ನೈಋತ್ಯ ರೈಲ್ವೇಯಲ್ಲಿ ಮಂಗಳೂರು ವಿಲೀನಕ್ಕೆ ಕರಾವಳಿಗರ ಹಕ್ಕೊತ್ತಾಯ

ಬಲಗೊಳ್ಳಲಿ ಕರಾವಳಿ ರೈಲು ಜಾಲ: ಉದಯವಾಣಿ ಅಭಿಯಾನ

Team Udayavani, Nov 29, 2020, 5:25 AM IST

ನೈಋತ್ಯ ರೈಲ್ವೇಯಲ್ಲಿ ಮಂಗಳೂರು ವಿಲೀನಕ್ಕೆ ಕರಾವಳಿಗರ ಹಕ್ಕೊತ್ತಾಯ

ಮಂಗಳೂರು ಭಾಗವನ್ನು ನೈಋತ್ಯರೈಲ್ವೇಗೆ ಸೇರಿಸುವ ಮೂಲಕ ಕರಾವಳಿ ಭಾಗಕ್ಕೆ ಹೆಚ್ಚಿನ ರೈಲು ಸೇವೆ ಒದಗಿಸಬೇಕೆಂಬುದು ಈ ಭಾಗದ ಜನರ ಬಹುದಿನಗಳ ಬೇಡಿಕೆ ಹಾಗೂ ನಿರೀಕ್ಷೆಯಾಗಿದೆ. ಈ ನಿಟ್ಟಿನಲ್ಲಿ ಉದಯವಾಣಿ ಯು “ಬಲಗೊಳ್ಳಲಿ ಕರಾವಳಿ ರೈಲು ಜಾಲ’ ಎನ್ನುವ ಅಭಿಯಾನ ಆರಂಭಿಸಿದ್ದು, ಇದಕ್ಕೆ ಈಗ ರೈಲ್ವೇ ಹೋರಾಟಗಾರರು, ಜನಪ್ರತಿನಿಧಿಗಳು ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಇದೀಗ ಈ ಬೇಡಿಕೆಗೆ ಕರಾವಳಿ ಭಾಗದ ಜನರು ಕೂಡ ಬೆಂಬಲ ಸೂಚಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆಂದೋಲನ ಯಶಸ್ವಿಗೊಳಿಸಬೇಕು
ಮಂಗಳೂರು ಭಾಗವನ್ನು ನೈಋತ್ಯ ರೈಲ್ವೇಗೆ ಸೇರಿಸುವಂತೆ ಮಾಡುವ ಈ ಆಂದೋಲನಕ್ಕೆ ನಾಗರಿಕರು ಸ್ಪಂದಿಸಿ ಯಶಸ್ವಿಗೊಳಿಸಬೇಕು. ಸರಕು ಹಾಗೂ ಪ್ರಯಾಣಿಕರ ರೈಲು ವಿಭಾಗದಲ್ಲಿ ಅತ್ಯಂತ ಹೆಚ್ಚು ಸಂಪನ್ಮೂಲಭರಿತ ಈ ಕರಾವಳಿ ವಲಯವನ್ನು ನೈಋತ್ಯ ರೈಲ್ವೇ (ಮೈಸೂರು) ವಲಯದಲ್ಲಿ ಸೇರ್ಪಡೆಗೊಳಿಸಿದರೆ ಕರಾವಳಿಯ ಸಮಸ್ತ ನಾಗರಿಕರಿಗೂ ಲಾಭ, ನೈಋತ್ಯ ರೈಲ್ವೇಗೂ ಲಾಭ. ಈಗಾಗಲೇ ಪಾಲ್ಗಾಟ್‌ ವಲಯದ ಹಿಡಿತದಲ್ಲಿರುವುದರಿಂದ, ರೈಲುಗಳು, ಟಿಕೆಟ್‌ ಹಂಚಿಕೆ, ಉದ್ಯೋಗ, ಆರ್ಥಿಕ ಲಾಭ ಸಹಿತ ಹೆಚ್ಚಿನೆಲ್ಲ ಲಾಭ ಹೊರರಾಜ್ಯಕ್ಕೆ ಆಗುತ್ತಿದೆ.
– ಶ್ರೀಪತಿ ಆಚಾರ್ಯ, ಮಂಗಳೂರು

