ಶಾಂತಿಯುತ ಮತದಾನಕ್ಕೆ ಸರ್ವ ಸಿದ್ಧತೆ
ಮಹಾನಗರ ಪಾಲಿಕೆ ಚುನಾವಣೆ
Team Udayavani, Nov 7, 2019, 4:08 AM IST
ಮಹಾನಗರ: ಮಹಾನಗರ ಪಾಲಿಕೆ ಚುನಾವಣೆಗೆ ಇನ್ನೂ ಐದು ದಿನಗಳಷ್ಟೇ ಬಾಕಿಯಿದ್ದು, ಎಲ್ಲ 60 ವಾರ್ಡ್ಗಳಲ್ಲಿಯೂ ನ್ಯಾಯಸಮ್ಮತ, ಶಾಂತಿಯುತವಾಗಿ ಮತದಾನ ನಡೆಸುವುದಕ್ಕೆ ಬೇಕಾದ ಎಲ್ಲ ಪೂರ್ವ ತಯಾರಿಯನ್ನು ಇದೀಗ ಜಿಲ್ಲಾಡಳಿತವು ನಡೆಸುತ್ತಿದೆ.
ಈ ಬಾರಿಯ ಪಾಲಿಕೆ ಚುನಾವಣೆಗೆ ಒಟ್ಟು 448 ಮತಗಟ್ಟೆಗಳಿದ್ದು, ಈ ಎಲ್ಲ ಮತಗಟ್ಟೆಗಳಲ್ಲೂ ವ್ಯವಸ್ಥಿತವಾಗಿ ಮತದಾನ ನಡೆಸಲು ಚುನಾವಣ ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ. ಇದಕ್ಕಾಗಿ 2,500 ಮತಗಟ್ಟೆ ಅಧಿಕಾರಿಗಳು, 12 ಚುನಾವಣಾಧಿಕಾರಿ, 12 ಸಹಾಯಕ ಚುನಾವಣಾಧಿಕಾರಿ, 24 ಸೆಕ್ಟರ್ ಆಫೀಸರ್, 15 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಅಧಿಕಾರಿಗಳು ಚುನಾವಣೆ ನಡೆಯುವ ದಿನ, ಅದಕ್ಕೂ ಮುನ್ನ ವ್ಯವಸ್ಥಿತವಾಗಿ ಚುನಾವಣೆ ನಡೆಸಲು ಸಿದ್ಧತೆ ಕೈಗೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ಕರೆದು ಸೂಕ್ತ ಮಾಹಿತಿ ನೀಡಲಾಗುತ್ತಿದೆ. ಇನ್ನೂ ಚುನಾವಣೆ ಕಾರ್ಯ ನಿಮಿತ್ತ 89 ರೂಟ್ಗಳಿಗೆ ಬಸ್, ವ್ಯಾನ್ಗಳನ್ನು ಹಾಕಲು ನಿರ್ಧರಿಸಲಾಗಿದೆ. ಈ ಕುರಿತಂತೆ ಅಂತಿಮ ಚಿತ್ರಣ ಇನ್ನಷ್ಟೇ ಲಭಿಸಬೇಕಾಗಿದೆ.
ಇವಿಎಂ ಮಿಷನ್ ತಪಾಸಣೆ
ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ 448 ಮತಗಟ್ಟೆಗಳಿಗೆ ಸಂಬಂಧಿಸಿದಂತೆ ಒಟ್ಟು 448 ಇವಿಎಂ ಮಿಷನ್ ಹಾಗೂ ಹೆಚ್ಚುವರಿಯಾಗಿ 150 ಇವಿಎಂ ಮಿಷನ್ಗಳ ಕಾರ್ಯ ನಿರ್ವಹಣೆಯನ್ನು ತಪಾಸಣೆಗೆ ಒಳಪಡಿಸಲಾಗುತ್ತದೆ. ಗುರುವಾರದಿಂದ ಈ ಇವಿಎಂ ಮಿಷನ್ಗಳನ್ನು ಸಜ್ಜುಗೊಳಿಸುವ ಕೆಲಸ ನಡೆಯಲಿದೆ ಎಂದು ಪಾಲಿಕೆ ಚುನಾವಣಾಧಿಕಾರಿ “ಸುದಿನ’ಕ್ಕೆ ತಿಳಿಸಿದ್ದಾರೆ.
