ಮಂಗಳೂರು-ಮಣಿಪಾಲ: ಇನ್ನೂ ಸಂಚಾರ ಆರಂಭಿಸದ ವೋಲ್ವೋ!

ಕೋವಿಡ್ ಹಿನ್ನೆಲೆಯಲ್ಲಿ ಎಂಟು ತಿಂಗಳುಗಳ ಹಿಂದೆ ಬಸ್‌ ಓಡಾಟ ಸ್ಥಗಿತ

Team Udayavani, Nov 23, 2020, 6:09 AM IST

ಮಂಗಳೂರು-ಮಣಿಪಾಲ: ಇನ್ನೂ ಸಂಚಾರ ಆರಂಭಿಸದ ವೋಲ್ವೋ!

ಮಹಾನಗರ: ಕೋವಿಡ್ ಹಿನ್ನೆಲೆಯಲ್ಲಿ ಎಂಟು ತಿಂಗಳುಗಳ ಹಿಂದೆ ಸ್ಥಗಿತಗೊಂಡ ಮಂಗಳೂರು-ಮಣಿಪಾಲ ನಡುವಿನ ಕೆಎಸ್ಸಾರ್ಟಿಸಿ ವೋಲ್ವೋ ಬಸ್‌ ಸಂಚಾರ ಇನ್ನೂ ಆರಂಭವಾಗಿಲ್ಲ. ಕೆಎಸ್ಸಾರ್ಟಿಸಿಯ ಈ ನಿಲುವಿನಿಂದಾಗಿ ಉಭಯ ಜಿಲ್ಲೆಗಳ ನಡುವೆ ದಿನನಿತ್ಯ ಸಂಚರಿಸುವ ನೂರಾರು ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ಲಾಕ್‌ಡೌನ್‌ಗೂ ಮುನ್ನ ಮಂಗಳೂರಿನ ಸ್ಟೇಟ್‌ಬ್ಯಾಂಕ್‌ನಿಂದ ಮಣಿಪಾಲ ನಡುವೆ 10 ಹವಾನಿಯಂತ್ರಿತ ಬಸ್‌ಗಳು 25 ಶೆಡ್ನೂಲ್‌ಗ‌ಳಲ್ಲಿ ಕಾರ್ಯಾಚರಣೆ ನಡೆಸುದ್ದವು. ಉಡುಪಿ, ಮಣಿಪಾಲ ಸಹಿತ ಸುತ್ತಮುತ್ತಲಿನ ಭಾಗಗಳಿಗೆ ಸಂಚರಿಸುವ ಮಂದಿ ಇದೇ ಬಸ್‌ ಅವಲಂಬಿಸಿದ್ದರು. ಬೆಳಗ್ಗೆ ಮತ್ತು ಸಂಜೆ ವೇಳೆ ಸೀಟುಗಳು ಕೂಡ ಭರ್ತಿಯಾಗುತ್ತಿದ್ದವು. ಆದರೆ ಲಾಕ್‌ಡೌನ್‌ ಕಾರಣ ಬಸ್‌ ಸಂಚಾರ ಸ್ಥಗಿತ ವಾಗಿ 8 ತಿಂಗಳುಗಳು ಕಳೆದರೂ ಮತ್ತೆ ಆರಂಭವಾಗಲಿಲ್ಲ.

ಏಕಾ ಏಕೀ ಸಂಚಾರ ರದ್ದು
ಲಾಕ್‌ಡೌನ್‌ ಸಡಿಲಗೊಂಡ ಬಳಿಕ ಪ್ರಯಾಣಿಕರ ಒತ್ತಡದ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಸ್ಟೇಟ್‌ಬ್ಯಾಂಕ್‌ನಿಂದ ಉಡುಪಿ ಬಸ್‌ ನಿಲ್ದಾಣಕ್ಕೆ ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ವೇಳೆ ನಾನ್‌ ಎಸಿ ಬಸ್‌ ಸಂಚಾರ ಆರಂಭಗೊಂಡಿತ್ತು. ಪ್ರಯಾಣಿಕರು ಕೂಡ ಉತ್ತಮವಾಗಿ ಸ್ಪಂದಿಸುತ್ತಿದ್ದರು.

ಹೀಗಿರುವಾಗಲೇ ಏಕಾಏಕಿ ಬಸ್‌ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇದರಿಂದ ಸರಕಾರಿ ಬಸ್‌ನಲ್ಲಿ ಉಡುಪಿ ಯಿಂದ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣಕ್ಕೆ ಬರಬೇಕಾದರೆ ಬಿಜೈಯಲ್ಲಿರುವ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಇಳಿದು ಅಲ್ಲಿಂದ ಬೇರೊಂದು ಬಸ್‌ನಲ್ಲಿ ಸಂಚರಿಸ ಬೇಕು. ಇದು ನಿತ್ಯ ಪ್ರಯಾಣಿಕರ ಅಸಮಾ ಧಾನಕ್ಕೆ ಕಾರಣವಾಗಿದೆ.