ಶೀಘ್ರ ಕಾರ್ಯಗತವಾಗಲಿ
ಸದ್ಯ ಮಂಗಳೂರು ರೈಲ್ವೇ ಪಾಲಾ^ಟ್‌ ರೈಲ್ವೇ ವಲಯದಲ್ಲಿದೆ. ಜಿಲ್ಲೆಯ ಸಂಸದರು ಕೇಂದ್ರ ರೈಲ್ವೇ ಸಚಿವರ ಜತೆ ಮಾತನಾಡಿ ಶೀಘ್ರ ಅಲ್ಲಿಂದ ತೆರವು ಮಾಡಿ ಮಂಗಳೂರು ರೈಲ್ವೇ ವಿಭಾಗ ಅಥವಾ ಮಂಗಳೂರು ಪ್ರತ್ಯೇಕ ವಲಯ ಮಾಡಬೇಕು ಅದೂ ಸಾಧ್ಯವಾಗದಿದ್ದರೆ ಕನಿಷ್ಠ ನೈಋತ್ಯ ರೈಲ್ವೇ ಜತೆ ಸೇರಿಸಬೇಕು. ಇದು ನಮ್ಮ ಜಿಲ್ಲೆಯ ಸರ್ವ ನಾಗರಿಕರ ವಿಶೇಷ ಒತ್ತಾಯ ಹಾಗೂ ಬೇಡಿಕೆಯಾಗಿದೆ..
– ನೌಶಾದ್‌ ಮೇನಾಲ, ಈಶ್ವರಮಂಗಲ

ಎಲ್ಲ ಜನಪ್ರತಿನಿಧಿಗಳು ಕೈಜೋಡಿಸಬೇಕು
ಮಂಗಳೂರು ಭಾಗ ಶೀಘ್ರ ಮೈಸೂರು ವಿಭಾಗಕ್ಕೆ ಸೇರ್ಪಡೆ ಯಾಗಬೇಕು. ಈ ನಿಟ್ಟಿನಲ್ಲಿ ಸಂಸದರಾದ ನಳಿನ್‌ ಕುಮಾರ್‌ ಕಟೀಲು, ಶೋಭಾ ಕರಂದ್ಲಾಜೆ, ಸದಾನಂದ ಗೌಡ ಸಹಿತ ಎಲ್ಲ ಜನಪ್ರತಿನಿಧಿಗಳು ಕೈಜೋಡಿಸಿ ಕಾರ್ಯಗತಗೊಳ್ಳುವಂತೆ ಮಾಡಬೇಕು.
– ಜಯಕರ,ಸುಭಾಶ್‌ನಗರ, ಕಾಪು

ವಲಯ ಸಮಸ್ಯೆ
ಮಂಗಳೂರು – ಪುತ್ತೂರು ನಡುವೆ ರಾತ್ರಿ ಸಂಚರಿಸುವ ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯಕ್ಕೆ ವಿಸ್ತರಣೆ ಮಾಡಿ ಮರುದಿನ ಬೆಳಗ್ಗೆ ಮಂಗಳೂರಿಗೆ ಬರುವ ಹಾಗೆ ಮಾಡಲು ಕಳೆದ 12 ವರ್ಷಗಳಿಂದ ಹೋರಾಟ ಮಾಡುತ್ತ ಇದ್ದೇವೆ. ಆದರೆ ಇನ್ನೂ ಈಡೇರಿಲ್ಲ. ಎರಡು ವಲಯಗಳಿಗೆ ಸೇರಿರುವ ಕಾರಣ ಇದಕ್ಕೆ ಹಸುರು ನಿಶಾನೆ ಸಿಕ್ಕಿಲ್ಲ. ಹೀಗಾಗಿ ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗಲು ಮಂಗಳೂರು ರೈಲ್ವೇಯನ್ನು ನೈಋತ್ಯ ವಲಯಕ್ಕೆ ಸೇರಿಸಬೇಕು.
– ವಿನಯಚಂದ್ರ ಎಡಮಂಗಲ ಕಡಬ