ಭಾವಚಿತ್ರ ಇರುವ ಮತಪತ್ರ
ಈ ಹಿಂದಿನ ಚುನಾವಣೆಯಲ್ಲಿ ಒಂದು ವಾರ್ಡ್ನಲ್ಲಿ ಒಂದೇ ಹೆಸರಿನ ಅಭ್ಯರ್ಥಿಗಳು ಸ್ಪರ್ಧಿಸುವ ಸಾಧ್ಯತೆಗಳನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ತೋರಿಸಲು ಮತಪತ್ರದಲ್ಲಿ ಅವರ ಹೆಸರಿನ ಮುಂದೆ ವೃತ್ತಿ ಅಥವಾ ವಿಳಾಸ ಮುಂತಾದುವುಗಳನ್ನು ತೋರಿಸಲಾಗುತ್ತಿತ್ತು. ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಪ್ರಥಮವಾಗಿ ಮತಪತ್ರದಲ್ಲಿ ಎಲ್ಲ ಅಭ್ಯರ್ಥಿಗಳ ಹೆಸರಿನ ಮುಂದೆ ಭಾವಚಿತ್ರ ಮುದ್ರಿಸಲಾಗುತ್ತಿದೆ. ಪಾಲಿಕೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಚುನಾವಣೆ ವೆಚ್ಚದ ಗರಿಷ್ಠ ಮಿತಿಯನ್ನು 3 ಲಕ್ಷ ರೂ. ಗೆ ನಿಗದಿಪಡಿಸಲಾಗಿದೆ.
ಎಡಗೈ ಉಂಗುರದ ಬೆರಳಿಗೆ ಗುರುತು
ಈ ಬಾರಿಯ ಪಾಲಿಕೆ ಚುನಾವಣೆಯಲ್ಲಿ ಮತದಾರರ ಎಡಗೈ ಉಂಗುರದ ಬೆರಳಿಗೆ ಅಳಿಸಲಾಗದ ಶಾಹಿಯನ್ನು ಹಾಕುವಂತೆ ರಾಜ್ಯ ಚುನಾವಣ ಆಯೋಗ ನಿರ್ದೇಶನ ನೀಡಿದೆ. ಈ ಸಂಬಂಧ ಚುನಾವಣಾಧಿಕಾರಿಗಳಿಗೆ, ಮತಗಟ್ಟೆ ಅಧಿಕಾರಿಗಳಿಗೆ ಅಗತ್ಯ ಸೂಚನೆಯನ್ನು ಈಗಾಗಲೇ ನೀಡಲಾಗಿದೆ ಎಂದು ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ತಿಳಿಸಿದ್ದಾರೆ.
ನ.12: ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಹಲವು ಶಾಲೆಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಿರುವ ಹಿನ್ನೆಲೆಯಲ್ಲಿ ನ. 12ರಂದು ಶಾಲಾ ಕಾಲೇಜುಗಳು(ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಸಾರ್ವತ್ರಿಕ ರಜೆಯನ್ನು ಸರಕಾರ ಘೋಷಿಸಿದೆ. ಜತೆಗೆ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪೆನಿಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ.
ಚುನಾವಣೆಗೆ ಸಕಲ ಸಿದ್ಧತೆ
ಚುನಾವಣೆಯನ್ನು ವ್ಯವಸ್ಥಿತ ಹಾಗೂ ಶಾಂತಿಯುತವಾಗಿ ನಡೆಸಲು ಸಕಲ ರೀತಿಯಲ್ಲೂ ಸಿದ್ಧತೆ ನಡೆಸಲಾಗುತ್ತಿದೆ. ಅಧಿಕಾರಿಗಳಿಗೆ ಈ ಕುರಿತಂತೆ ಮಾಹಿತಿ ನೀಡುವ ಕೆಲಸ, ಇವಿಎಂ ಮೆಷಿನ್ಗಳ ಪರಿಶೀಲನೆ ಸೇರಿದಂತೆ ಇತರ ಚುನಾವಣೆ ಸಂಬಂಧಿತ ಕೆಲಸಗಳು ವೇಗ ಪಡೆದುಕೊಳ್ಳಲಿವೆ.
- ಗಾಯತ್ರಿ ನಾಯಕ್, ವಿಶೇಷ ಚುನಾವಣಾಧಿಕಾರಿ
- ಪ್ರಜ್ಞಾ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