ಮಂಗಳೂರು: ಕೂಲಿ ಕಾರ್ಮಿಕ ನೀರಿಗೆ ಬಿದ್ದು ಸಾವು
Team Udayavani, Nov 30, 2022, 12:26 AM IST
ಮಂಗಳೂರು: ಕೂಲಿ ಕಾರ್ಮಿಕನೋರ್ವ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಗರದ ದಕ್ಷಿಣ ದಕ್ಕೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಮೃತಪಟ್ಟವರನ್ನು ದಕ್ಕೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸುಮಾರು 30ರಿಂದ 35 ವರ್ಷ ವಯಸ್ಸಿನ ಸಂತೋಷ ಎಂದು ಗುರುತಿಸಲಾಗಿದೆ.
ರಾತ್ರಿ 7.30ರ ವೇಳೆಗೆ ನದಿಯಲ್ಲಿ ತೇಲುತ್ತಿದ್ದ ಸಂತೋಷ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಆಸ್ಪತ್ರೆ ತಲುಪುವ ಮೊದಲೇ ಮೃತಪಟ್ಟಿದ್ದರು. ಮೃತರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಎಣ್ಣೆಕಪ್ಪು ಮೈಬಣ್ಣ, 5.4 ಅಡಿ ಎತ್ತರ, ಸಾಧಾರಣ ಶರೀರ, ಕೋಲುಮುಖ ಹೊಂದಿದ್ದು ಕಪ್ಪು, ಕೆಂಪು, ನೀಲಿ, ಬಿಳಿ ಪಟ್ಟಿಗಳಿರುವ ಅರ್ಧ ತೋಳಿನ ಟೀಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಬಲಗೈಯಲ್ಲಿ ಕಪ್ಪು ಮಚ್ಚೆ ಇದೆ. ವಾರಸುದಾರರು ಇದ್ದರೆ ದಕ್ಷಿಣ ಪೊಲೀಸ್ ಠಾಣೆ (0824-2220518)ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