ಸೇರ್ಪಡೆಯಿಂದ ಅಭಿವೃದ್ಧಿ ಸಾಧ್ಯ
ಪ್ರಸ್ತುತ ಮಂಗಳೂರು ಸೆಂಟ್ರಲ್‌ ನಿಲ್ದಾಣ ದಿಂದ ಕೇರಳ ಹಾಗೂ ತಮಿಳುನಾಡಿಗೆ ಹೋಗುವ ರೈಲುಗಳಿಗೆ ಆದ್ಯತೆ ದೊರೆಯುತ್ತಿದೆ. ಪ್ಲಾಟ್‌ಫಾರಂ ಸಹಿತ ರೈಲು ಸೌಲಭ್ಯಗಳು ಅಭಿವೃದ್ಧಿಯಾಗಿಲ್ಲ. 16 ವರ್ಷಗಳ ಹಿಂದೆಯೇ ಮಂಗಳೂರು ಭಾಗವನ್ನು ನೈಋತ್ಯ ರೈಲ್ವೇಗೆ ಸೇರ್ಪಡೆಗೊಳಿಸುವ ಆದೇಶ ಆಗಿದ್ದರೂ ಅದು ಇನ್ನೂ ಅನುಷ್ಠಾನಕ್ಕೆ ಬರದಿರುವುದು ಬೇಸರದ ವಿಷಯ. ಮಂಗಳೂರು ಭಾಗವನ್ನು ನೈಋತ್ಯ ವಲಯಕ್ಕೆ ಸೇರ್ಪಡೆಗೊಳಿಸುವು ದರಿಂದ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯವಾಗುತ್ತದೆ.
– ಯೋಗೀಶ್‌ ಶೆಟ್ಟಿ ಜೆಪ್ಪು, ಮಂಗಳೂರು

ಸಂಘಟಿತ ಹೋರಾಟ ರೂಪುಗೊಳ್ಳಲಿ
ಖ್ಯಾತ ವಿದ್ಯಾ ಸಂಸ್ಥೆಗಳು, ಮೀನುಗಾರಿಕೆ ಬಂದರು ಸಹಿತ ಹಲವಾರು ಕಾರಣಗಳಿಂದಾಗಿ ಕರಾವಳಿ ಕರ್ನಾಟಕ ಇಂದು ಬೃಹತ್ತಾಗಿ ಬೆಳೆಯುತ್ತಿದೆ. ಆದರೆ ನಮ್ಮ ಪಾಲಿಗೆ ರೈಲ್ವೇ ಸೌಲಭ್ಯ ಇದ್ದರೂ ಇಲ್ಲದಂತಾಗಿದೆ. ಕರಾವಳಿ ರೈಲು ವಿಭಾಗಕ್ಕೆ ಸ್ವಂತ ಅಸ್ತಿತ್ವವನ್ನು ನೀಡಬೇಕಾಗಿದೆ. ನಮಗೆ ಅನುಕೂಲಕರವಾದ ನೈಋತ್ಯ ರೈಲ್ವೇ ವಲಯಕ್ಕಾದರೂ ಇದನ್ನು ಸೇರಿಸಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಆಡಳಿತಗಾರರು ಸಂಘಟಿತ ಹೋರಾಟ ನಡೆಸಬೇಕಿದೆ.
– ರಾಘವೇಂದ್ರ ಶಿರೂರು, ಬೈಂದೂರು

ರೈಲ್ವೇ ಅಭಿವೃದ್ಧಿಗೆ ಪೂರಕ
ಪಾಲ್ಗಾಟ್‌ ವಿಭಾಗದಿಂದ ಮಂಗಳೂರನ್ನು ಪ್ರತ್ಯೇಕಿಸಿ, ಕಾರವಾರದ ಅಸ್ನೋಟಿಯಿಂದ ತಲಪಾಡಿವರೆಗೆ, ಸುಬ್ರಹ್ಮಣ್ಯದ ಎಡಮಂಗಲ ವ್ಯಾಪ್ತಿವರೆಗಿನ ಮಂಗಳೂರು ರೈಲ್ವೇ ವಿಭಾಗ ರಚಿಸಬೇಕು. ಬೆಂಗಳೂರು, ಮೈಸೂರು, ಬಳ್ಳಾರಿ, ಕಲಬುರಗಿ, ಹುಬ್ಬಳ್ಳಿ. ಮಡ್ಗಾಂವ್‌ ಸಹಿತ ಮಂಗಳೂರು ವಿಭಾಗವನ್ನೂ ಸೇರಿಸಿದ ಹುಬ್ಬಳ್ಳಿ ಕೇಂದ್ರಿತ ಸಮಗ್ರ ನೈಋತ್ಯ ರೈಲ್ವೇ ವಲಯವನ್ನು ರಚಿಸಬೇಕು. ಇದು ರಾಜ್ಯದ ರೈಲ್ವೇ ಯೋಜನೆಗಳ ಅಭಿವೃದ್ಧಿಗೆ ಪೂರಕವಾಗಿದೆ. ನಮ್ಮ ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು.
– ಬಿ.ಎಲ್‌.ದಿನೇಶ್‌ ಕುಮಾರ್‌ ಅಶ್ವತ್ಥಪುರ, ಮೂಡಬಿದಿರೆ

