ಮಂಗಳೂರು ಉತ್ತರ: ಕಾಂಗ್ರೆಸ್ ಮೆರವಣಿಗೆ
Team Udayavani, Apr 24, 2018, 12:21 PM IST
ಉರ್ವಸ್ಟೋರ್ : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಯಿದಿನ್ ಬಾವಾ ಸೋಮವಾರ ಕಾಂಗ್ರೆಸ್ ಕಾರ್ಯ ಕರ್ತರ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಬೆಳಗ್ಗೆ 7 ಗಂಟೆಗೆ ಕೃಷ್ಣಾಪುರ ಮಸೀದಿ, ಗಣೇಶಪುರ ದೇವಸ್ಥಾನ, ಸುರತ್ಕಲ್ ಸೇಕ್ರೆಡ್ ಹಾರ್ಟ್ ಚರ್ಚ್, ಅಡ್ಕ ಮಸೀದಿ, ಮಂಗಳಾದೇವಿ, ಕುದ್ರೋಳಿ ಗೋಕರ್ಣ ನಾಥ, ಉರ್ವ ಮಾರಿಯಮ್ಮ ದೇವಸ್ಥಾನ, ಗುರುದ್ವಾರ ಸಹಿತ ಪುಣ್ಯ ಕ್ಷೇತ್ರಗಳಲ್ಲಿ ಪ್ರಾರ್ಥನೆ ಮಾಡಿ, ಉರ್ವ ಮೈದಾನದಿಂದ ಲೇಡಿಹಿಲ್, ಲಾಲ್ ಬಾಗ್ ಆಗಿ ಮೆರವಣಿಗೆಯಲ್ಲಿ ಬಂದ ಬಾವಾ ಅವರು ಬಳಿಕ ಸೈಕಲ್ನಲ್ಲಿ ಪಾಲಿಕೆಗೆ ಬಂದು ನಾಮಪತ್ರ ಸಲ್ಲಿಸಿದರು.
ಬೃಹತ್ ಬಹಿರಂಗ ಸಭೆ
ನಾಮಪತ್ರಕ್ಕೂ ಮುನ್ನ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಉಸ್ತುವಾರಿ ಬೆಳಪು ದೇವಿಪ್ರಸಾದ್ ಶೆಟ್ಟಿ, ಶಾಸಕ ಮೊಯಿದಿನ್ ಬಾವಾ ಮಾತನಾಡಿದರು. ಬಾವಾ ಅವರು ಕುಟುಂಬ ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯಲ್ಲಿ ಮೇಯರ್ ಭಾಸ್ಕರ್ ಮೊಯಿಲಿ, ಮೆಲ್ವಿನ್, ಮಲ್ಲಿಕಾ ರ್ಜುನ್, ಆನಂದ ಅಮೀನ್, ಮಂಗಳೂರು ಬಾವಾ, ಸಚಿನ್ ಅಡಪ, ನವೀನ್ ಡಿ’ಸೋಜಾ, ಗಿರೀಶ್ ಆಳ್ವ,ನಾಗವೇಣಿ, ಬೆಳಪು ದೇವಿಪ್ರಸಾದ್ ಶೆಟ್ಟಿ, ದೀಪಕ್ ಪೂಜಾರಿ, ಶಶಿಧರ್ ಹೆಗ್ಡೆ, ಹರಿನಾಥ್ ಸುರೇಂದ್ರ ಕಾಂಬ್ಳಿ, ಪುರುಷೋತ್ತಮ್ ಚಿತ್ರಾಪುರ, ಸದಾಶಿವ ಶೆಟ್ಟಿ, ಕವಿತಾ ಸನಿಲ್, ಪ್ರತಿಭಾ ಕುಳಾಯಿ, ಶಕುಂತಳಾ ಕಾಮತ್, ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್