ಬೆಳಗ್ಗೆ 8ರಿಂದ ಮತ ಎಣಿಕೆ; ಜಿಲ್ಲಾಡಳಿತದಿಂದ ಸರ್ವ ಸಿದ್ಧತೆ-ವ್ಯಾಪಕ ಭದ್ರತೆ

ಮನಪಾ 60 ವಾರ್ಡ್‌ಗಳ 180 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

Team Udayavani, Nov 14, 2019, 4:02 AM IST

vv-17

ಮಹಾನಗರ: ಮನಪಾ 60 ವಾರ್ಡ್‌ಗಳಿಗೆ ಮಂಗಳವಾರ ನಡೆದ ಮತದಾನದ ಮತ ಎಣಿಕೆ ಕಾರ್ಯವು ಮಂಗಳೂರಿನ ರೊಸಾರಿಯೋ ಶಿಕ್ಷಣ ಸಂಸ್ಥೆಯಲ್ಲಿ ನ. 14ರಂದು ಬೆಳಗ್ಗೆ 8ರಿಂದ ಆರಂಭ ಗೊಳ್ಳಲಿದ್ದು, ಮಧ್ಯಾಹ್ನದ ವೇಳೆಗೆ ಸಂಪೂರ್ಣ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.ಇದರೊಂದಿಗೆ 20 ದಿನಗಳಿಂದ ನಡೆಯುತ್ತಿದ್ದ ಪಾಲಿಕೆ ಚುನಾವಣೆ ಪ್ರಕ್ರಿಯೆಗಳಿಗೆ ತೆರೆ ಬೀಳಲಿದ್ದು, ಪಾಲಿಕೆಯಲ್ಲಿ ಮುಂದಿನ ಅವಧಿಯ ಅಧಿಕಾರದ ಚುಕ್ಕಾಣಿ ಯಾವ ಪಕ್ಷದ ಪಾಲಿಗೆ ಒಲಿಯಬಹುದು ಎನ್ನುವುದು ಗೊತ್ತಾಗಲಿದೆ.

ಕಣದಲ್ಲಿರುವ 180 ಅಭ್ಯರ್ಥಿಗಳ ಪೈಕಿ ಮತದಾರರ ತೀರ್ಪು ಯಾರ ಪರವಾಗಿದೆ ಎಂಬ ಕುತೂಹಲಕ್ಕೆ ಗುರುವಾರ ಬೆಳಗ್ಗೆ ಉತ್ತರ ದೊರೆಯಲಿದೆ. ಬೆಳಗ್ಗೆ 7.45ಕ್ಕೆ ಅಭ್ಯರ್ಥಿ/ ಚುನಾವಣ ಏಜೆಂಟರ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರವುಗೊಳಿಸಲಾಯಿತು. 8 ಗಂಟೆಯಿಂದ ಚುನಾವಣಾಧಿಕಾರಿಗಳ ಕೊಠಡಿವಾರು ಏಕಕಾಲದಲ್ಲಿ ಮತ ಎಣಿಕೆ ಆರಂಭವಾಗಲಿದೆ. ರೊಸಾರಿಯೋದ ಮೊದಲನೇ ಮಹಡಿಯ ಒಟ್ಟು 3 ಕೊಠಡಿಗಳನ್ನು ಭದ್ರತಾ ಕೊಠಡಿಯಾಗಿ ನಿಯುಕ್ತಿಗೊಳಿಸಲಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಯು ಎಣಿಕೆ ಮೇಜುಗಳ ಸಂಖ್ಯೆಗಳ ಅನುಸಾರ ಎಣಿಕೆ ಏಜೆಂಟರ್‌ಗಳನ್ನು ನೇಮಿಸಲು ಅವಕಾಶ ನೀಡಲಾಗಿದೆ. ಚುನಾವಣಾಧಿಕಾರಿವಾರು ಒಟ್ಟು 12 ಮತ ಎಣಿಕೆ ಕೊಠಡಿ ತೆರೆಯಲಾಗಿದೆ. ಪ್ರತೀ ಚುನಾವಣಾಧಿಕಾರಿಯವರ ಮೇಜಿನಲ್ಲಿ ಅಂಚೆ ಮತಪತ್ರಗಳ ಎಣಿಕೆ ಮೊದಲಿಗೆ ಪ್ರಾರಂಭಿಸಲಾಗುವುದು. ಅನಂತರ ಟೇಬಲಿನಲ್ಲಿ ಮತ ಎಣಿಕೆ ನಡೆಯಲಿದೆ.

