನುಗಾರಿಕೆ ಕರುಣಿಸೆಂಬ ಪ್ರಾರ್ಥನೆ ಯೊಂದಿಗೆ ಸಮುದ್ರಕ್ಕೆ ಹಾಲೆರೆದು ಪೂಜಿಸಲಾಯಿತು.
ಬಳಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಮೊಗವೀರರು ಶ್ರಮಜೀವಿಗಳು, ಸಮುದ್ರವೇ ಅವರಿಗೆ ಅನ್ನದ ಬಟ್ಟಲು ಹೀಗಾಗಿ ದುಡಿಮೆ ಗಾಗಿ ಕಡಲಿಗೆ ಇಳಿಯುವಾಗ ಯಾವುದೇ ಕಂಟಕ ಬಾರದಿರಲಿ; ಮಾತ್ರವಲ್ಲ , ಅವರ ನಿತ್ಯ ಜೀವನದಲ್ಲಿ ಸಮೃದ್ಧಿ ಪ್ರಾಪ್ತವಾಗಲಿ ಎಂದು ಹಾರೈಸಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಏಳು ಪಟ್ಣ ಮೊಗವೀರ ಸಂಯುಕ್ತ ಮಹಾಸಭಾವು ಬೋಳೂರು, ಬೊಕ್ಕಪಟ್ಣ, ಕುದ್ರೋಳಿ, ಹೊಗೆ ಬಜಾರ್, ಬೋಳಾರ, ಜಪ್ಪು, ನೀರೇಶ್ವಾಲ್ಯ, ಪಡು ಹೊಗೆ ಮೊಗವೀರ ಗ್ರಾಮ ಸಭೆಗಳು ಒಳಗೊಂಡಿದೆ.
ಕಾರ್ಯಕ್ರಮದಲ್ಲಿ ಮತೊÕ éàದ್ಯಮಿ ಅಶ್ವಿನ್ ಬೋಳಾರ, ಬೊಕ್ಕಪಟ್ಣ ಬೆಂಗರೆಯ ಅನಿಲ್ ಕುಮಾರ್ ಕರ್ಕೇರ, ಮಂಗಳೂರು ಏಳುಪಟ್ಣ ಮೊಗವೀರ ಸಂಯುಕ್ತ ಮಹಾಸಭಾ ಉಪಾಧ್ಯಕ್ಷ ಯಾದವ ಸಾಲ್ಯಾನ್, ಅಧ್ಯಕ್ಷ ದಿವಾಕರ ಕಾಂಚನ್ ಬೆಂಗರೆ, ಪ್ರಧಾನ ಕಾರ್ಯದರ್ಶಿ ಪಾಂಡುರಂಗ ಸುವರ್ಣ, ಕೋಶಾಧಿಕಾರಿ ಶ್ಯಾಮ್ ಸುಂದರ ಕಾಂಚನ್, ಏಳು ಗ್ರಾಮದ ಪ್ರತಿನಿ ಧಿ ಮಾಧವ ಸಾಲಿಯಾನ್ ಏಳುಪಟ್ಣ ಮೊಗವೀರ ಸಂಯುಕ್ತ ಸಭಾದ ಗುರಿಕಾರಾರು, ಪದಾಧಿಕಾರಿಗಳು, ಮೊಗವೀರ ಸಮಾಜದ ಮುಖಂಡರು ಈ ಸಂದರ್ಭ ಉಪಸ್ಥಿತರಿದ್ದರು.
ಮಧ್ಯಾಹ್ನ ಮಹಾಸಭಾದ ವತಿಯಿಂದ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಹಾಗೂ ಕದ್ರಿ ಶ್ರೀ ಕ್ಷೇತ್ರ ಸುವರ್ಣ ಕದಳೀ ಮಠದಲ್ಲಿ ಸೀಯಾಳಾಭಿಷೇಕ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