ಸರಿಯಾದ ಸಮಯವಿದು
ಪಾಲಕ್ಕಾಡ್‌ ಲಾಬಿಯಿಂದಾಗಿ ಕೆಲವೊಂದು ಪ್ರದೇಶಗಳ ಹೊರತಾಗಿ ಕರ್ನಾಟಕದ ಬಹುತೇಕ ಊರುಗಳಿಗೆ ಮಂಗಳೂರಿನಿಂದ ರೈಲು ಸಂಚಾರವಿಲ್ಲದೆ ದ್ವೀಪದಂತಾಗಿದೆ. ಮಂಗಳೂರು ರೈಲ್ವೇ ವಿಭಾಗವನ್ನು ನೈಋತ್ಯ ರೈಲ್ವೇಯೊಂದಿಗೆ ವಿಲೀನ ಮಾಡುವುದಕ್ಕೆ ಇದು ಸರಿಯಾದ ಸಮಯ. ವಿಲೀನಗೊಂಡರೆ ಬೆಂಗಳೂರು ಮತ್ತಿತರ ಭಾಗಗಳಿಗೆ ರೈಲು ಸೇವೆ ಹೆಚ್ಚಿ, ಸಾರ್ವಜನಿಕರಿಗೆ ಅಗ್ಗದ ದರದಲ್ಲಿ ಸಂಚಾರ ಸಾಧ್ಯವಾಗುತ್ತದೆ. ಮಂಗಳೂರು, ಉಡುಪಿ ಭಾಗದ ಜನರಿಗೆ ತುಂಬಾ ಸಹಕಾರಿಯಾಗುತ್ತದೆ.
– ಕಿರಣ್‌ ಟಿ.ವಿ., ತುಮಕೂರು

ತ್ರಿಶಂಕು ಸ್ಥಿತಿಗೆ ಪರಿಹಾರ
ಮಂಗಳೂರು ಭಾಗದ ರೈಲ್ವೇಯ ತ್ರಿಶಂಕು ಪರಿಸ್ಥಿತಿ ನಿವಾರಣೆಯಾಗಿ ಅಭಿವೃದ್ಧಿಯತ್ತ ಸಾಗಲು ಹಾಗೂ ಈ ಭಾಗದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುವಂತಾಗಲು ನೈಋತ್ಯ ರೈಲ್ವೇಗೆ ಸೇರ್ಪಡೆಯಾಗುವುದು ಅವಶ್ಯವಾಗಿದೆ.
– ಅವಿಲ್‌ ಪಿಂಟೋ, ಕುಳಾಯಿ

ಜನಪ್ರತಿನಿಧಿಗಳು ಒಂದಾಗಿ ಹೋರಾಡಲಿ
ಹೊಸ ಮಾರ್ಗ, ರೈಲು ಮುಂತಾದ ವಿಚಾರ ಗಳಲ್ಲಿ 3 ವಿಭಾಗಗಳನ್ನು ಸಂಪರ್ಕಿಸಬೇಕಾದ ಅನಿವಾರ್ಯ ಬಂದೊ ದಗಿದೆ. ಈ ಸಮಸ್ಯೆ ಯಿಂದಾಗಿ ಮಂಗ ಳೂರು ರೈಲ್ವೇ ಅಭಿವೃದ್ಧಿಯಾಗುತ್ತಿಲ್ಲ. ಇದೀಗ ವಿಲೀನ ಪ್ರಕ್ರಿಯೆಗೆ ಮತ್ತೆ ಜೀವ ಬಂದಿದೆ. ದಕ್ಷಿಣ ವಲಯದ ಅಧೀನಕ್ಕೊಳ ಪಟ್ಟ ಮಂಗಳೂರು ಭಾಗವನ್ನು ನೈಋತ್ಯ ರೈಲ್ವೇಗೆ ಸೇರಿಸಲು ನಮ್ಮ ಪ್ರತಿನಿಧಿಗಳು ಪಕ್ಷ ಭೇದ ಮರೆತು ಧ್ವನಿಯನ್ನು ಸಂಬಂಧಪಟ್ಟ ವರಿಗೆ ತಲುಪಿಸಬೇಕಾದ ತುರ್ತು ಅಗತ್ಯ ವಿದೆ. ಸಂಘಟಿತ ಹೋರಾಟದಿಂದ ಮಾತ್ರ ಪರಿಹಾರ ಸಾಧ್ಯ.
– ಎ. ಅಬೂಬಕರ್‌, ಅನಿಲಕಟ್ಟೆ, ವಿಟ್ಲ