60 ಟೇಬಲ್‌-183 ಸಿಬಂದಿ
ಪ್ರತೀ ಚುನಾವಣಾಧಿಕಾರಿ ಕೊಠಡಿಗೆ 5 ಟೇಬಲ್‌ ವ್ಯವಸ್ಥೆ ಮಾಡ ಲಾಗಿದ್ದು, ಒಟ್ಟು 60 ಮೇಜುಗಳನ್ನು ಸಿದ್ಧಪಡಿಸಲಾಗಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ ಮತ್ತು ಒಬ್ಬ ಎಣಿಕೆ ಸಹಾಯಕ, ಓರ್ವ ಗ್ರೂಪ್‌ ಡಿ ನೌಕರರನ್ನು (ಮತ ಎಣಿಕೆ ಮೇಜಿಗೆ ಹಾಗೂ ಮತ ಎಣಿಕೆ ಮೇಜಿಂದ ಮತಯಂತ್ರ ಒಯ್ಯಲು) ನೇಮಿಸಲಾಗಿದೆ. ಒಟ್ಟು 53 ಮೇಲ್ವಿಚಾರಕರು, 53 ಎಣಿಕೆ ಸಹಾಯಕರು, 53 ಗ್ರೂಪ್‌ ಡಿ ಸಿಬಂದಿ ಸೇರಿದಂತೆ ಒಟ್ಟು 183 ಸಿಬಂದಿಗಳನ್ನು ನಿಯುಕ್ತಿ ಮಾಡಲಾಗಿದೆ. ಪ್ರತೀ ಚುನಾವಣಾಧಿಕಾರಿಯವರ ಕೊಠಡಿಯಲ್ಲಿ ತಲಾ ಒಂದೊಂದು ಟ್ಯಾಬುಲೇಷನ್‌ ಟೇಬಲ್‌ ರೆಡಿ ಮಾಡಲಾಗಿದೆ. ಇದಕ್ಕಾಗಿ ಇಬ್ಬರು ಟ್ಯಾಬುಲೇಷನ್‌ ಸಹಾಯಕ ಸಿಬಂದಿ ನೇಮಿಸಲಾಗಿದೆ.

ವಾರ್ಡ್‌ನ ಮತಗಳ ಎಣಿಕೆ ಪೂರ್ಣಗೊಂಡ ಬಳಿಕ ಟ್ಯಾಬುಲೇಷನ್‌ ಮಾಡಿ ನಿಯಮಾನುಸಾರ ಚುನಾವಣಾ ಧಿಕಾರಿ ಫ‌ಲಿತಾಂಶ ಘೋಷಿ ಸಲಾಗುತ್ತದೆ. ಮತ ಎಣಿಕೆ ಪೂರ್ಣಗೊಂಡ ಬಳಿಕ ಎಲ್ಲ ಇವಿಎಂಗಳನ್ನು, ಶಾಸನ ಬದ್ಧವಲ್ಲದ ಲಕೋಟೆಗಳನ್ನು ಮೊಹರು ಮಾಡಿ ಜಿಲ್ಲಾ ಖಜಾನೆಯಲ್ಲಿ ಡೆಪಾಸಿಟ್‌ ಮಾಡಲಾಗುತ್ತದೆ.

ಮತಯಂತ್ರಗಳಿಗೆ ವಿಶೇಷ ಭದ್ರತೆ
ಮಂಗಳವಾರ ಮತದಾನ ಮುಗಿದ ಬಳಿಕ ಇವಿಎಂ ಮೆಷಿನ್‌ ಅನ್ನು ಬಿಗಿಭದ್ರತೆಯಲ್ಲಿ ರೊಸಾರಿಯೋದ ಸ್ಟ್ರಾಂಗ್‌ ರೂಂನಲ್ಲಿ ಇರಿಸಲಾಗಿದೆ. ಮತಯಂತ್ರಗಳಿಗೆ ಪೊಲೀಸರಿಂದ ವಿಶೇಷ ಭದ್ರತೆಯನ್ನೂ ಒದಗಿಸಲಾಗಿದೆ. ಮತಯಂತ್ರಗಳನ್ನು ಇರಿಸಲಾಗಿರುವ ರೊಸಾರಿಯೋ ಮುಖ್ಯದ್ವಾರದಲ್ಲಿ ಪೊಲೀಸ್‌ ಭದ್ರತೆ ಒದಗಿಸಲಾಗಿದ್ದು, ಚುನಾವಣ ಕರ್ತವ್ಯನಿರತ ಸಿಬಂದಿಹೊರತುಪಡಿಸಿ ಅನ್ಯರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಚುನಾವಣಾಧಿಕಾರಿಗಳು- ಪೊಲೀಸ್‌ ಸಿಬಂದಿಗೆ ಬುಧವಾರವೂ ತರಬೇತಿ ನೀಡಲಾಗಿದೆ. ರಾಜಕೀಯ ಪಕ್ಷಗಳಿಂದ ನಿಯೋಜನೆಗೊಂಡಿರುವ, ಚುನಾವಣ ಆಯೋಗದಿಂದ ಅಧಿಕೃತವಾಗಿ ಗುರುತುಪತ್ರ ಪಡೆದಿರುವ ಎಣಿಕೆ ಏಜೆಂಟರ್‌, ಅಭ್ಯರ್ಥಿಗಳಿಗೆ ಮತಎಣಿಕೆ ಕೇಂದ್ರದಲ್ಲಿರಲು ಅವಕಾಶ ನೀಡಲಾಗಿದೆ. ರೊಸಾರಿಯೊ ಶಾಲೆಯ ಸುತ್ತಮುತ್ತ ಪಾರ್ಕಿಂಗ್‌ ನಿಷೇಧಿಸಲಾಗಿದೆ.

