ಪಾಲಿಕೆ ವೈಫಲ್ಯಗಳ ಕುರಿತು ಕಾಂಗ್ರೇಸ್ ಮುಖಂಡರು ಆತ್ಮಾವಲೋಕನ ಮಾಡಿಕೊಳ್ಳಲಿ – ಶಾಸಕ ಕಾಮತ್
Team Udayavani, Jan 15, 2020, 3:25 PM IST
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಶೀಘ್ರವೇ ಪರಿಷತ್ ಅಸ್ತಿತ್ವಕ್ಕೆ ಬರಲಿದೆ ಎಂದು ಮಂಗಳೂರು ದಕ್ಷಿಣ ವಲಯದ ಶಾಸಕ ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಉಪಚುನಾವಣೆಯ ಕಾರಣದಿಂದ ಪಾಲಿಕೆಯ ಆಡಳಿತ ವ್ಯವಸ್ಥೆಯಲ್ಲಿ ವಿಳಂಬವಾಗಿದೆಯೇ ಹೊರತು ಮತ್ತೇನೂ ಅಲ್ಲ. ಆದರೆ ನಮ್ಮ ಮೇಲೆ ಆರೋಪ ಮಾಡುತ್ತಿರುವ ಕಾಂಗ್ರೇಸ್ ಮುಖಂಡರಿಗೆ ಕಳೆದ ಬಾರಿ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೇಸ್ ಒಂದು ವರ್ಷ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಸದೆ ಕಾಲಹರಣ ಮಾಡಿದ್ದು ಮರೆತು ಹೋಗಿದೆಯೇ ಎಂದು ಶಾಸಕ ಕಾಮತ್ ಪ್ರಶ್ನಿಸಿದ್ದಾರೆ.
ಕಂದಾಯ ವಸೂಲಾತಿ ವಿಚಾರದಲ್ಲಿ ಕಾಂಗ್ರೇಸ್ ಆಡಳಿತ ಸಂಧರ್ಭದಲ್ಲಿ ತನ್ನ ವೈಫಲ್ಯದಿಂದಾಗಿ ಪಾಲಿಕೆಯ ಖಜಾನೆ ತುಂಬಿಸಲು ಸಾಧ್ಯವಾಗಲಿಲ್ಲ ಎನ್ನುವ ಸತ್ಯವನ್ನು ಕಾಂಗ್ರೇಸ್ ಮುಖಂಡರು ಒಪ್ಪಿಕೊಳ್ಳಬೇಕು. ಕಂದಾಯ ವಸೂಲಾತಿಯ ದೃಢವಾದ ದಾಖಲೆಗಳನ್ನು ಸಂರಕ್ಷಿಸುವಲ್ಲಿ ಕಾಂಗ್ರೇಸ್ ವಿಫಲವಾಗಿದೆ ಹಾಗೂ ಈ ಎಲ್ಲಾ ತಪ್ಪುಗಳನ್ನು ಈಗಷ್ಟೇ ಆಡಳಿತಕ್ಕೆ ಬಂದಿರುವ ನಮ್ಮ ತಲೆಗೆ ಕಟ್ಟುವ ಪ್ರಯತ್ನ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.
ಆರೋಗ್ಯ ಕ್ಷೇತ್ರದಲ್ಲೂ 6-7 ನೇ ಸ್ಥಾನದಲ್ಲಿದ್ದ ಮಂಗಳೂರು ಮಹಾನಗರ ಪಾಲಿಕೆ 152ನೇ ಸ್ಥಾನಕ್ಕೆ ಕುಸಿದಿದೆ ಎನ್ನುವ ಆರೋಪವೊಂದನ್ನು ಕಾಂಗ್ರೇಸ್ ಮುಖಂಡರು ಮಾಡಿದ್ದಾರೆ. ಆ ಮೂಲಕ ತಮ್ಮ ಆಡಳಿತದ ಕೊನೆಯ ವರ್ಷದ ಸಾಧನೆಯನ್ನು ಅವರೇ ಜನರ ಮುಂದಿಟ್ಟಿದ್ದಾರೆ. ಆ ಆರೋಪಕ್ಕೂ ನಮಗೂ ಸಂಬಂಧವೇ ಇಲ್ಲ. ಪಾಲಿಕೆಯ ಕಳಪೆ ಸಾಧನೆಗೆ ಕಾಂಗ್ರೇಸ್ ಮುಖಂಡರೇ ಹೊಣೆಗಾರರು. ನಮ್ಮ ಆಡಳಿತಾವಧಿಯ ಫಲಿತಾಂಶವನ್ನು ಮುಂದಿನ ದಿನಗಳಲ್ಲಿ ತೋರಿಸಿಕೊಡುತ್ತೇವೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?