ಮಂಗಳೂರು ಉತ್ತರ: ಹಲವು ಕಾಂಗ್ರೆಸಿಗರು ಬಿಜೆಪಿಗೆ


Team Udayavani, May 2, 2018, 9:41 AM IST

mangalorer-north.jpg

ಪಣಂಬೂರು: ಕಾಂಗ್ರೆಸ್‌ ಸರಕಾರದ ಹಿಂದೂ ವಿರೋಧಿ ನೀತಿಯಿಂದ ಬೇಸತ್ತು ಹಲವಾರು ಮಂದಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡರು. ಕಾವೂರು ಮುಲ್ಲಕಾಡಿನ ಫೋರ್ತ್‌ ಮೈಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಭರತ್‌ ಶೆಟ್ಟಿ ವೈ. ಅವರು ಬಿಜೆಪಿ ಧ್ವಜ ನೀಡುವ ಮೂಲಕ ಬರಮಾಡಿಕೊಂಡರು.

ಈ ಸಂದರ್ಭ ಮಾತನಾಡಿದ ಅವರು, ಹಿಂದೂ ವಿರೋಧಿ ಆಡಳಿತದ ಬಿಸಿ ಕಾಂಗ್ರೆಸ್‌ಗೆ ತಟ್ಟಲಿದೆ. ಓಲೈಕೆ ರಾಜಕಾರಣ ಶಾಶ್ವತ ಅಲ್ಲ. ಸರ್ವರನ್ನೂ ಒಗ್ಗೂಡಿ ಕರೆದುಕೊಂಡು ಹೋಗುವುದೇ ಉತ್ತಮ ಆಡಳಿತದ ಲಕ್ಷಣ. ಕಾಂಗ್ರೆಸ್‌ ಸರಕಾರ ಬಿಜೆಪಿಯನ್ನು ವಿರೋಧಿಸುವ ಭರದಲ್ಲಿ ಪಕ್ಷದ ಮತದಾರರನ್ನು, ಪಕ್ಷಕ್ಕೆ ಬೆಂಬಲ ನೀಡುವವರ ವಿರುದ್ಧ ಆಡಳಿತಾತ್ಮಕವಾಗಿ ಮನಃಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ. ಬಹುಸಂಖ್ಯಾಕರನ್ನು ತುಳಿದು ಯಾವುದೇ ರಾಜಕೀಯ ಪಕ್ಷ ಬಹುದಿನ ಬಾಳುವುದು ಅಸಾಧ್ಯ. ಬಿಜೆಪಿ ಸರ್ವ ಧರ್ಮಗಳನ್ನು ಸಮಾನವಾಗಿ ಭಾವೈಕ್ಯತೆಯಿಂದ ಕಾಣುತ್ತದೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಶಾಂತಿ ಸುವ್ಯವಸ್ಥೆ ಸೌಹಾರ್ದದಿಂದ ಬಾಳಬಹುದು ಎಂಬುದನ್ನು ಬಿಜೆಪಿ ಆಡಳಿತದಲ್ಲಿ ತೋರಿಸಿಕೊಟ್ಟಿದೆ ಎಂದರು.

ಬಿಜೆಪಿ ಅಧಿಕಾರದಲ್ಲಿ ಇರುವಾಗ ಯಾವುದೇ ಕೋಮು ಗಲಭೆ ಆದ ಉದಾಹರಣೆಗಳಿಲ್ಲ. ಆದರೆ ಕಾಂಗ್ರೆಸ್‌ ಬಂದ ಬಳಿಕ ನೂರಾರು ಘಟನೆ ಆದ ವರದಿಯಿದೆ. ತುಷ್ಟೀಕರಣ ನೀತಿಯಿಂದ ಇಂತಹ ಸಮಸ್ಯೆಗಳು ಆಗುತ್ತಿವೆ. ಮತದಾರರು ಪ್ರಬುದ್ಧರಾಗಿದ್ದು ಇಂತಹ ಕೃತ್ಯಗಳಿಗೆ ಭವಿಷ್ಯದಲ್ಲಿ ಅವಕಾಶ ಮಾಡಿಕೊಡಲಾರರು ಎಂಬ ವಿಶ್ವಾಸವಿದೆ. ಬಿಜೆಪಿ ಆಡಳಿತಕ್ಕೆ ಬಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಖಚಿತ ಎಂದರು.