ಕುತೂಹಲ ಕೆರಳಿಸಿರುವ ಸ್ಪರ್ಧಾ ವಾರ್ಡ್‌
ಈ ಬಾರಿಯ ಚುನಾವಣೆಯಲ್ಲಿ ಕೆಲವು ವಾರ್ಡ್‌ಗಳು ಕುತೂಹಲದ ಕಣವಾಗಿ ಗುರುತಿಸಿಕೊಂಡಿವೆ. ಕೊನೆಯ ಕ್ಷಣದಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಮಾಜಿ ಕಾರ್ಪೊರೇಟರ್‌ ಆಶಾ ಡಿ’ಸಿಲ್ವಾ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಮಾಜಿ ಮೇಯರ್‌ ಜೆಸಿಂತ ಆಲ್ಫೆ†ಡ್‌ ಸ್ಫರ್ಧೆಯ ಫಳ್ನೀರ್‌ ವಾರ್ಡ್‌ ಕುತೂಹಲ ಕೆರಳಿಸಿದೆ.

ಉಳಿದಂತೆ, ಮಾಜಿ ಮೇಯರ್‌ ಗುಲ್ಜಾರ್‌ ಬಾನು ಕಾಂಗ್ರೆಸ್‌ನಿಂದ ಸಿಡಿದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕಾಟಿಪಳ್ಳ ಉತ್ತರ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಮೇಯರ್‌ ಕೆ. ಅಶ್ರಫ್‌ ಅವರು ಈ ಬಾರಿ ಪೋರ್ಟ್‌ ವಾರ್ಡ್‌ನಲ್ಲಿ ಪಕ್ಷೇತರವಾಗಿ ನಿಂತ ಹಿನ್ನೆಲೆಯಲ್ಲಿ ಈ ಎರಡೂ ಕ್ಷೇತ್ರಗಳು ಕುತೂಹಲ ಕೆರಳಿಸಿವೆ.

ಈ ಮಧ್ಯೆ ಕಳೆದ ಬಾರಿ ಕಣ್ಣೂರು ಕ್ಷೇತ್ರದಿಂದ ಕಾರ್ಪೊರೇಟರ್‌ ಆಗಿ, ಪಾಲಿಕೆಯಲ್ಲಿ ವಿರೋಧ ಪಕ್ಷದ ನಾಯಕನಾಗಿದ್ದ ಸುಧೀರ್‌ ಶೆಟ್ಟಿ ಕಣ್ಣೂರು ಸ್ಫರ್ಧಿಸಿದ ಕೊಡಿಯಾಲಬೈಲ್‌ ವಾರ್ಡ್‌, ಮಾಜಿ ಮೇಯರ್‌ ಶಶಿಧರ ಹೆಗ್ಡೆ ಸ್ಪರ್ಧಿಸಿದ ದೇರೆಬೈಲು ದಕ್ಷಿಣ, ನಿಕಟಪೂರ್ವ ಮೇಯರ್‌ ಭಾಸ್ಕರ್‌ ಸ್ಪರ್ಧಿಸಿದ ಪದವು ಪೂರ್ವ ವಾರ್ಡ್‌, ಇಬ್ಬರು ನಿಕಟಪೂರ್ವ ಕಾರ್ಪೊರೇಟರ್‌ಗಳ ಸ್ಪರ್ಧಾಕಣವಾಗಿದ್ದ ಕಂಕನಾಡಿ ವಾರ್ಡ್‌ ಕೂಡ ಕುತೂಹಲದ ಕಣವಾಗಿ ಮಾರ್ಪಟ್ಟಿದ್ದು, ಎಲ್ಲರ ಚಿತ್ತ ಇಂದಿನ ಫಲಿತಾಂಶದತ್ತ ಹೊರಳಿದೆ.

ಡಿಸಿ ಸಿಂಧೂ ಬಿ. ರೂಪೇಶ್‌ ಮತ ಎಣಿಕೆ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.