ಮಹಾನಗರ:ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ಅಗತ್ಯ- ಪ್ರವೀಣ್‌


Team Udayavani, Feb 13, 2024, 2:06 PM IST

ಮಹಾನಗರ:ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ಅಗತ್ಯ- ಪ್ರವೀಣ್‌

ಮಹಾನಗರ: ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು ನಂತೂರು ಅವರ ನೇತೃತ್ವದಲ್ಲಿ, ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಸಹಯೋಗದೊಂದಿಗೆ ನಡೆದ, “ಸಾವಯವ ಕೈತೋಟ ತರಬೇತಿ ಸರ್ಟಿಫಿಕೆಟ್‌ ಕೋರ್ಸ್‌’ (2ನೇ ಬ್ಯಾಚ್‌) ಇದರ ಸಮಾರೋಪ ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ನಡೆಯಿತು.

ತೋಟಗಾರಿಕೆ ಇಲಾಖೆ ಮಂಗಳೂರು, ಇದರ ಸಹಾಯಕ ನಿರ್ದೇಶಕ ಪ್ರವೀಣ್‌ ಕೆ. ಮುಖ್ಯ ಅತಿಥಿಯಾಗಿ ಮಾತನಾಡಿ, ವಿಷಮುಕ್ತ ಆಹಾರದ ಬಟ್ಟಲಿಗೆ ಅಗತ್ಯವಾದ ಜ್ಞಾನವನ್ನು ಸಮಾಜಕ್ಕೆ ನೀಡಿ, ಆ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ಸಾವಯವ ಕೃಷಿಕ ಗ್ರಾಹಕ ಬಳಗದ ಸಾಮಾಜಿಕ ಕಳಕಳಿ ಮತ್ತು ಅವಿರತ ಶ್ರಮವನ್ನು ಕೊಂಡಾಡಿದರು. ಇಂದು ನಗರದ ಉದ್ದಗಲಗಳಲ್ಲಿ ತ್ಯಾಜ್ಯ ಪದಾರ್ಥಗಳ ದಟ್ಟಣೆಯನ್ನು ಕಾಣುತ್ತೇವೆ. ಅವುಗಳ ಸೂಕ್ತ ನಿರ್ವಹಣೆಯು, ಸರಕಾರಕ್ಕೂ ಸವಾಲಾಗಿಯೇ ಪರಿಣಮಿಸಿದೆ ಎಂದರು.

ಇಂತಹ ಸಂದರ್ಭ ಮನೆ ಮನೆಯಿಂದ ಬೀದಿಪಾಲಾಗಬಹುದಾದ ಕಸವನ್ನು, ಸಾರವತ್ತಾದ ಸಾವಯವ ಗೊಬ್ಬರವಾಗಿ
ಪರಿವರ್ತಿಸುವ ಕಲೆಯನ್ನು ಕರಗತ ಮಾಡಿಕೊಂಡ ಈ ಶಿಬಿರಾರ್ಥಿಗಳು ಸಮಾಜಕ್ಕೆ ಆದರ್ಶಪ್ರಾಯರಾಗಿರುವರು, “ವರ್ತನೆಯ ಪರಿವರ್ತನೆಯೇ ನಿಜವಾದ ಶಿಕ್ಷಣ’, ಇದೇ ನಿಜವಾದ ಸಂಸ್ಕೃತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಬಿರಾರ್ಥಿಗಳು ನಿರಂತರವಾದ ತರಬೇತಿಯಿಂದ ಸಾವಯವ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ನೈಪುಣ್ಯವನ್ನು ಗಳಿಸಿರುವರು. ಇದೀಗ
ಅವರ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ. ಅದನ್ನು ಸುಸೂತ್ರವಾಗಿ ನಿಭಾಯಿಸುವ ಸಾಮರ್ಥ್ಯ ಹಾಗೂ ಕೌಶಲ ಅವರಲ್ಲಿ ಸದಾ
ಹಸುರಾಗಿರಲಿ; ಸಾವಯವ ಕೃಷಿ ನೈಪುಣ್ಯವು ಕ್ರಾಂತಿಕಾರಕ ಸಾಧನೆಗೆ ದಾರಿದೀಪವಾಗಲಿ ಎಂದು ಹಾರೈಸಿದರು.

ಸಾವಯವ ಕೃಷಿಕ ಗ್ರಾಹಕ ಬಳಗದ ಕಾರ್ಯದರ್ಶಿ ರತ್ನಾಕರ ಕುಳಾಯಿ, ಕೋಶಾಧಿಕಾರಿ ಶರತ್‌ ಮಂಗಳೂರು ಉಪಸ್ಥಿತರಿದ್ದರು. ಸಾವಯವ ಕೃಷಿಕ ಗ್ರಾಹಕ ಬಳಗದ ಬೆಳವಣಿಗೆ, ಸಾಧನೆ, ಮುಂದಿನ ಯೋಜನೆಗಳು – ಇವುಗಳ ಬಗ್ಗೆ ಬೆಳಕು ಚೆಲ್ಲಿದ ಗ್ರಾಹಕ ಬಳಗದ ಸದಸ್ಯ ನಾರಾಯಣ ರಾವ್‌ ಅವರು, ಎರಡು ತರಬೇತಿ ಶಿಬಿರಗಳ ಅಂಕಿ ಅಂಶಗಳ ಸಂಕ್ಷಿಪ್ತ ವರದಿಯನ್ನು
ಅತಿಥಿಗಳ ಮುಂದಿರಿಸಿದರು.

ಶಿಬಿರಾರ್ಥಿಗಳಾದ ಸುಷ್ಮಾ, ಕವಿತಾ ಸುರೇಶ್‌, ವೀಣಾ, ಪ್ರೀತಮ್‌, ಧರ್ಣಪ್ಪ ಮೂಲ್ಯ ಅವರು ಶಿಬಿರದ ಅನುಭವವನ್ನು
ಹಂಚಿಕೊಂಡರು. ಅತಿಥಿಗಳಾದ ಪ್ರವೀಣ್‌ ಕೆ. ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಿದರು. ಸಾವಯವ ಕೃಷಿಕ ಗ್ರಾಹಕ
ಬಳಗದ ಆಡಳಿತ ಮಂಡಳಿ ಸದಸ್ಯ ಹರಿಕೃಷ್ಣ ಕಾಮತ್‌ ಪುತ್ತೂರು ಅವರು, ಅತಿಥಿಗಳಿಗೆ ಸಾವಯವ ಅಕ್ಕಿ ಮತ್ತು ಬೆಲ್ಲವನ್ನು ನೀಡಿ ಗೌರವಿಸಿದರು.ಶಿಬಿರಾರ್ಥಿ ಜಯಂತಿ ಶಂಕರ್‌ ಪ್ರಾರ್ಥಿಸಿ, ಸಂಜನಾ ಸತೀಶ್‌ ವಂದಿಸಿದರು. ರೆನಿಟಾ ನಿರೂಪಿಸಿದರು.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.