‘ಸಹೋದರತೆಯೇ ಜೀವನದ ಮೂಲಮಂತ್ರ’


Team Udayavani, Jan 14, 2019, 5:40 AM IST

14-january-6.jpg

ಮಹಾನಗರ : ಭಾರತ ಸಂಸ್ಕಾರ ಸಂಸ್ಕೃತಿಯ ತವರು ನೆಲವಾಗಿದ್ದು, ಇಲ್ಲಿ ಜಾತಿಧರ್ಮ ಮೀರಿ ಸಹೋದರತೆಯಿಂದ ಬದುಕುವ ನೆಲೆಯಲ್ಲಿ ಸರ್ವರೂ ಶ್ರಮಿಸಬೇಕು. ಸಹೋದರತೆಯೇ ಜೀವನದ ಮೂಲಮಂತ್ರವಾಗಲಿ ಎಂದು ಬಹುಭಾಷಾ ಗಾಯಕ ಡಾ| ಕೆ.ಜೆ. ಯೇಸುದಾಸ್‌ ಕರೆ ನೀಡಿದ್ದಾರೆ.

ಮಂಗಳೂರಿನ ಕೇರಳ ಸಮಾಜಂ ವತಿಯಿಂದ ಶುಕ್ರವಾರ ನಗರದ ಪುರಭವನದಲ್ಲಿ ಆಯೋಜಿಸಲಾದ ಕ್ರಿಸ್ಮಸ್‌ ಮತ್ತು ಹೊಸ ವರ್ಷಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಹಿರಿಯರು ಪಾಲನೆ ಮಾಡುತ್ತ ಬಂದಿರುವ ಸಂಸ್ಕೃತಿ ಸಂಸ್ಕಾರಗಳನ್ನು ಎಳೆಯ ಮನಸುಗಳು ಪಾಲನೆ ಮಾಡುತ್ತ ಬರಬೇಕು. ಬಾಹ್ಯವಾಗಿರುವ ಸಂಸ್ಕೃತಿಗೆ ಮೊರೆಹೋಗಿ ಭಾರತೀಯತೆಯನ್ನು ಮರೆಯುವ ಪರಿಸ್ಥಿತಿ ಎದುರಾಗಬಾರದು. ಲೋಕಾ ಸಮಸ್ತಾ ಸುಖೀನೋ ಭವಂತು ಎಂಬ ತತ್ತ್ವದಡಿಯಲ್ಲಿ ಸಹೋದರ ತೆಯಿಂದ ಬಾಳಿ ಬದುಕುವ ಮನೋಕಲ್ಪನೆ ನಮ್ಮದಾಗಬೇಕು ಎಂದರು. ‘ಜಾತಿ ಬೇಧಂ ಮತ ದ್ವೇಷಂ’ ಎಂಬ ಸಾಹಿತ್ಯದ ಹಾಡನ್ನು ಭಾಷಣದ ಮಧ್ಯೆ ಯೇಸುದಾಸ್‌ ಹಾಡಿದರು.

ಸಮ್ಮಾನ
ಇದೇ ವೇಳೆ ಕೇರಳ ಸಮಾಜಂ ಮಾಜಿ ಅಧ್ಯಕ್ಷ ಕೆ.ಎಂ. ಸಚ್ಚೀಂದ್ರನಾಥ್‌ ಅವರನ್ನು ಸಮ್ಮಾನಿಸಲಾಯಿತು. ಕೇರಳ ಸಮಾಜಂನ ಅಧ್ಯಕ್ಷ ಟಿ.ಕೆ. ರಾಜನ್‌ ಅಧ್ಯಕ್ಷತೆ ವಹಿಸಿದ್ದರು. ಗೋಕುಲಂ ಗ್ರೂಪ್‌ನ ಅಧ್ಯಕ್ಷ ಗೋಕುಲಂ ಗೋಪಾಲನ್‌, ಕೋಸ್ಟ್‌ಗಾರ್ಡ್‌ ಕಮಾಂಡರ್‌ ಡಿಐಜಿ ಎಸ್‌.ಎಸ್‌. ದಸಿಲ, ಸಂಗೀತ ನಿರ್ದೇಶಕ ಗುರುಕಿರಣ್‌, ಉದ್ಯಮಿ ಜೆಮಿನಿ ಶಂಕರ್‌, ಉದ್ಯಮಿ ವಿ. ಕರುಣಾಕರನ್‌, ಚಂದ್ರನ್‌ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಫರ್ಧಾ ಕಾರ್ಯಕ್ರಮಗಳಲ್ಲಿ ವಿಜೇತರಿಗೆ ಪ್ರಶಸ್ತಿ ವಿತರಣೆ ನಡೆಯಿತು. ಕಾರ್ಯಕ್ರಮಕ್ಕೂ ಮುನ್ನ ಕೇರಳದ ಪ್ರಸಿದ್ಧ ಕಲಾವಿದರಿಂದ ‘ಕಲಾಸಂಧ್ಯ’ ಸಂಗೀತ ರಸಮಂಜರಿ ನಡೆಯಿತು. ಕೇರಳ ಸಮಾಜಂನ ಮ್ಯಾಕ್ಸಿಂ ಸೆಬಾಸ್ಟಿಯನ್‌ ಸ್ವಾಗತಿಸಿದರು. ಗೋಪಾಲನ್‌ ನಾಯರ್‌ ವಂದಿಸಿದರು

ಪಿತೃ ವಾಕ್ಯ ಪರಿಪಾಲಕ!
ಯೇಸುದಾಸ್‌ ಮಾತನಾಡಿ, ತಂದೆ-ತಾಯಿ ಕಣ್ಣಿಗೆ ಕಾಣುವ ದೇವರು. ಅವರು ಮಾನವೀಯತೆ, ಸಹೋದರತೆಯ ಬಗ್ಗೆ ತಿಳಿಸಿಕೊಡುತ್ತಾರೆ. ಹೀಗಾಗಿ ತಂದೆ, ತಾಯಿ ಹೇಳಿದ ಮಾತಿಗೆ ಒಂದಿನಿತೂ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು. ನನಗೆ ನನ್ನ ತಂದೆ ಎರಡು ಮಾತು ಹೇಳಿ, ಪಾಲಿಸುವಂತೆ ಸೂಚಿಸಿದ್ದರು. ಯಾವುದೇ ಪಕ್ಷದ ಜತೆಗೆ ಸೇರಬಾರದು ಮತ್ತು ಯಾವುದೇ ಸಂಘಟನೆಗಳಲ್ಲಿ ತೊಡಗಿಗೊಳ್ಳಬಾರದು ಎಂದಿದ್ದರು. ಹೀಗಾಗಿ ಬೇರೆ ಬೇರೆ ಪಕ್ಷದವರು ವಿನಂತಿಸಿದರೂ ಯಾವುದೇ ಪಕ್ಷದ ಜತೆಗೆ ಗುರುತಿಸಿಕೊಂಡಿಲ್ಲ. ಸಂಘಟನೆಗಳ ಜತೆಗೆ ತೊಡಗಿಸಿಕೊಂಡಿಲ್ಲ. ಸಹೋದರತೆ, ಮಾನವೀಯತೆಯ ಕಾರ್ಯದಲ್ಲಿ ಮಾತ್ರ ಜತೆಯಾಗಿದ್ದೇನೆ ಎಂದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.