ಅಭಿವೃದ್ಧಿ ಪ್ರಚಾರದಲ್ಲಿ ಮಾತ್ರ
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತ ವಾಗಿದೆ. ಸ್ಮಾರ್ಟ್‌ ಸಿಟಿ ಅನುದಾನ ಬಳಕೆಯಾಗಿಲ್ಲ. ಕಿರು ಜೆಟ್ಟಿ ನಿರ್ಮಾಣ ಕೇವಲ ಹೇಳಿಕೆಗೆ ಸೀಮಿತವಾಗಿದೆ. ನಿರ್ಮಾಣಕ್ಕೆ ರಾಜ್ಯದ ಅನುದಾನ ನೀಡುವಲ್ಲಿ ಕಾಂಗ್ರೆಸ್‌ ಆಡಳಿತ ವಿಫಲವಾಗಿದೆ. ಶಾಸಕರು ಜಾತಿ ಓಲೈಕೆ ಮಾಡುವ ಮೂಲಕ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಸೀರೆ ಹಂಚುವ ಮೂಲಕ, ತನ್ನ ಭಾವಚಿತ್ರವಿರುವ ಪುಸ್ತಕಗಳನ್ನು  ಮಕ್ಕಳಿಗೆ ಹಂಚುವ ಮೂಲಕ ಅಭಿವೃದ್ಧಿ ಮಾಡದೆ  ಗಿಮಿಕ್‌ ಮಾಡುವ ಮೂಲಕ ಮತದಾರರನ್ನು ಓಲೈಸುವ ಯತ್ನ ನಡೆಸಿದ್ದಾರೆ ಎಂದು ಟೀಕಿಸಿದರು. 

ಯುವ ಮತದಾರರು ಪಕ್ಷದ ಬೆನ್ನೆಲುಬು
ಬಿಜೆಪಿ ಪರ ಯುವ ಮತದಾರರ ಒಲವು ಹೆಚ್ಚಾಗಿದೆ. ಬಿಜೆಪಿಗೆ ಯುವ ಶಕ್ತಿಯೇ ಬೆನ್ನೆಲುಬು. ಸಾರ್ವಜನಿಕ ಪ್ರಚಾರ ಸಭೆಗಳಲ್ಲಿ ಯುವ ಸಮೂಹವೇ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಪ್ರೋತ್ಸಾಹ ನೀಡುತ್ತಿದ್ದಾರೆ. ಈ ಬಾರಿ ಉತ್ತರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೇರಿಸಲು ಸಂಕಲ್ಪ ತೊಟ್ಟಿದ್ದಾರೆ. ಭವಿಷ್ಯದಲ್ಲಿ ಉದ್ಯೋಗ, ಮಹಿಳೆಯರಿಗೆ ರಕ್ಷಣೆಗಾಗಿ ಹೆಲ್ಪ್ಲೈನ್‌, ಐಟಿ ಹಬ್‌ ಮತ್ತಿತರ ಯೋಜನೆ ತರುವ ಮೂಲಕ ಸಮೃದ್ಧ, ಸುರಕ್ಷಿತ, ಭಾವೈಕ್ಯದ ಮಂಗಳೂರು ಉತ್ತರ ಕ್ಷೇತ್ರವನ್ನು ನಿರ್ಮಿಸುವ ಸಂಕಲ್ಪ ಮಾಡಿದ್ದೇನೆ ಎಂದು ಭರತ್‌ ಶೆಟ್ಟಿ ಹೇಳಿದರು.
ಸುಚೇತನ್‌,ರಾಜೇಶ್‌ ಕೊಟ್ಟಾರಿ, ಕಿರಣ್‌ ಕುಮಾರ್‌, ರಮೇಶ್‌ ಆಚಾರ್ಯ, ಆನಂದ್‌ ಪಾಂಗಳ, ಶೇಖರ್‌, ರಕ್ಷಿತ್‌ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.