ಮಂಗಳೂರು ಜೈಲ್; ಕೈದಿಗೆ ಗಾಂಜಾ ಪೂರೈಕೆ: ಸಿಕ್ಕಿಬಿದ್ದ ವಿದ್ಯಾರ್ಥಿನಿ


Team Udayavani, Oct 13, 2018, 9:23 AM IST

s-19.jpg

ಮಂಗಳೂರು: ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡಲು ಹೋಗಿ ಪೊಲೀಸರಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿರುವ ಆತಂಕಕಾರಿ ಘಟನೆ ಗುರುವಾರ ಸಂಜೆ ಮಂಗಳೂರಿನಲ್ಲಿ
ನಡೆದಿದೆ. ಮಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿ, ಸುಳ್ಯದ ನಿವಾಸಿ ಬಂಧಿತ ಆರೋಪಿ. ಆಕೆಯ ಬಳಿಯಿಂದ 20 ಗ್ರಾಂ ಗಾಂಜಾ ಮತ್ತು ಒಂದು ಮೊಬೈಲ್‌ ಫೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಂತರ, ಆರೋಪಿಯನ್ನು ಗುರುವಾರ ರಾತ್ರಿಯೇ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಇದೀಗ ಆಕೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾಳೆ. ಜೈಲಿನಲ್ಲಿರುವ ವಿಚಾರಣಾಧೀನ ಕೈದಿ ವಾಮಂಜೂರಿನ ಮುಸ್ತಫಾ (24)ನಿಗೆ ಈಕೆ ಗಾಂಜಾ ಪೂರೈಕೆ ಮಾಡುತ್ತಿದ್ದಳು ಎಂದು ಪೊಲೀಸರ ವಿಚಾರಣೆಯಿಂದ ಬೆಳಕಿಗೆ
ಬಂದಿದೆ. 

ಪ್ರೇಮಕ್ಕೆ ತಿರುಗಿತ್ತು ಭೇಟಿ: ಈ ವಿದ್ಯಾರ್ಥಿನಿ ಮಂಗಳೂರಿನ ವಾಮಂಜೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡು, ಕೊಣಾಜೆಯ ಕಾಲೇಜಿಗೆ ಹೋಗುತ್ತಿದ್ದಳು. ಇದೇ ವೇಳೆ, ನಗರದ ಸಂಸ್ಥೆಯೊಂದಕ್ಕೆ ತರಬೇತಿಗೆ ಹೋಗುತ್ತಿದ್ದಾಗ ನೆರೆ ಮನೆಯ ಮುಸ್ತಫಾ ಎಂಬಾತನ ಪರಿಚಯವಾಗಿದ್ದು, ಅದು ಪ್ರೀತಿಗೆ ತಿರುಗಿತ್ತು. ಆದರೆ, 2016ರಲ್ಲಿ ವಾಮಂಜೂರಿನಲ್ಲಿ ನಡೆದ ಚರಣ್‌ ಕೊಲೆ ಪ್ರಕರಣದ ಐವರು ಆರೋಪಿಗಳಲ್ಲಿ ಮುಸ್ತಫಾ ಒಬ್ಬನಾಗಿದ್ದು, ಇದೇ ಪ್ರಕರಣದಲ್ಲಿ ಜೈಲು ಸೇರಿದ್ದ. ವರ್ಷದ ಹಿಂದೆ ಆತ ಬಿಡುಗಡೆಯಾಗಿ ಹೊರಗೆ ಬಂದಿದ್ದು, ಬಳಿಕ ಎರಡು ತಿಂಗಳ
ಹಿಂದೆ ಖಾಲಿದ್‌ ಎಂಬಾತನ ಕೊಲೆ ಯತ್ನ ಪ್ರಕರಣದಲ್ಲಿ ಸಿಕ್ಕಿ ಬಿದ್ದು ಆತ ಮತ್ತೆ ಜೈಲು ಸೇರಿದ್ದ. ಜೈಲಿನೊಳಗಿದ್ದರೂ ಮುಸ್ತಪಾ ಮತ್ತು ಆಕೆಯ ಮಧ್ಯೆ ಮೊಬೈಲ್‌ ಮೂಲಕ ಮಾತುಕತೆ ಮುಂದುವರಿದಿತ್ತು. ಸಂದರ್ಶಕರ ಕೊಠಡಿಯಲ್ಲಿ ಆತನನ್ನು ಭೇಟಿ ಮಾಡುತ್ತಿದ್ದಳು.  ಈ ವೇಳೆ, ತನ್ನ ಪರಿಚಿತರೊಬ್ಬರು ಗಾಂಜಾ ಪೂರೈಕೆ ಮಾಡುತ್ತಿದ್ದು, ಆತನಿಂದ ಅದನ್ನು ಪಡೆದು ತನಗೆ ತಂದೊಪ್ಪಿಸುವಂತೆ ಮುಸ್ತಾಫಾ ಆಕೆಗೆ ದುಂಬಾಲು ಬಿದ್ದಿದ್ದ. ಅದರಂತೆ ಗುರುವಾರ ಸಂಜೆ ಯುವಕನೊಬ್ಬ ಬೈಕ್‌ನಲ್ಲಿ ಬಂದು ಗಾಂಜಾ ಪ್ಯಾಕೆಟ್‌ನ್ನು ವಿದ್ಯಾರ್ಥಿನಿಗೆ ಜೈಲಿನ ಆವರಣದಲ್ಲಿ ನೀಡಿದ್ದ. ವಿದ್ಯಾರ್ಥಿನಿ ಅದನ್ನು ಜೈಲಿನ ಒಳಗಿರುವ ಸಂದರ್ಶಕರ ಕೊಠಡಿಗೆ ಕೊಂಡೊಯ್ಯುವ ಸಂದರ್ಭದಲ್ಲಿ ಮಾಹಿತಿ ಪಡೆದ ಸಿಸಿಬಿ ಮತ್ತು ಬರ್ಕೆ ಠಾಣೆಯ
ಪೊಲೀಸರು ಆಕೆಯನ್ನು ಬಂಧಿಸಿದರು.