ಸವಲತ್ತು ಕೇರಳ ಪಾಲು
ಕೇಂದ್ರ ಮತ್ತು ರಾಜ್ಯ ಸರಕಾರದಲ್ಲಿ ಕರಾವಳಿ ಭಾಗದ ಬಹುತೇಕ ಶಾಸಕರು ಮತ್ತು ಸಂಸದರು ಇದ್ದರೂ, ಕರಾವಳಿಗರ ಹಲವಾರು ವರ್ಷಗಳ ಬೇಡಿಕೆಯಾದ ಮಂಗಳೂರು ರೈಲ್ವೇ ವಿಭಾಗವನ್ನು ನೈಋತ್ಯ ರೈಲ್ವೇಯೊಂದಿಗೆ ವಿಲೀನ ಮಾಡುವ ಪ್ರಕ್ರಿಯೆ ಇನ್ನೂ ಕೈಗೂಡದಿರುವುದು ನಾಚಿಕೆಗೇಡಿನ ಸಂಗತಿ. ಹಾಗಾದರೆ ನಮ್ಮ ಜನಪ್ರತಿನಿಧಿಗಳಿಗೆ ಕರಾವಳಿ ಭಾಗದ ಆರ್ಥಿಕಾಭಿವೃದ್ಧಿಯ ಇಚ್ಛಾಶಕ್ತಿ ಇಲ್ಲದೇ ಹೋಯಿತೇ?.
– ಗಣೇಶ್‌ ಪುತ್ರನ್‌, ಥಾಣೆ.

ಮುತುವರ್ಜಿ ವಹಿಸಿ
ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಈ ಸಮಸ್ಯೆ ತಲೆದೋರಿದೆ. ಇನ್ನಾದರೂ ಜನ ಪ್ರತಿನಿಧಿಗಳು ಮುತುವರ್ಜಿ ವಹಿಸಿ ಬೇಡಿಕೆ ಈಡೇರಿಸಲು ಮುಂದಾಗಬೇಕು.
– ಕೆ. ರಾಮಚಂದ್ರ ಆಚಾರ್ಯ, ಉಡುಪಿ

ಅಭಿಪ್ರಾಯ ತಿಳಿಸಿ
ಮೂರು ವಿಭಾಗಗಳಲ್ಲಿ ಹಂಚಿಹೋಗಿ ರುವ ಮಂಗಳೂರು ರೈಲ್ವೇಯು ಪೂರ್ತಿ ಯಾಗಿ ಅತ್ತ ನೈಋತ್ಯ ವಲಯಕ್ಕೂ ಸೇರದೆ ತ್ರಿಶಂಕು ಸ್ಥಿತಿಯಲ್ಲಿದೆ. ಆದ್ದರಿಂದ ಮಂಗ ಳೂರು ವ್ಯಾಪ್ತಿಯನ್ನು ನೈಋತ್ಯ ರೈಲ್ವೇಗೆ ಸೇರಿಸುವಂತೆ ಹಕ್ಕೊತ್ತಾಯ ಆರಂಭ ವಾಗಿದ್ದು, ಈ ನಿಟ್ಟಿನಲ್ಲಿ ಓದುಗರೂ ತಮ್ಮ ಅಭಿಪ್ರಾಯಗಳನ್ನು ಚುಟುಕಾಗಿ ಬರೆದು ನಿಮ್ಮ ಹೆಸರು, ಊರು, ತಾಲೂಕು ನಮೂದಿಸಿ ನಿಮ್ಮದೊಂದು ಭಾವಚಿತ್ರ ಸಹಿತ ಕಳುಹಿಸಿಕೊಡಿ.
ವಾಟ್ಸ್‌ಆ್ಯಪ್‌: 9900567000

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.