ಕೆಎಸ್ಸಾರ್ಟಿಸಿ ವಾದವೇನು?
ಕೆಎಸ್ಸಾರ್ಟಿಸಿ ಅಧಿಕಾರಿಗಳು ಹೇಳುವ ಪ್ರಕಾರ ಕೆಲವು ದಿನಗಳ ಹಿಂದೆ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣದಿಂದ ಉಡುಪಿ ನಡುವೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ಸೇವೆ ಆರಂಭಿಸಲಾಗಿತ್ತು. ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಇದರಿಂದ ನಿಗಮಕ್ಕೆ ನಷ್ಟ ಉಂಟಾಗುತ್ತಿದೆ. ಮಂಗಳೂರಿನಿಂದ ಉಡುಪಿಗೆ ತೆರಳಲು ಹೆಜಮಾಡಿ, ಸುರ ತ್ಕಲ್‌ ಟೋಲ್‌ನಲ್ಲಿ ಹಣ ಕಟ್ಟಬೇಕು. ಹೀಗಿದ್ದಾಗ ಬಸ್‌ ಸಂಚಾರ ನಡೆಸಿದರೆ ಲಾಭಕ್ಕಿಂತ ನಷ್ಟವೇ ಉಂಟಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಬಸ್‌ ಸಂಚಾರ ನಿಲ್ಲಿಸಲಾಗಿದೆ ಎನ್ನುತ್ತಾರೆ.

ಎ.ಸಿ. ಬಸ್‌ ಸ್ಥಗಿತ!
ಎಂಟು ತಿಂಗಳುಗಳ ಹಿಂದೆ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣದಿಂದ ಮಣಿಪಾಲಕ್ಕೆ ಸಂಚರಿ ಸುತ್ತಿದ್ದ ಹವಾನಿಯಂತ್ರಿತ ವೋಲ್ವೋ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲು ಕೆಎಸ್ಸಾರ್ಟಿಸಿ ನಿರ್ಧರಿಸಿದೆ. ಎ.ಸಿ. ಬಸ್‌ ಸಂಚಾರದಿಂದಾಗಿ ನಿಗಮಕ್ಕೆ ಪ್ರತೀ ದಿನಕ್ಕೆ 1.50 ಲಕ್ಷ ರೂ. ನಷ್ಟ ಉಂಟಾಗುತ್ತಿತ್ತು. ಎ.ಸಿ. ಬಸ್‌ನಲ್ಲಿ ಒಂದು ಲೀಟರ್‌ ಡೀಸೆಲ್‌ಗೆ ಪ್ರತೀ ಕಿ.ಮೀ.ಗೆ 2.5ರಿಂದ 2.8 ಕಿ.ಮೀ.ವರೆಗೆ ಮೈಲೇಜ್‌ ಸಿಗುತ್ತದೆ. ಪ್ರತೀ ಕಿ.ಮೀ.ಗೆ 60 ರೂ. ಖರ್ಚು ತಗುಲುತ್ತಿದ್ದು, ಕೇವಲ 30 ರೂ. ಮಾತ್ರ ಆದಾಯ ಸಿಗುತ್ತಿತ್ತು. ಮಂಗಳೂರಿನಿಂದ ಮಣಿಪಾಲಕ್ಕೆ ದಿನವೊಂದಕ್ಕೆ ಒಟ್ಟು ಬಸ್‌ಗಳು 6,500 ಕಿ.ಮೀ. ಕಾರ್ಯಾಚರಣೆ ನಡೆಸುತ್ತಿದ್ದು, 1.50 ಲಕ್ಷ ರೂ. ನಷ್ಟ ಉಂಟಾಗುತ್ತಿತ್ತು. ಇನ್ನು, ಬಹುತೇಕ ಬಸ್‌ಗಳು 10 ಲಕ್ಷ ಕಿ.ಮೀ.ಗೂ ಅಧಿಕ ಸಂಚರಿಸಿದ್ದು, ಆ ಬಸ್‌ಗಳನ್ನು ನಿಷ್ಕ್ರಿಯಗೊಳಿಸಲು ತೀರ್ಮಾನಿಸಲಾಗಿದೆ. ನಿಗಮ ಸದ್ಯ ನಷ್ಟದಲ್ಲಿದ್ದು, ಹೊಸ ಬಸ್‌ ಖರೀದಿ ಅನುಮಾನ ಎನ್ನುತ್ತಾರೆ ಕೆಎಸ್ಸಾರ್ಟಿಸಿ ಅಧಿಕಾರಿಗಳು.

ಮುಂದಿನ ದಿನಗಳಲ್ಲಿ ಬಸ್‌ ಸಂಚಾರ ಆರಂಭ
ಸ್ಟೇಟ್‌ಬ್ಯಾಂಕ್‌ನಿಂದ ಮಣಿಪಾಲ ನಡುವೆ ಎಂಟು ತಿಂಗಳುಗಳ ಹಿಂದೆ ಬಸ್‌ ಸಂಚಾರ ನಿಲ್ಲಿಸಲಾಗಿದೆ. ಲಾಕ್‌ಡೌನ್‌ ಸಡಿಲಗೊಂಡ ಬಳಿಕ ಸ್ಟೇಟ್‌ಬ್ಯಾಂಕ್‌ನಿಂದ ಉಡುಪಿ ಯವರೆಗೆ ಕೆಲವು ದಿನ ಬಸ್‌ಕಾರ್ಯಾಚರಣೆ ನಡೆಸಿದ್ದೇವೆ. ಆದರೆ ಪ್ರಯಾಣಿಕರು ಕಡಿಮೆ ಸಂಖ್ಯೆಯಲ್ಲಿ ಬರುತ್ತಿದ್ದರು. ಇದರಿಂದ ನಿಗಮಕ್ಕೆ ನಷ್ಟ ಉಂಟಾಗುತ್ತಿತ್ತು. ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜು ಆರಂಭವಾದ ಬಳಿಕ ಪುನಃ ಬಸ್‌ಸಂಚಾರ ಆರಂಭಿಸುತ್ತೇವೆ.
-ಕಮಲ್‌ ಕುಮಾರ್‌, ಕೆಎಸ್ಸಾರ್ಟಿಸಿ ಸಂಚಾರ ನಿಯಂತ್ರಣಾಧಿಕಾರಿ ಮಂಗಳೂರು

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.