ವಿ.ವಿ.ಐ.ಡಿ. ಕಾರ್ಡ್‌ ದುರುಪಯೋಗ: ವಿದ್ಯಾರ್ಥಿನಿ ತನಗೆ ವಿಶ್ವವಿದ್ಯಾನಿಲಯದಿಂದ ನೀಡಲಾಗಿರುವ ಐ.ಡಿ ಕಾರ್ಡ್‌ (ಗುರುತು ಚೀಟಿ) ತೋರಿಸಿ ಜೈಲಿನ ಒಳಗೆ ಪ್ರವೇಶಿಸುತ್ತಿದ್ದಳು ಎನ್ನಲಾಗಿದೆ. ಗಾಂಜಾ ಪೂರೈಕೆ ಮಾಡಿದ್ದ ಯುವಕನ ಬಳಿ ಯಾವುದೇ ಅಧಿಕೃತ ಐ.ಡಿ.ಕಾರ್ಡ್‌ ಇಲ್ಲದ ಕಾರಣ ಆತ ನೇರವಾಗಿ ಜೈಲಿನ ಒಳಗಿನ ಸಂದರ್ಶಕರ ಕೊಠಡಿಗೆ ತೆರಳಿ ಗಾಂಜಾವನ್ನು ಮುಸ್ತಾಫನಿಗೆ ನೀಡಲು ಸಾಧ್ಯವಿರಲಿಲ್ಲ. ಹಾಗಾಗಿ, ಮುಸ್ತಾಪನೇ ಈ ಯುವಕನಿಗೆ ಗಾಂಜಾವನ್ನು ವಿದ್ಯಾರ್ಥಿನಿಯ ಮೂಲಕ ಕಳುಹಿಸಿ ಕೊಡುವಂತೆ ಸೂಚಿಸಿದ್ದನು ಎಂದು ಮೂಲಗಳು ತಿಳಿಸಿವೆ.

ಚನ್ನಗಿರಿಯಲ್ಲಿ ನಾಲ್ವರು ಗಾಂಜಾ ಮಾರಾಟಗಾರರ ಸೆರೆ
ದಾವಣಗೆರೆ: ಸೀಮಾಂಧ್ರದಿಂದ ಗಾಂಜಾ ತಂದು ದಾವಣಗೆರೆ, ಶಿವಮೊಗ್ಗ, ಹೊಳಲ್ಕೆರೆ, ಚನ್ನಗಿರಿ ಇತರೆಡೆ ಮಾರಾಟ ಮಾಡುತ್ತಿದ್ದ ಆರೋಪದಡಿ ಒಬ್ಬ ವಿದ್ಯಾರ್ಥಿ ಸೇರಿ ನಾಲ್ವರನ್ನು ಬಂಧಿಸಿರುವ ಚನ್ನಗಿರಿ ಪೊಲೀಸರು, ಆರೋಪಿಗಳಿಂದ 7.15 ಲಕ್ಷ ರೂ. ಮೌಲ್ಯದ 28 ಕೆಜಿ 600 ಗ್ರಾಂನಷ್ಟು ಒಣ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸೀಮಾಂಧ್ರದ ಕಡಪ ಜಿಲ್ಲೆ ಜಮ್ಮಲಮಡುಗು ತಾಲೂಕು ಮುದ್ದನೂರು ಗ್ರಾಮದ ಸುಧಾಕರ್‌ ಅಲಿಯಾಸ್‌ ಲೋಮಡ ಸುಧಾಕರ್‌(24), ಬಿಎಸ್ಸಿ ವಿದ್ಯಾರ್ಥಿ ರಾಜೇಶ್‌ ಅಲಿಯಾಸ್‌ ಮಂಗಲ್‌ ರಾಜೇಶ್‌ (20), ಮುನ್ನಯ್ಯ ಅಲಿಯಾಸ್‌ ಮಂಗಲ್‌
ಮುನ್ನಯ್ಯ(26), ಬಾಬಾ ಅಲಿಯಾಸ್‌ ಶೇಖ್‌ ಬಾಬಾ ಫಕೃದ್ದೀನ್‌(26) ಬಂಧಿತರು. ಪರಾರಿಯಾಗಿರುವ ಇನ್ನೊಬ್ಬ ಆರೋಪಿ ತರಪನಾಥ್‌ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.